ಬೆಳಗಾವಿ : ಮೃತಪಟ್ಟು15 ಗಂಟೆ ಕಳೆದರೂ ಅಂತ್ಯಕ್ರಿಯೆ ನೆರವೇರಿಸಲು ಇಲ್ಲದ ಸ್ಮಶಾನ ಭೂಮಿ : ಅಧಿಕಾರಿಗಳ ವಿರುದ್ಧ ಆಕ್ರೋಶ.!

Published on

spot_img
spot_img

ವಿವೇಕವಾರ್ತೆ : ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಕೊರವ ಸಮಾಜದ ಮಹಿಳೆಯೊಬ್ಬರು ಮೃತಪಟ್ಟು 15 ಗಂಟೆಗಳಾದರೂ ಸಹ ಅಂತ್ಯಕ್ರಿಯೆ ನೆರವೇರಿಸಲು ಸ್ಮಶಾನ ಭೂಮಿ ಇಲ್ಲದೇ ಪರದಾಡುತ್ತಿದ್ದು, ಸಮಾಜದಲ್ಲಿ ಜನರು ಗ್ರಾಮ ಪಂಚಾಯತಿ ಮುಂದೆ ಜಮಾಯಿಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸುಳೇಭಾವಿ ಗ್ರಾಮದಲ್ಲಿ ತಲೆತಲಾಂತರದಿಂದ ಕೊರವ ಸಮಾಜಕ್ಕೆ ಮೀಸಲಿಟ್ಟಿರುವ ಜಾಗವನ್ನು ಅತಿಕ್ರಮಣ ಮಾಡಿಕೊಳ್ಳಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಮಶಾನ ಜಾಗ ಇದ್ದರೂ ಖಾಸಗಿಯವರು ಈ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ. ಈಗ ನಮಗೆ ಸೂಕ್ತ ಜಾಗ ಇಲ್ಲದೇ ಅಂತ್ಯಕ್ರಿಯೆ ಎಲ್ಲಿ ನಡೆಸುವುದು. ಜಾಗ ಗುರುತಿಸಿ ಕೊಡಿ, ಇಲ್ಲದಿದ್ದರೆ ಪಂಚಾಯಿತಿ ಮುಂದೆಯೇ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಬಗ್ಗೆ ಕೊರವ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ನಮ್ಮ‌ ಸಮಾಜ ಇತರೆ ಸಮುದಾಯಕ್ಕಾಗಿ 10 ಗುಂಟೆ ಸ್ಮಶಾನ‌ ಜಾಗವಿದೆ. ಆದರೆ ಈಗ ಜಾಗವೇ ಅಲ್ಲಿ‌ ಇಲ್ಲ, ಬೇರೆಯವರು ಅತಿಕ್ರಮಣ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ಇನ್ನು ಅತಿಕ್ರಮಣ ಮಾಡಿಕೊಂಡವರ ಜೊತೆ ಕಂದಾಯ ಇಲಾಖೆ‌ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೈಜೋಡಿಸಿದ್ದಾರೆ ಎಂದು ಸಹ ಆರೋಪಿಸಿದರು. ಸ್ಥಳಕ್ಕೆ‌ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರು ಬಂದು ನಮಗೆ ನ್ಯಾಯ ಒದಗಿಸಿ ಕೊಡಬೇಕು.‌ ಇಲ್ಲದಿದ್ದರೆ ಮೃತದೇಹದ ಅಂತ್ಯಸಂಸ್ಕಾರ ಇಲ್ಲಿಯೇ ನೇರವೇರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!