Sunday, October 1, 2023

ನಗ್ನ ಚಿತ್ರಗಳನ್ನು ವೈರಲ್ ಮಾಡಿ ಲಾಡ್ಜ್​ನಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ.!

ವಿವೇಕ ವಾರ್ತೆ : ಯುವಕನೊಬ್ಬ ಲಾಡ್ಜ್​​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತ ಯುವಕ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ನಿವಾಸಿ ಶಶಿಧರ್ ಎಂದು ತಿಳಿದುಬಂದಿದೆ.

ಈತ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆಯಾಗಿದ್ದನು. ಹೀಗಾಗಿ ಶಶಿಧರ್ ಮೇಲೆ ಬಾಲಕಿಯ ಪೋಷಕರು ಬಸವನ ಬಾಗೇವಾಡಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ಆರೋಪಿ ಶಶಿಧರ್​ನನ್ನು ಬಂಧಿಸಲು ಮುಂದಾಗಿದ್ದರು.

ವಿಷಯ ತಿಳಿಯುತ್ತಿದ್ದಂತೆ ಬೆಂಗಳೂರಿಗೆ ಬಂದು ಶಶಿಧರ್ ತಲೆಮರೆಸಿಕೊಂಡಿದ್ದನು. ಆದರೆ ಮಂಗಳವಾರ ಇನ್​ಸ್ಟಾಗ್ರಾಂನಲ್ಲಿ ನನ್ನ ಸಾವಿಗೆ ಬಾಲಕಿ ಅಪ್ಪ, ಅಮ್ಮ ಮತ್ತೆ ಅವರ ಚಿಕ್ಕಪ್ಪ, ಅವರಜ್ಜಿ ಕಾರಣ ಅಂತ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ನನ್ನ ಪತ್ನಿ, ಆಕೆಯ ತಂದೆ-ತಾಯಿ, ಚಿಕ್ಕಪ್ಪ, ಡೆಂಗಿ ಸಾಹುಕಾರ ಮತ್ತು ಅವರ ಸಮಾಜದವರು ಕೊಲೆ ಬೆದರಿಕೆ ಹಾಕಿದ್ದಾರೆ. ನನ್ನ ಸಾವಿಗೆ ಇವರೇ ಕಾರಣ.

ಆರು ವರ್ಷ ಪ್ರೀತಿ ಮಾಡಿ ನನ್ನ ಮದುವೆ ಆಗಿದ್ದಾಳೆ. ಆದ್ರೆ ಕಿರುಕುಳ ನೀಡಿ ಮದುವೆಯಾಗಿ ಅತ್ಯಾಚಾರ ಮಾಡಿದ್ದಾನೆ ಎಂದು ಕುಟುಂಬಸ್ಥರು ದೂರು ಕೊಡಿಸಿದ್ದಾರೆ. ಪೊಲೀಸರು ನನ್ನ ದೂರು ಸ್ವೀಕರಿಸುತ್ತಿಲ್ಲ. ನಮ್ಮಿಬ್ಬರ ಆರು ವರ್ಷದ ಪ್ರೀತಿಗೆ ನನ್ನ ಬಳಿ ಫೋಟೋ ಮತ್ತು ವಿಡಿಯೋಗಳಿವೆ. ಮದುವೆಯಾಗಿರುವ ಬಗ್ಗೆಯೂ ನನ್ನ ಬಳಿ ಫೋಟೋಗಳು ಇವೆ ಎಂದು ಶಶಿಧರ್ ಹೇಳಿದ್ದಾನೆ. ಇತ್ತ ಆಕೆ ಜೊತೆಗಿರುವ ನಗ್ನ ಚಿತ್ರಗಳನ್ನು ಇನ್‌ಸ್ಟಾಗ್ರಾಮ್ ನಲ್ಲಿ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯುವತಿ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಸೇಡು ತೀರಿಸಿಕೊಳ್ಳಲು ಅಶ್ಲೀಲ ಪೊಟೋಗಳನ್ನು ವೈರಲ್ ಮಾಡಿ ಸೂಸೈಡ್ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಶಶಿಧರ 6 ವರ್ಷ ಹಿಂದೆ ಪ್ರೀತಿಸಿ ಯುವತಿ ಅಪ್ರಾಪ್ತೆಯಾಗಿದ್ದಾಗಲೇ ಮದುವೆಯಾಗಿದ್ದ . ಬಳಿಕ ಬೆಂಗಳೂರಿಗೆ ಕರೆದುಕೊಂಡು ಬಂದು ರೂಂ ಮಾಡಿಕೊಂಡಿದ್ದ. ಈ ನಡುವೆ ಯುವತಿ ಪೋಷಕರಿಂದ ಮದುವೆಗೆ ವಿರೋಧ ವ್ಯಕ್ತವಾಗಿತ್ತು. ಯುವತಿಯು ಸಹ ಶಶಿಧರ್‌ ಜೊತೆಗಿರಲು ವಿರೋಧಿಸಿದ್ದಳಂತೆ. ಇದರಿಂದ ಶಶಿಧರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಇನ್ನೂ ಶಶಿಧರ್ ರೂಮ್​ನಿಂದ ಹೊರಗೆ ಬರದೇ ಇರೋದನ್ನು, ಗಮನಿಸಿದ ಸಿಬ್ಬಂದಿ ಅನುಮಾನಗೊಂಡು ಬಾಗಿಲು ತೆರೆದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ, ಶಶಿಧರ್ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ.

ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

ಹಳೆಯ ವಿದ್ಯಾರ್ಥಿಗಳೇ ಕೆಬಿಎನ್ ವಿವಿಯ ಬೆನ್ನೆಲುಬು : ಡಾ. ನಿಶಾತ ಆರೀಫ್ ಹುಸೇನಿ

ವಿವೇಕವಾರ್ತೆ : ಯಾವುದೇ ವಿಶ್ವವಿದ್ಯಾಲಯದ ಗುಣಮಟ್ಟ ಹಳೆಯ ವಿದ್ಯಾರ್ಥಿಗಳಿಂದಲೇ ತಿಳಿಯುತ್ತದೆ. ಹಳೆಯ ವಿದ್ಯಾರ್ಥಿಗಳ ಯಶಸ್ಸು ವಿವಿಗಳ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುತ್ತದೆ ಎಂದು ಖಾಜಾ ಬಂದಾನವಾಜ್ ವಿವಿಯ ಕಲಾ, ಭಾಷಾ, ಮಾನವಕತೆ, ಸಮಾಜ ವಿಜ್ಞಾನ...

ಚೈತ್ರಾ ಕಾರು ಮುಧೋಳದಲ್ಲಿ ಪತ್ತೆ..! ಇದರ ಹಿಂದಿದೆ ಇಂಟ್ರೆಸ್ಟಿಂಗ್ ಸ್ಟೋರಿ

ವಿವೇಕವಾರ್ತೆ :ಉದ್ಯಮಿಗೆ ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ(Chaitra Kundapur) ಅವರ ಆಸ್ತಿಯನ್ನು ಸಿಸಿಬಿ (CCB) ಮುಟ್ಟುಗೋಲು ಹಾಕಿಕೊಂಡಿದೆ . ಇದರ ಜೊತೆಗೆ ಇನ್ನೊಂದು ಸ್ಪೋಟಕ ಮಾಹಿತಿ ಸಿಕ್ಕಿದೆ. ಈ ವಂಚನೆ...

ಸಂಕ್ರಾಂತಿ ವೇಳೆಗೆ ರಾಜ್ಯದಲ್ಲಿ ಕೆಲ ಅವಘಢ ; ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ : ಕೋಡಿಮಠ ಶ್ರೀ.!

ವಿವೇಕ ವಾರ್ತೆ : ಲೋಕಸಭಾ ಚುನಾವಣೆ ಬಗ್ಗೆ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರಮುಖ ಭವಿಷ್ಯವೊಂದನ್ನು ನುಡಿದಿದ್ದಾರೆ. https://youtu.be/u6lq_pUsNkA?si=YWlDzZ4FEqGXLL4M ಮುಂದಿನ ಚುನಾವಣೆಯಲ್ಲಿ ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ. ಅಮಾವಾಸ್ಯೆಯ ಬಳಿಕ ಕರ್ನಾಟಕದಲ್ಲಿ ಭಾರೀ...
- Advertisment -

Most Popular

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
error: Content is protected !!