ವಿವೇಕ ವಾರ್ತೆ : ಬೆಂಗಳೂರಿನ ಮಹಾರಾಣಿ ಕಾಲೇಜು ಕ್ಯಾಂಪಸ್ನಲ್ಲಿ ಪ್ರೊಫೆಸರ್ವೊಬ್ಬರ ಎಡವಟ್ಟು ಚಾಲನೆಯಿಂದಾಗಿ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ.
ಅಶ್ಚಿನಿ (19) ಎಂಬ ವಿದ್ಯಾರ್ಥಿನಿ ತಲೆ ಹಾಗೂ ಕಾಲಿಗೆ ಗಾಯವಾಗಿದೆ. ಮತ್ತೊಬ್ಬ ವಿದ್ಯಾರ್ಥಿನಿ ನಂದುಪ್ರಿಯಾ ಗಾಯಗೊಂಡಿದ್ದು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇಂಗ್ಲೀಷ್ ಉಪನ್ಯಾಸಕ ಎಚ್.ನಾಗರಾಜ್ ಅವರು ಓವರ್ ಸ್ಪೀಡ್ ಆಗಿ ಕಾರು ಓಡಿಸಿಕೊಂಡು ಕ್ಯಾಂಪಸ್ಗೆ ಬಂದಿದ್ದಾರೆ. ಈ ವೇಳೆ ಬ್ರೇಕ್ ಹಾಕಲು ಹೋಗಿ ಎಕ್ಸಿಲೇಟರ್ ಒತ್ತಿದ್ದಾರೆ.
ಪರಿಣಾಮ ಕಾರು ನಿಯಂತ್ರಣ ತಪ್ಪಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬಳಿಕ ಕಾರು ಮರಕ್ಕೆ ಗುದ್ದಿದೆ. ಘಟನೆಯಲ್ಲಿ ಸ್ಕೂಟರ್ವೊಂದಕ್ಕೆ ಹಾನಿಯಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಡಿಸಿಪಿ ಸಚಿನ್ ಘೋರ್ಷಣೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಬೆಳಗ್ಗೆ ಪ್ರೊಫೆಸರ್ ನಾಗರಾಜ್ ಅವರು ಕಾರಿನಲ್ಲಿ ಬರುವಾಗ ಬ್ರೇಕ್ ಬದಲು ಎಕ್ಸಿಲೇಟರ್ ಪ್ರೆಸ್ ಮಾಡಿದ್ದಾರೆ. ಹೀಗಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿಸಿದ್ದಾರೆ.