ಬಿಜೆಪಿ ಶಾಸಕರ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ ಯುವಕ..!

Published on

spot_img
spot_img

ವಿವೇಕವಾರ್ತೆ : ಬಿಜೆಪಿ ಶಾಸಕರ ಮನೆಯಲಿಯೇ ಯುವಕನೋರ್ವ ನೇಣಿಗೆ ಶರಣಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಭಾನುವಾರ ಲಕ್ನೋದ ಹಜರತ್‌ಗಂಜ್ ಪ್ರದೇಶದಲ್ಲಿ  ನಡೆದಿರುವುದಾಗಿ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಹೈದರ್‌ಗಢ ಮೂಲದ ಶ್ರೇಷ್ಠ ತಿವಾರಿ (24) ಎಂದು ತಿಳಿದು ಬಂದಿದೆ. ಬಿಜೆಪಿ ಶಾಸಕ ಯೋಗೇಶ್‌ ಶುಕ್ಲಾ ಅವರ ಅಧಿಕೃತ ನಿವಾಸದಲ್ಲಿ ಯುವಕ ನೇಣಿಗೆ ಶರಣಾಗಿದ್ದಾನೆ.

ಆತ್ಮಹತ್ಯೆಗೆ ಶರಣಾದ ಯುವಕ ಶಾಸಕ ಯೋಗೇಶ್‌ ಶುಕ್ಲಾ ಅವರಿಗೆ ಸಂಬಂಧಿಸಿದ ಮಾಧ್ಯಮ ತಂಡದ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಶುಕ್ಲಾ ಅವರ ಹಜರತ್‌ಗಂಜ್ ನಿವಾಸದಲ್ಲಿ ತಿವಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ತನಿಖೆಯಿಂದ ಕೌಟುಂಬಿಕ ಕಲಹದಿಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆದರೆ ತಿವಾರಿಯ ಪ್ರಿಯತಮೆ ವಿರುದ್ಧ ಕಿರುಕುಳ ಹಾಗೂ ನಿಂದನೆ ಆರೋಪ ಮಾಡಿ ಮೃತರ ಕುಟುಂಬ ಪೊಲೀಸರಿಗೆ ದೂರು ನೀಡಿದೆ.

ಯುವಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸದ್ಯ ದೂರು ದಾಖಲಿಸಿಕೊಂಡು ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!