ಚಿಕ್ಕೋಡಿ : ಸೇನೆ ಸೇರ್ಪಡೆ ಕನಸು ಈಡೇರದ ಚಿಂತೆ: ಯುವಕ ಆತ್ಮಹತ್ಯೆ

Published on

spot_img
spot_img

ವಿವೇಕವಾರ್ತೆ : ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಹಲವು ಪ್ರಯತ್ನಗಳ ಹೊರತಾಗಿಯೂ ಸಫಲತೆ ಕಾಣದ ಹಿನ್ನಲೆಯಲ್ಲಿ 24 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ನಿಪ್ಪಾಣಿ ತಾಲೂಕಿನಲ್ಲಿ ಗುರುವಾರ ನಡೆದಿದೆ.

ಮೃತರನ್ನು ನಿಪ್ಪಾಣಿ ತಾಲೂಕಿನ ಹಂಚಿನಾಳ್ ಗ್ರಾಮದ ನಿವಾಸಿ 24 ವರ್ಷದ ಅಪ್ಪಾಸೊ ಶಿವಾಜಿ ಪಾನಡೆ ಎಂದು ಗುರುತಿಸಲಾಗಿದೆ.

ಪಾನಡೆ ಬಾಲ್ಯದಿಂದಲೂ ಸೇನೆಗೆ ಸೇರುವ ಕನಸನ್ನು ಹೊಂದಿದ್ದು, ಅದಕ್ಕಾಗಿ ತಯಾರಿ ನಡೆಸುತ್ತಿದ್ದರು. ಶಿವಾಜಿ ಮಹಾರಾಷ್ಟ್ರದ ಖಾಸಗಿ ಕಾರ್ಖಾನೆಯಲ್ಲಿ ಎರಡು ವರ್ಷಗಳ ಕಾಲ ಕೆಲಸ ಮಾಡಿದರು. ಅದರೊಂದಿಗೆ ಸೈನ್ಯಕ್ಕೆ ಸೇರಲು ಹಲವು ಬಾರಿ ಪ್ರಯತ್ನ ನಡೆಸಿದ್ದರು. ಆದರೆ ಆತನ ಕನಸು ನನಸಾಗದ ಕೊರಗಿನಲ್ಲಿ ಯುವಕ ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿಪ್ಪಾಣಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!