ವಿವೇಕ ವಾರ್ತೆ : ಇನ್ನೇನು ತಾಳಿ ಕಟ್ಟಲು ಮುಹೂರ್ತ ಕೂಡಿಬಂತು ಎನ್ನುವಷ್ಟರಲ್ಲಿ ಮದುವೆ ಬೇಡ ಎಂದು ವಧುವೊಬ್ಬಳು ಹಸೆಮಣೆಯಿಂದ ಮೇಲೆದ್ದು ಹೋದ ನಾಟಕೀಯ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೊಳಾಲ ಗ್ರಾಮದಲ್ಲಿ ನಡೆದಿದೆ.
ದಿವ್ಯಾ ಹೆಸರಿನ ವಧು, ತಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ. ಹೀಗಾಗಿ ನನಗೆ ಮದುವೆ ಬೇಡ ಎಂದು ಮದುವೆ ಮುರಿದು ಕಲ್ಯಾಣ ಮಂಟಪದಿಂದ ಹೊರನಡೆದಿದ್ದಾಳೆ.
ಕೊಳಾಲ ಗ್ರಾಮದ ಕೆ.ಸಿ.ಎನ್. ಕನ್ವೆನ್ಷನ್ ಹಾಲ್ನಲ್ಲಿ ಇಂದು ವಿವಾಹ ಸಮಾರಂಭ ನಡೆಯುತ್ತಿತ್ತು. ವರ ವೆಂಕಟೇಶ್ ಜತೆ ಮದುವೆ ನಡೆಯುತ್ತಿತ್ತು.
ನಿನ್ನೆ ರಾತ್ರಿ ರಿಸೆಪ್ಷನ್ನಲ್ಲಿ ದಿವ್ಯಾ, ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟಿದ್ದಳು. ಆದರೆ, ಇಂದು ಬೆಳಗ್ಗೆ ಮುಹೂರ್ತಕ್ಕೆ ಬರುತ್ತಿದ್ದಂತೆ ಮದುವೆ ಬೇಡ ಎಂದು ಮನಸ್ಸು ಬದಲಿಸಿದ್ದಾಳೆ.
ವರ ವೆಂಕಟೇಶ್, ದೊಡ್ಡಬಳ್ಳಾಪುರದ ತಾಲೂಕಿನ ಮೂಡ್ಲಕಾಳೇನಹಳ್ಳಿಯ ಸಿದ್ದಮ್ಮ ಮತ್ತು ಗೋವಿಂದರಾಜು ಪುತ್ರ. ವಧು ದಿವ್ಯಾ ನೆಲಮಂಗಲ ತಾಲೂಕಿನ ದೊಡ್ಡೆಬೆಲೆ ಗ್ರಾಮದ ಅಂಜನಮ್ಮ ನರಸಿಂಹಮೂರ್ತಿ ಪುತ್ರಿ. ವಧು ಮದುವೆ ಬೇಡ ಅಂತ ಉಲ್ಟಾ ಹೊಡೆಯುತ್ತಿದ್ದಂತೆ ಕಲ್ಯಾಣ ಮಂಟಪದಲ್ಲಿ ಗದ್ದಲ ಉಂಟಾಗಿದೆ.