Tuesday, September 26, 2023

ಅಕ್ರಮ ಭೂ ಮಂಜೂರಾತಿ ಪ್ರಕರಣ : ಮಾಜಿ ತಹಶೀಲ್ದಾರ್ ಅರೆಸ್ಟ್.!

ವಿವೇಕ ವಾರ್ತೆ : ಚಿಕ್ಕಮಗಳೂರು ಜಿಲ್ಲೆಯ ಕಡೂರು ಮಾಜಿ ತಹಶೀಲ್ದಾರ್ ನ್ನು ಸರಕಾರಿ ಬೀಳು ಭೂಮಿಯನ್ನೇ ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವ ಆರೋಪದ ಮೇಲೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಮಾಜಿ ತಹಶೀಲ್ದಾರ್ ಜೆ.ಉಮೇಶ್ ಎಂಬುವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇವರ ಮೇಲೆ ಕಡೂರು ತಾಲೂಕಿನ ಬೀರೂರು ಹೋಬಳಿಯ ಉಳಿನಾಗರು ಗ್ರಾಮದ ಸರ್ವೆ ನಂ. 43ರಲ್ಲಿ 5.04 ಎಕರೆ ಸರಕಾರಿ ಬೀಳು ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವ ಆರೋಪವಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ತರೀಕೆರೆ ಉಪವಿಭಾಗಾಧಿಕಾರಿ ಡಾ.ಕೆ.ಜೆ. ಕಾಂತರಾಜ್ ಅವರು ಕರ್ನಾಟಕ ಭೂ ಕಂದಾಯ ಕಾಯ್ದೆಯಡಿ ತಹಶೀಲ್ದಾರ್ ಜೆ.ಉಮೇಶ್ ಹಾಗೂ ಇಬ್ಬರು ಕಂದಾಯಾಧಿಕಾರಿಗಳ ವಿರುದ್ಧ ದೂರು ನೀಡಿದ್ದರು. ಇದೀಗ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಉಮೇಶ್ ನನ್ನು ಬೆಂಗಳೂರಿನಲ್ಲಿ ಕಡೂರು ಪೊಲೀಸರಿಂದ ಬಂಧಿಸಿದ್ದಾರೆ.

ಕಿರಿಯ ಶ್ರೇಣಿ ಕೆಎಎಸ್‌ ಆಧಿಕಾರಿ ಆಗಿರುವ ಜೆ.ಉಮೇಶ್, ಸದ್ಯ ಕಾರವಾರದಲ್ಲಿ ಸೀಬರ್ಡ್‌ ನೌಕಾನೆಲೆಯ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

RELATED ARTICLES

ಹಳೆಯ ವಿದ್ಯಾರ್ಥಿಗಳೇ ಕೆಬಿಎನ್ ವಿವಿಯ ಬೆನ್ನೆಲುಬು : ಡಾ. ನಿಶಾತ ಆರೀಫ್ ಹುಸೇನಿ

ವಿವೇಕವಾರ್ತೆ : ಯಾವುದೇ ವಿಶ್ವವಿದ್ಯಾಲಯದ ಗುಣಮಟ್ಟ ಹಳೆಯ ವಿದ್ಯಾರ್ಥಿಗಳಿಂದಲೇ ತಿಳಿಯುತ್ತದೆ. ಹಳೆಯ ವಿದ್ಯಾರ್ಥಿಗಳ ಯಶಸ್ಸು ವಿವಿಗಳ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುತ್ತದೆ ಎಂದು ಖಾಜಾ ಬಂದಾನವಾಜ್ ವಿವಿಯ ಕಲಾ, ಭಾಷಾ, ಮಾನವಕತೆ, ಸಮಾಜ ವಿಜ್ಞಾನ...

ಚೈತ್ರಾ ಕಾರು ಮುಧೋಳದಲ್ಲಿ ಪತ್ತೆ..! ಇದರ ಹಿಂದಿದೆ ಇಂಟ್ರೆಸ್ಟಿಂಗ್ ಸ್ಟೋರಿ

ವಿವೇಕವಾರ್ತೆ :ಉದ್ಯಮಿಗೆ ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ(Chaitra Kundapur) ಅವರ ಆಸ್ತಿಯನ್ನು ಸಿಸಿಬಿ (CCB) ಮುಟ್ಟುಗೋಲು ಹಾಕಿಕೊಂಡಿದೆ . ಇದರ ಜೊತೆಗೆ ಇನ್ನೊಂದು ಸ್ಪೋಟಕ ಮಾಹಿತಿ ಸಿಕ್ಕಿದೆ. ಈ ವಂಚನೆ...

ಸಂಕ್ರಾಂತಿ ವೇಳೆಗೆ ರಾಜ್ಯದಲ್ಲಿ ಕೆಲ ಅವಘಢ ; ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ : ಕೋಡಿಮಠ ಶ್ರೀ.!

ವಿವೇಕ ವಾರ್ತೆ : ಲೋಕಸಭಾ ಚುನಾವಣೆ ಬಗ್ಗೆ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರಮುಖ ಭವಿಷ್ಯವೊಂದನ್ನು ನುಡಿದಿದ್ದಾರೆ. https://youtu.be/u6lq_pUsNkA?si=YWlDzZ4FEqGXLL4M ಮುಂದಿನ ಚುನಾವಣೆಯಲ್ಲಿ ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ. ಅಮಾವಾಸ್ಯೆಯ ಬಳಿಕ ಕರ್ನಾಟಕದಲ್ಲಿ ಭಾರೀ...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!