ಬೆಳಗಾವಿ : ಸಿನಿಮೀಯ ರೀತಿಯಲ್ಲಿ ಖಾಕಿ ಬಲೆಗೆ ಬಿದ್ದ ಐಟಿ ಅಧಿಕಾರಿ..!

Published on

spot_img
spot_img

ವಿವೇಕವಾರ್ತೆ : ಬೆಳಗಾವಿ ಮಹಾನಗರ ಪೊಲೀಸರು, ಐಟಿ ಅಧಿಕಾರಿಯನ್ನು ಸಿನಿಮೀಯ ರೀತಿ ಪ್ಲ್ಯಾನ್ ಮಾಡಿ ಬಂಧಿಸಿದ ಘಟನೆ ನಡೆದಿದೆ‌‌.

ಬಲೆಗೆ ಬಿದ್ದ ಅಧಿಕಾರಿ ಅವಿನಾಶ ಟೊನಪೆ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಐಟಿ ಅಧಿಕಾರಿ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಚಿನ್ನಾಭರಣ ಅಂಗಡಿ ಮಾಲೀಕ ಪರುಶುರಾಮ ಬಂಕಾಪುರ ಎಂಬುವರಿಗೆ ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದರು.

ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಬೆಳಗಾವಿ ಮಾರ್ಕೆಟ್ ವಿಭಾಗದ ಎಸಿಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಚಿನ್ನಾಭರಣ ಅಂಗಡಿ ಮಾಲೀಕನಿಗೆ ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದ ಐಟಿ ಅಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಿಪ್ಪಾಣಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಐಟಿ ಅಧಿಕಾರಿ ಅವಿನಾಶ ಟೊನಪೆ ಚಿನ್ನದ ಅಂಗಡಿ ಮಾಲೀಕನಿಗೆ 10 ಲಕ್ಷ ರೂಪಾಯಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು.

ಇತ್ತೀಚೆಗಷ್ಟೇ ಐಟಿ ಅಧಿಕಾರಿಗಳು ಉದ್ಯಮಿ, ಚಿನ್ನಾಭರಣ ಅಂಗಡಿ ಮಾಲೀಕರ ಅಂಗಡಿಗೆ ಹೋಗಿ ಪರಿಶೀಲನೆ ನಡೆಸಿದ್ದರು. ಅದಾದ ಬಳಿಕ ಐಟಿ ಅಧಿಕಾರಿ ಅವಿನಾಶ ಟೊನಪೆ ಅಂಗಡಿ ಮಾಲೀಕರಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದರಂತೆ. ಇದರಿಂದ ಉದ್ಯಮಿ ಅನಿವಾರ್ಯವಾಗಿ ಪೊಲೀಸರಿಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದು, ಇದರಂತೆ ಇಂದು 40 ಸಾವಿರ ರೂಪಾಯಿ ಹಣ ಸ್ವೀಕರಿಸಲು ಬಂದ ಐಟಿ ಅಧಿಕಾರಿಯನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ‌.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!