ಬರ್ತ್‌ಡೇ ಆಚರಣೆ ವೇಳೆ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ವ್ಯಕ್ತಿ ಸೇರಿ ಮೂವರು ಮಕ್ಕಳು ಗಂಭೀರ ಗಾಯ.!

Published on

spot_img
spot_img

ವಿವೇಕ ವಾರ್ತೆ : ಹೀಲಿಯಂ ಗ್ಯಾಸ್‌ ತುಂಬಿದ್ದ ಬಲೂನ್‌ ಬ್ಲಾಸ್ಟ್‌ ಆಗಿ ಓರ್ವ ವ್ಯಕ್ತಿ‌ ಸೇರಿಂದಂತೆ ಮೂವರು ಮಕ್ಕಳಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾಡುಗೋಡಿ ಬಳಿಯ ಬೆಲತ್ತೂರಿನಲ್ಲಿ ಸಂಭವಿಸಿದೆ.

ಗಾಯಗೊಂಡವರನ್ನು ವಿಜಯ್ ಕುಮಾರ್ (44), ಧ್ಯಾನ್(7) , ಸಂಜಯ್(8), ಸೋಹಿಲಾ (3) ಎಂದು ಗುರುತಿಸಲಾಗಿದೆ.

ಶನಿವಾರ ಹುಟ್ಟುಹಬ್ಬದ‌ ಪ್ರಯುಕ್ತ ಹೀಲಿಯಂ ಗ್ಯಾಸ್ ತುಂಬಿಸಿದ್ದ ಬಲೂನ್ ಬಳಸಲಾಗಿತ್ತು, ಆಕಸ್ಮಿಕವಾಗಿ ಮನೆಯ ಮುಂದಿನ ವಿದ್ಯುತ್ ತಂತಿಗೆ ತಾಗಿ ಒಮ್ಮೆಲೆ ಬಲೂನ್‌ ಬ್ಲಾಸ್ಟ್‌ ಆಗಿದೆ.

ಹೀಲಿಯಂ ಬಲೂನ್‌ ಬ್ಲಾಸ್ಟ್ ಆದ ಪರಿಣಾಮ ಅಕ್ಕಪಕ್ಕದಲ್ಲಿದ್ದ ಮೂವರು ಮಕ್ಕಳು ಸೇರಿ ವ್ಯಕ್ತಿಗೆ ಗಂಭೀರ ಗಾಯವಾಗಿದೆ.

ಬ್ಲಾಸ್ಟ್ ಪರಿಣಾಮ ಮಕ್ಕಳ ಮುಖ ಸೇರಿ ಕೈ-ಕಾಲುಗಳು ಸುಟ್ಟು ಹೋಗಿದ್ದು, ಅಲ್ಲಿಯೇ ಇದ್ದ ವ್ಯಕ್ತಿಯ ಮುಖದ ಚರ್ಮವೆಲ್ಲ ಸುಟ್ಟು ಹೋಗಿದೆ.

ಹೀಗಾಗಿ ಗಾಯಗೊಂಡವರು ನರಳಾಡುತ್ತಿರುವ ಹಿನ್ನಲೆಯಲ್ಲಿ ಕೂಡಲೇ ವಿಕ್ಟೋರಿಯಾದ ಸುಟ್ಟಗಾಯ ವಾರ್ಡ್‌ಗೆ ರವಾನಿಸಲಾಗಿದೆ.

ಘಟನೆಗೆ ಸಂಭಂಧಿಸಿದಂತೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!