Sunday, October 1, 2023

ನರ್ಸ್‌ಗಳನ್ನು ಗುರಿಯಾಗಿಸಿ ವೈದ್ಯಕೀಯ ವಿದ್ಯಾರ್ಥಿಗಳಿಂದ ರೀಲ್ಸ್ : ವೈದ್ಯ ವಿದ್ಯಾರ್ಥಿಗಳ ಸಸ್ಪೆಂಡ್.!

ವಿವೇಕ ವಾರ್ತೆ : ಸಾಮಾಜಿಕ ಜಾಲತಾಣಗಳಲ್ಲಿ ನರ್ಸ್‌ಗಳ ಮೇಲೆ ಅವಹೇಳನಕಾರಿಯಾಗಿ ರೀಲ್ಸ್ ಮಾಡಿ ಶೇರ್ ಮಾಡಿದ್ದಕ್ಕಾಗಿ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಯೊಂದರ 11 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆವರಣದಲ್ಲಿ ಈ ಘಟನೆ ನಡೆದಿದೆ. ಈ ಹಿನ್ನಲೆಯಲ್ಲಿ ಆರೋಪಿ ವಿದ್ಯಾರ್ಥಿಗಳನ್ನು ಒಂದು ವಾರ ಅಮಾನತುಗೊಳಿಸಿ ಪ್ರಾಚಾರ್ಯ ಡಾ. ಈಶ್ವರ ಹೊಸಮನಿ ಆದೇಶ ಹೊರಡಿಸಿದ್ದಾರೆ. ನರ್ಸ್‌ಗಳನ್ನು ಕೆಟ್ಟದಾಗಿ ಮತ್ತು ಅವಮಾನಕರ ರೀತಿಯಲ್ಲಿ ಚಿತ್ರಿಸುವ ರೀಲ್ ಗಳನ್ನು ಅವರ ಅನುಮತಿಯಿಲ್ಲದೆ ಮಾಡಲಾಗಿದೆ.

ಜನಪ್ರಿಯ ಕನ್ನಡ ಚಲನಚಿತ್ರ ಹಾಡಿನ ಸಂಗೀತವನ್ನು ಸೇರಿಸಿ ಈ ವೀಡಿಯೊ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಹುಡುಗಿಯರನ್ನು ನಂಬಬಾರದು, ನರ್ಸ್‌ಗಳನ್ನು ನಂಬಬಾರದು ಎಂಬ ಸಾಲುಗಳಿದ್ದು ಈ ಹಾಡಿಗೆ ಹುಡುಗರು ನೃತ್ಯ ಸಹ ಮಾಡಿದರು.

ವಿಡಿಯೋ ವೈರಲ್ ಆಗುತ್ತಿದ್ದಂತೆ ಕಿಮ್ಸ್ ನ ನರ್ಸ್ ಗಳು ಆರೋಪಿ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ತೀವ್ರ ಟೀಕೆಗೆ ಗುರಿಯಾದ ನಂತರ, ಅಮಾನತುಗೊಂಡ ವಿದ್ಯಾರ್ಥಿಗಳು ಮತ್ತೊಂದು ವಿಡಿಯೋ ಮಾಡಿ ನರ್ಸ್ ಗಳನ್ನು ಕ್ಷಮೆ ಕೇಳಿದ್ದಾರೆ.

ಅಲ್ಲದೆ ಇದನ್ನು ತಮಾಷೆಗಾಗಿ ಮಾಡಿರುವುದಾಗಿ ಸ್ಪಷ್ಟಪಡಿಸಿದರು. ಈ ರೀಲ್ಸ್ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಕೋಲಾರ ಜಿಲ್ಲಾ ಆಸ್ಪತ್ರೆಯಲ್ಲಿ ಶುಶ್ರೂಷಕರು ವಿಡಿಯೋ ಖಂಡಿಸಿ ಪ್ರತಿಭಟನೆ ನಡೆಸಿದ್ದರು.

ವಿಡಿಯೋವನ್ನು ಖಂಡಿಸಿ ರಾಜ್ಯ ದಾದಿಯರ ಸಂಘವು ಈ ಸಂಬಂಧ ಕಿಮ್ಸ್ ನಿರ್ದೇಶಕರಿಗೆ ಪತ್ರ ಬರೆದು ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತ್ತು.

RELATED ARTICLES

ಹಳೆಯ ವಿದ್ಯಾರ್ಥಿಗಳೇ ಕೆಬಿಎನ್ ವಿವಿಯ ಬೆನ್ನೆಲುಬು : ಡಾ. ನಿಶಾತ ಆರೀಫ್ ಹುಸೇನಿ

ವಿವೇಕವಾರ್ತೆ : ಯಾವುದೇ ವಿಶ್ವವಿದ್ಯಾಲಯದ ಗುಣಮಟ್ಟ ಹಳೆಯ ವಿದ್ಯಾರ್ಥಿಗಳಿಂದಲೇ ತಿಳಿಯುತ್ತದೆ. ಹಳೆಯ ವಿದ್ಯಾರ್ಥಿಗಳ ಯಶಸ್ಸು ವಿವಿಗಳ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುತ್ತದೆ ಎಂದು ಖಾಜಾ ಬಂದಾನವಾಜ್ ವಿವಿಯ ಕಲಾ, ಭಾಷಾ, ಮಾನವಕತೆ, ಸಮಾಜ ವಿಜ್ಞಾನ...

ಚೈತ್ರಾ ಕಾರು ಮುಧೋಳದಲ್ಲಿ ಪತ್ತೆ..! ಇದರ ಹಿಂದಿದೆ ಇಂಟ್ರೆಸ್ಟಿಂಗ್ ಸ್ಟೋರಿ

ವಿವೇಕವಾರ್ತೆ :ಉದ್ಯಮಿಗೆ ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ(Chaitra Kundapur) ಅವರ ಆಸ್ತಿಯನ್ನು ಸಿಸಿಬಿ (CCB) ಮುಟ್ಟುಗೋಲು ಹಾಕಿಕೊಂಡಿದೆ . ಇದರ ಜೊತೆಗೆ ಇನ್ನೊಂದು ಸ್ಪೋಟಕ ಮಾಹಿತಿ ಸಿಕ್ಕಿದೆ. ಈ ವಂಚನೆ...

ಸಂಕ್ರಾಂತಿ ವೇಳೆಗೆ ರಾಜ್ಯದಲ್ಲಿ ಕೆಲ ಅವಘಢ ; ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ : ಕೋಡಿಮಠ ಶ್ರೀ.!

ವಿವೇಕ ವಾರ್ತೆ : ಲೋಕಸಭಾ ಚುನಾವಣೆ ಬಗ್ಗೆ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರಮುಖ ಭವಿಷ್ಯವೊಂದನ್ನು ನುಡಿದಿದ್ದಾರೆ. https://youtu.be/u6lq_pUsNkA?si=YWlDzZ4FEqGXLL4M ಮುಂದಿನ ಚುನಾವಣೆಯಲ್ಲಿ ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ. ಅಮಾವಾಸ್ಯೆಯ ಬಳಿಕ ಕರ್ನಾಟಕದಲ್ಲಿ ಭಾರೀ...
- Advertisment -

Most Popular

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
error: Content is protected !!