ಕಾಲೇಜು ಆವರಣದಲ್ಲಿ ಭೀಕರ ಅಪಘಾತ : ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ.!

Published on

spot_img
spot_img

ವಿವೇಕ ವಾರ್ತೆ : ಬೆಂಗಳೂರಿನ ಮಹಾರಾಣಿ ಕಾಲೇಜು ಕ್ಯಾಂಪಸ್‌ನಲ್ಲಿ ಪ್ರೊಫೆಸರ್‌ವೊಬ್ಬರ ಎಡವಟ್ಟು ಚಾಲನೆಯಿಂದಾಗಿ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ.

ಅಶ್ಚಿನಿ (19) ಎಂಬ ವಿದ್ಯಾರ್ಥಿನಿ ತಲೆ ಹಾಗೂ ಕಾಲಿಗೆ ಗಾಯವಾಗಿದೆ. ಮತ್ತೊಬ್ಬ ವಿದ್ಯಾರ್ಥಿನಿ ನಂದುಪ್ರಿಯಾ ಗಾಯಗೊಂಡಿದ್ದು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇಂಗ್ಲೀಷ್ ಉಪನ್ಯಾಸಕ ಎಚ್‌.ನಾಗರಾಜ್ ಅವರು ಓವರ್ ಸ್ಪೀಡ್‌ ಆಗಿ ಕಾರು ಓಡಿಸಿಕೊಂಡು ಕ್ಯಾಂಪಸ್‌ಗೆ ಬಂದಿದ್ದಾರೆ. ಈ ವೇಳೆ ಬ್ರೇಕ್‌ ಹಾಕಲು ಹೋಗಿ ಎಕ್ಸಿಲೇಟರ್ ಒತ್ತಿದ್ದಾರೆ.

ಪರಿಣಾಮ ಕಾರು ನಿಯಂತ್ರಣ ತಪ್ಪಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬಳಿಕ ಕಾರು ಮರಕ್ಕೆ ಗುದ್ದಿದೆ. ಘಟನೆಯಲ್ಲಿ ಸ್ಕೂಟರ್‌ವೊಂದಕ್ಕೆ ಹಾನಿಯಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಡಿಸಿಪಿ ಸಚಿನ್ ಘೋರ್ಷಣೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಬೆಳಗ್ಗೆ ಪ್ರೊಫೆಸರ್ ನಾಗರಾಜ್ ಅವರು ಕಾರಿನಲ್ಲಿ ಬರುವಾಗ ಬ್ರೇಕ್ ಬದಲು ಎಕ್ಸಿಲೇಟರ್‌ ಪ್ರೆಸ್ ಮಾಡಿದ್ದಾರೆ. ಹೀಗಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿಸಿದ್ದಾರೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!