Tuesday, September 26, 2023

ಗೋಕಾಕ: ಅಂತರರಾಜ್ಯ ಕಳ್ಳರ ಬಂಧನ ರೂ 55,60,000 /- ಮೌಲ್ಯದ ಚಿನ್ನಾಭರಣಗಳು ಮತ್ತು ಬೆಳ್ಳಿ ಆಭರಣಗಳ ವಶ

ವಿವೇಕವಾರ್ತೆ – 11-2022 ರಂದು ಗೋಕಾಕದ ವಿವೇಕಾನಂದ ನಗರದ ತೋಳಿನವರ ಇವರ ಮನೆಯಲ್ಲಿ ಚಿನ್ನಾಭರಣಗಳು ಕಳ್ಳತನವಾಗಿದ್ದು ಅಲ್ಲದೇ ದಿನಾಂಕಃ ಲಕ್ಷ್ಮಣ 23-05-2023 ರಂದು ತವಗದ ಶ್ರೀ ಬೀರಸಿದ್ದೇಶ್ವರ ಗುಡಿಯಲ್ಲಿ ಚಿನ್ನಾಭರಣಗಳು ಕಳ್ಳತನವಾಗಿದ್ದು, ಇವುಗಳ ಬಗ್ಗೆ ಗೋಕಾಕ ಶಹರ ಮತ್ತು ಗೋಕಾಕ ಗ್ರಾಮೀಣ ಪೊಲೀಸ್ ರಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು.

ಸದರಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಮಾನ್ಯ ಎಸ್.ಪಿ.ಸಾಹೇಬರು ಬೆಳಗಾವಿ ಜಿಲ್ಲೆರವರು ಪ್ರಕರಣಗಳ ಪತ್ತೆಗಾಗಿ ಶ್ರೀ ಗೋಪಾಲ .ಆರ್.ರಾಠೋಡ ಸಿ.ಪಿ.ಐ ಗೋಕಾಕ ವೃತ್ತ ಇವರ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದು, ಎಸ್‌.ಪಿ.ಬೆಳಗಾವಿ ಹಾಗೂ ಸದರಿ ತನಿಖಾ ತಂಡವು ದೂದಪೀ‌.ಎಚ್.ಮುಲ್ಲಾ ಡಿ.ಎಸ್‌.ಪಿ. ಎಂ.ವೇಣುಗೋಪಾಲ ಹೆಚ್ಚುವರಿ ಗೋಕಾಕ ಉಪವಿಭಾಗರವರ ಮಾರ್ಗದರ್ಶನದಲ್ಲಿ ಸದರಿ ಪ್ರಕರಣಗಳಲ್ಲಿ ತನಿಖೆ ಕೈಕೊಂಡು ದಿನಾಂಕ: 30-06-2023 ರಿಂದ ದಿನಾಂಕ 24-07-2023 ರವರೆಗೆ 08 ಜನ ಆರೋಪಿತರನ್ನು ಬಂಧಿಸಿ, ಕಳುವಾಗಿದ್ದ 55,60,000 /- ಮೌಲ್ಯದ 810 ಗ್ರಾಂ ತೂಕದ ಚಿನ್ನಾಭರಣಗಳು ಮತ್ತು 8.5 ಕೆ.ಜಿ. ತೂಕದ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದು, ಗೋಕಾಕ ಶಹರ ಮತ್ತು ಗೋಕಾಕ ಗ್ರಾಮೀಣ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ. ಪೊಲೀಸ್ ಠಾಣೆಗಳ ಅಪರಾಧ

ಅಂತರರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾದ ಶ್ರೀ ಗೋಪಾಲ ಆರ್. ರಾಠೋಡ ಸಿ.ಪಿ.ಐ ಗೋಕಾಕ ವೃತ್ತ, ಶ್ರೀ ಬಿ.ಆರ್.ಗಡ್ಡಕಾರ ಪಿ.ಐ ಸಿ.ಇ.ಎನ್.ಬೆಳಗಾವಿ, ಶ್ರೀ ಎಮ್.ಆರ್.ಎಮ್.ತಹಶೀಲ್ದಾರ ಪಿ.ಎ ಹುಕ್ಕೇರಿ, ಶ್ರೀ ಕಿರಣ ಮೋಹಿತೆ ಪಿ.ಎಸ್.ಐ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಎಮ್.ಡಿ.ಘೋರಿ ಪಿ.ಎಸ್.ಐ ಗೋಕಾಕ ಶಹರ ಪೊಲೀಸ ಠಾಣೆ ಹಾಗೂ ಶ್ರೀ ಎಚ್‌.ಡಿ ಯರಝರ್ವಿ ಪಿ.ಎಸ್‌.ಐ ಅಂಕಲಗಿ ಪೊಲೀಸ್ ಠಾಣೆ ಮತ್ತು ಸಿಬ್ಬಂದಿ ಜನರಾದ ಬಿ.ವಿ.ನೇರ್ಲಿ, ವಿ.ಆರ್.ನಾಯಕ, ಡಿ.ಜಿ.ಕೊಣ್ಣೂರ, ಎಸ್.ವಿ.ಕಸ್ತೂರಿ, ಎಸ್‌.ಬಿ.ಮಾನೆಪ್ಪಗೋಳ, ಎಸ್‌.ಎಚ್.ಈರಗಾರ, ಎಮ್.ಬಿ.ಗಿಡಗಿರಿ, ಎಮ್.ಎಮ್.ಹಾಲೋಳ್ಳಿ, ಎಸ್‌.ಎಸ್.ದೇವರ, ಜಿ.ಎಚ್.ಗುಡ್ಡಿ, ಎಮ್.ಬಿ.ತಳವಾರ, ಎಸ್‌.ಬಿ.ಪೂಜೇರಿ, ಹಾಗೂ ಶ್ರೀಮತಿ ಆರ್.ಎಮ್.ತುಬಾಕಿ ಮತ್ತು ಜಿಲ್ಲಾ ಪೊಲೀಸ್ ಕಛೇರಿಯ ಟೆಕ್ನಿಕಲ್ ಸೆಲ್ ವಿಭಾಗದ ಸಚಿನ ಪಾಟೀಲ ಮತ್ತು ವಿನೋದ ಠಕ್ಕನ್ನವರ ಇವರ ಕಾರ್ಯವನ್ನು ಮಾನ್ಯ ಎಸ್.ಪಿ. ಸಾಹೇಬರು ಮುಕ್ತ ಕಂಠದಿಂದ ಶ್ಲಾಘಿಸಿರುತ್ತಾರೆ. ಹಾಗೂ ಇದೇ ರೀತಿ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಲು ಸೂಚಿಸಿರುತ್ತಾರೆ.

ಮಾನ್ಯ ಎಸ್.ಪಿ ಸಾಹೇಬರು ಬೆಳಗಾವಿ ರವರು ಬೆಲೆ ಬಾಳುವ ಚಿನ್ನಾಭರಣಗಳನ್ನು ಬ್ಯಾಂಕ ಲಾಕರಗಳಲ್ಲಿ ಇಡುವಂತೆ ಹಾಗೂ ಮನೆಯಿಂದ ಹೊರಗಡೆ ಹೋದಾಗ ಲಾಕಡ ಹೌಸಗಳ ಬಗ್ಗೆ ಸರಹದ್ದಿನ ಪೊಲೀಸ ಠಾಣೆಗಳಿಗೆ ಮಾಹಿತಿ ನೀಡಲು ಸಾರ್ವಜನಿಕರಲ್ಲಿ ಕೋರಿರುತ್ತಾರೆ.

ವರದಿ- ಗುರುವಚನ ಕುದರಿಮಠ

RELATED ARTICLES

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಸಹಾಯಕ ಸರಕಾರಿ ವಕೀಲರಾಗಿ ಆಯ್ಕೆಯಾದ ಮಹಾವೀರ ಗಂಡವ್ವಗೋಳ ಅವರಿಗೆ ಕನ್ನಡ ಸೇನೆಯಿಂದ ಸತ್ಕಾರ

ವಿವೇಕವಾರ್ತೆ :ಕರ್ನಾಟಕ ಸರ್ಕಾರದ ಅಭಿಯೋಜನೆಯ ಇಲಾಖೆಯಲ್ಲಿ ಸಹಾಯಕ ಸರಕಾರಿ ಅಭಿಯೋಜನೆಕಾರರು-ವ- ಸಹಾಯಕ ಸರಕಾರಿ ವಕೀಲರು (APP) ಆಯ್ಕೆ ಆಗಿ ಬೆಳಗಾವಿ ಜಿಲ್ಲೆಯ ನ್ಯಾಯಾಲಯದಲ್ಲಿ ಅಭಿಯೋಜನೆಕಾರರಾಗಿ ಆಯ್ಕೆಯಾದ ಮಹಾವೀರ ಗಂಡವ್ವಗೋಳ ಅವರಿಗೆ ಕನ್ನಡ ಸೇನೆ...

ಬೆಳಗಾವಿ : ಲಾಡ್ಜ್​​ನಲ್ಲಿ ವೈಶ್ಯಾವಾಟಿಕೆ ದಂಧೆ ; ಇಬ್ಬರು ಯುವತಿಯರ ರಕ್ಷಣೆ.!

ವಿವೇಕವಾರ್ತೆ : ಜಿಲ್ಲೆಯ  ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದೆಂದು ಮಾಹಿತಿ ಲಭ್ಯವಾಗಿದೆ. ಕುಡಚಿ ಪಟ್ಟಣದ ಲಾಡ್ಜ್ ಒಂದರಲ್ಲಿ...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!