ಜೈಲು ಗೋಡೆ ಹಾರಿ ಎಸ್ಕೇಪ್ ಆದ ಅತ್ಯಾಚಾರ ಪ್ರಕರಣದ ಆರೋಪಿ.!

Published on

spot_img
spot_img

ವಿವೇಕ ವಾರ್ತೆ : ದಾವಣಗೆರೆ ನಗರದ ಉಪಕಾರಾಗೃಹದಲ್ಲಿ
ಅತ್ಯಾಚಾರ ಪ್ರಕರಣದ ಆರೋಪಿ ಜೈಲಿನಿಂದ ಪರಾರಿಯಾದ ಘಟನೆ ಶನಿವಾರ ನಡೆದಿದೆ.

ಪರಾರಿಯಾದ ಆರೋಪಿ ವಸಂತ್ (23) ಎಂದು ತಿಳಿದುಬಂದಿದೆ. ಈತ ಕಾರಾಗೃಹದ ಗೋಡೆಯನ್ನು ಹಾರಿ ಎಸ್ಕೇಪ್ ಆಗಿದ್ದಾನೆ.

ಪರಾರಿಯಾಗಿರುವ ವಸಂತ್ ದಾವಣಗೆರೆ ನಗರದ ಹೊರವಲಯದ ಕೂರರ್ ಪ್ರದೇಶದ ನಿವಾಸಿಯಾಗಿದ್ದಾನೆ. ಈ ಆಟೋ ಚಾಲಕನಾಗಿದ್ದಾನೆ. ಕಳೆದ ಎರಡು ದಿನಗಳ ಹಿಂದೆ ಈತನ ವಿರುದ್ಧ ದಾವಣಗೆರೆಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.

ಅತ್ಯಾಚಾರ ಆರೋಪ ಎದುರಿಸುತ್ತಿದ್ದ ವಸಂತ್‌ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು ಮಹಿಳಾ ಪೊಲೀಸ್ ಠಾಣೆ ಪೊಲೀಸರು. ಆದರೆ, ದಾವಣಗೆರೆ ಉಪ ಕಾರಾಗೃಹದಲ್ಲಿದ್ದ ಆರೋಪಿ ಗೋಡೆಯನ್ನು ಹಾರಿ ಪರಾರಿಯಾಗಿದ್ದಾನೆ. ಈ ವೇಳೆ, ಆತನ ಕಾಲಿಗೆ ಪೆಟ್ಟಾಗಿದ್ದರೂ ಲೆಕ್ಕಿಸದೇ ತಪ್ಪಿಸಿಕೊಂಡಿದ್ದಾನೆ ಎನ್ನಲಾಗಿದೆ.

ಆರೋಪಿ ಪರಾರಿಯಾದ ಕೆಲವು ಗಂಟೆಗಳ ಬಳಿಕ ಪೊಲೀಸರಿಗೆ ಗೊತ್ತಾಗಿದೆ. ಕೂಡಲೇ ಜೈಲು ಸಿಬ್ಬಂದಿ ಬಸವನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಸ್ಕೇಪ್ ಆಗಿರುವ ಅತ್ಯಾಚಾರ ಆರೋಪಿಯನ್ನು ಪೊಲೀಸರು ಹುಡುಕುತ್ತಿದ್ದಾರೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!