ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದ 6 ವರ್ಷದ ಬಾಲಕಿ ಚಿರತೆಗೆ ಬಲಿ..!

Published on

spot_img
spot_img

ವಿವೇಕ ವಾರ್ತೆ : ಅಲಿಪಿರಿ ಪಾದಚಾರಿ ಮಾರ್ಗದಲ್ಲಿ ಶುಕ್ರವಾರ ರಾತ್ರಿ ನಡೆದುಕೊಂಡು ತಿರುಮಲ ತಿಮ್ಮಪ್ಪನ ದೇವಸ್ಥಾನಕ್ಕೆ ತೆರಳುತ್ತಿದ್ದ ಆರು ವರ್ಷದ ಬಾಲಕಿಯನ್ನು ಚಿರತೆಯೊಂದು ಎಳೆದೊಯ್ದು ಕೊಂದು ಹಾಕಿದ ಆಘಾತಕಾರಿ ಘಟನೆ ನಡೆದಿದೆ.

ಲಕ್ಷಿತಾ ಎಂಬ ಬಾಲಕಿ ಶುಕ್ರವಾರ ರಾತ್ರಿ 7:30 ರಿಂದ 8 ಗಂಟೆಯ ನಡುವೆ ತನ್ನ ಹೆತ್ತವರೊಂದಿಗೆ ನಡೆದುಕೊಂಡು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ನೆಲ್ಲೂರು ಜಿಲ್ಲೆಯ ಕೊವ್ವೂರು ಮಂಡಲದ ಪೋತಿರೆಡ್ಡಿ ಪಾಲೆಂ ನಿವಾಸಿಯಾದ ದಿನೇಶ ಮತ್ತು ಶಶಿಕಲಾ ಎಂಬ ಬಾಲಕಿಯ ಪೋಷಕರು, ಅಲ್ಲಿದ್ದವರು ಆಕೆಗಾಗಿ ಹುಡುಕಾಡಿದರೂ ವ್ಯರ್ಥವಾಯಿತು.

ಘಟನೆಯ ಬಗ್ಗೆ ಮಾಹಿತಿ ಸಿಕ್ಕ ಹಿನ್ನಲೇ ಟಿಟಿಡಿ ವಿಜಿಲೆನ್ಸ್ ಮತ್ತು ಭದ್ರತಾ ಸಿಬ್ಬಂದಿ, ಸ್ಥಳೀಯ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ಆರಂಭಿಸಿದರು. ನಂತರ ಶನಿವಾರ ಮುಂಜಾನೆ 4 ಗಂಟೆ ಸುಮಾರಿಗೆ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಪಾದಚಾರಿಗಳು ಲಕ್ಷಿತಾ ಶವವನ್ನು ಪತ್ತೆ ಮಾಡಿದ್ದಾರೆ.

ಬಾಲಕಿ ಲಕ್ಷಿತಾ ನಾಪತ್ತೆಯಾದಾಗ ತನ್ನ ಕುಟುಂಬಕ್ಕಿಂತ ಮುಂದೆ ನಡೆದುಕೊಂಡು ಹೋಗುತ್ತಿದ್ದಳು, ಅವಳು ಕಾಣೆಯಾಗಿದ್ದಾಳೆಂದು ತಿಳಿದ ನಂತರ, ಮನೆಯವರು ಹುಡುಕಿದರು. ಆಕೆ ಕಾಣದಿದ್ದಾಗ ತಿರುಮಲ ಪೊಲೀಸರಿಗೆ ದೂರು ನೀಡಿದ್ದರು. ನಂತರ ಹುಡುಗಿಯನ್ನು ಹುಡುಕಲು ಸಾರ್ವಜನಿಕರಿಗೆ ಧ್ವನಿವರ್ಧಕದಲ್ಲಿ ಪ್ರಕಟಣೆ ನೀಡಲಾಯಿತು.

ಪೊಲೀಸರಿಗೆ ಶುಕ್ರವಾರ ರಾತ್ರಿಯಾಗಿದ್ದರಿಂದ ಶೋಧ ಕಾರ್ಯಾಚರಣೆಯನ್ನು ಸರಿಯಾಗಿ ನಡೆಸಲು ಸಾಧ್ಯವಾಗಲಿಲ್ಲ, ಆದರೆ ಶನಿವಾರ ಮುಂಜಾನೆ ಹುಡುಕಾಟ ನಡೆಸಿದಾಗ ತಿರುಮಲಕ್ಕೆ ಹೋಗುವ ಫುಟ್‌ಪಾತ್‌ನಲ್ಲಿ 7ನೇ ಮೈಲಿನಲ್ಲಿ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಬಾಲಕಿಯ ಮೃತದೇಹ ಅರ್ಧ ತಿಂದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಕ್ಷಣ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ತಿರುಪತಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ಕುಟುಂಬದವರಿಗಿಂತ ಮುಂದೆ ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಲಕ್ಷಿತಾಳ ಮೇಲೆ ಏಕಾಏಕಿ ದಾಳಿ ಮಾಡಿದ ಚಿರತೆ ದೂರಕ್ಕೆ ಅವಳನ್ನು ಎಳೆದೊಯ್ದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅಲಿಪಿರಿ ಎಂಟ್ರಿ ಪಾಯಿಂಟ್ ಮತ್ತು ಇತರ ಪ್ರದೇಶಗಳಲ್ಲಿನ ಸಿಸಿಟಿವಿ ದೃಶ್ಯಾವಳಿಗಳು ಲಕ್ಷಿತಾ ಅವರ ಕುಟುಂಬಕ್ಕಿಂತ ಮುಂದೆ ಹೋಗುತ್ತಿರುವದನ್ನು ಖಚಿತಪಡಿಸಿದೆ.

ಈ ಘಟನೆಯು ದಟ್ಟ ಅರಣ್ಯಗಳ ಮೂಲಕ ಹಾದುಹೋಗುವ ಅಲಿಪಿರಿ ಪಾದಚಾರಿ ಮಾರ್ಗದ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಆತಂಕವನ್ನು ಉಂಟುಮಾಡಿದೆ. ಈ ವರ್ಷವೇ ತಿರುಮಲದಲ್ಲಿ ಐದು ವರ್ಷದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿತ್ತು. ಆತನಿಗೆ ಗಾಯಗಳಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!