ವಿವೇಕವಾರ್ತೆ : ಭಾರತೀಯ ವಿಜ್ಞಾನ ಸಂಸ್ಥೆಯ ಮೂರನೆಯ ಚಂದ್ರಯಾನ-3 ಉಡಾವಣೆ ಯಶಸ್ವಿಗೆ ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ಹರ್ಷ ವ್ಯಕ್ತಪಡಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ನಮೆಲ್ಲರ ಕನಸು, ನಿರೀಕ್ಷೆಗಳು ಚಂದ್ರನೆಡೆಗೆ ಸಾಗುತ್ತಿವೆ.ಭಾರತ ಹೆಮ್ಮೆಪಡುತ್ತದೆ.45 ದಿನಗಳ ಐತಿಹಾಸಿಕ ಚಂದ್ರಯಾನ-3 ಯಶಸ್ವಿಯಾಗಿ ಆರಂಭವಾಗಿದೆ. 2.35ಕ್ಕೆ ಆಂಧ್ರದ ಶ್ರೀಹರಿಕೋಟಾದಿಂದ ಚಂದಿರನ ಅಂಗಳಕ್ಕೆ ನೌಕೆಯನ್ನು ಉಡ್ದಯನ ಮಾಡಿದ ಇಸ್ರೋ ಈ ಪ್ರಯತ್ನದಲ್ಲಿ ಪೂರ್ಣ ಯಶಸ್ಸು ಸಾಧಿಸಲಿದೆ ಎಂಬ ವಿಶ್ವಾಸ ನನ್ನದು.ಇಸ್ರೋದ ಪ್ರತಿ ಯೋಜನೆಗೂ ಕರ್ನಾಟಕದ ಕೊಡುಗೆ ಇರುತ್ತದೆ.
ಅದೇ ರೀತಿ, ಚಂದ್ರಯಾನ-3ಕ್ಕೂ ಕರುನಾಡಿನ ಕಾಣಿಕೆ ಅಪಾರ. ಈ ಜಗತ್ತು, ಭಾರತವನ್ನು ಕರ್ನಾಟಕದ ಮೂಲಕ ನೋಡುವ ಈ ಅವಿಸ್ಮರಣೀಯ ಕ್ಷಣದ ದೃಶ್ಯವನ್ನು ನಾನೂ ಕಣ್ತುಂಬಿಕೊಂಡೆ. ಉಡಾವಣೆಯಾದ ಕೆಲ ಕ್ಷಣಗಳಲ್ಲೇ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರಿದ್ದು, ಈ ಮೂಲಕ ಉಪಗ್ರಹವನ್ನು ಚಂದ್ರನ ಮೇಲೆ ಇಳಿಸುವ 6 ವಾರಗಳ ರೋಮಾಂಚನಕಾರಿ ಮಿಷನ್’ಗೆ ಚಾಲನೆ ದೊರೆತಿದೆ. ಚಂದ್ರನತ್ತ ಹೊರಟ GSLV-Mk3 ರಾಕೆಟ್.
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು 3 ನೆಯ ಬಾರಿ ಚಂದ್ರನತ್ತ ಇಸ್ರೋ ತನ್ನ ಪಯಣ ಆರಂಭಿಸಿದೆ.ಕೋಟ್ಯಾಂತರ ಭಾರತೀಯರ ಹಾರೈಕೆಯೊಂದಿಗೆ ನಭಕ್ಕೆ ಚಿಮ್ಮಿದ ಚಂದ್ರಯಾನ 3 ರಾಕೆಟ್ ಆಗಸ್ಟ್ 23 ರಕ್ಕೆ ಚಂದ್ರನ ಅಂಗಳದಲ್ಲಿ ಕಾಲಿಡಲಿದೆ.ಈ ಮಿಷನ್ ಸಾಧ್ಯವಾಗಿಸಲು ಹಗಲಿರುಳು ಶ್ರಮಿಸಿದ ಸಾವಿರಾರು ವಿಜ್ಞಾನಿಗಳು, ಎಂಜಿನಿಯರ್ಗಳು ಮತ್ತು ತಂತ್ರಜ್ಞರಿಗೆ ಅವರು ಅಭಿನಂದನೆಗಳು ಸಲ್ಲಿಸಿದ್ದಾರೆ.
ವರದಿ: ಅಪ್ಪಾರಾಯ ಬಡಿಗೇರ