ಕುಡಿದ ಮತ್ತಿನಲ್ಲಿ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪಾಪಿ ಗಂಡ.!

Published on

spot_img
spot_img

ವಿವೇಕ ವಾರ್ತೆ : ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಎಂಬಲ್ಲಿ ಕುಡಿದ ಮತ್ತಿನಲ್ಲಿ ತನ್ನ ಪತ್ನಿಯನ್ನು ಬರ್ಬರವಾಗಿ ಪತಿ ಹತ್ಯೆಗೈದಿರುವ ಘಟನೆ ನಡೆದಿದೆ.

ಸೊಲೋಚನಾ ಮೃತ ದುರ್ದೈವಿ. ಈಕೆಯ ಪತಿ ನಾಗರಾಜಪ್ಪ (48) ಘಟನೆ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.

ಆರೋಪಿ ನಾಗರಾಜಪ್ಪ ಪ್ರತಿನಿತ್ಯ ಕುಡಿದು ಬಂದು ತನ್ನ ಹೆಂಡತಿಯ ಜೊತೆ ಜಗಳವಾಡುತ್ತಿದ್ದ. ಶುಕ್ರವಾರ ಮಧ್ಯಾಹ್ನವೂ ಆರೋಪಿ ಕುಡಿದ ಮತ್ತಿನಲ್ಲಿ ತನ್ನ ಹೆಂಡತಿಯ ಜೊತೆ ಜಗಳವಾಡಿದ್ದು, ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.

ಈ ವೇಳೆ ಆರೋಪಿ ತನ್ನ ಪತ್ನಿಯನ್ನು ಮನಸೋಇಚ್ಛೆ ಥಳಿಸಿ ಹತ್ಯೆ ಮಾಡಿದ್ದಾನೆ. ಕೊಲೆ ಮಾಡಿದ ನಂತರ ಆರೋಪಿ ನಡೆದ ಘಟನೆ ಬಗ್ಗೆ ಪೊಲೀಸರಿಗೆ ವಿವರಿಸಿ ಶರಣಾಗಿದ್ದಾನೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಂತೇಬೆನ್ನೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!