ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

Published on

spot_img
spot_img

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ.

ಆ ಗುಂಪಿಗೆ ಹೊಸ ಸೇರ್ಪಡೆ ಎಂಬಂತೆ ಯುವಕನೋರ್ವ ಬ್ಯಾಕ್​ಫ್ಲಿಪ್​ ಸ್ಟಂಟ್​​ ಮಾಡಲು ಹೋಗಿ ವಿಫಲವಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಯುವಕನ ಈ ಬ್ಯಾಕ್​ಫ್ಲಿಪ್​ ಸ್ಟಂಟ್​​ ನೋಡಿದ ನೆಟಿಗರು ಸಾಕಷ್ಟು ಟೀಕೆಗಳನ್ನು ಮಾಡಿದ್ದಾರೆ. ಅಲ್ಲದೇ  ಬ್ಯಾಕ್​ಫ್ಲಿಪ್​ ಸ್ಟಂಟ್​​ ಮಾಡುವ ಅವಶ್ಯಕತೆಯಾದರೂ ಏನಿತ್ತು ಎಂದು ಹಲವರು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣವಾದ “X” ಖಾತೆಯಲ್ಲಿ ಈ ವಿಡಿಯೋವನ್ನು “ಚಮನ್​ ಬ್ಯಾಕ್​ಫ್ಲಿಪರ್” ಎಂಬುವವರು ಹಂಚಿಕೊಂಡಿದ್ದು, ‘ಮೆಟ್ರೋ ಮೇ ಚೋಟ್ ಲಗ್ ಗೈ’ (ಮೆಟ್ರೋದಲ್ಲಿ ಗಾಯಗೊಂಡಿದ್ದೇನೆ) ಎಂದು ಬರೆದುಕೊಂಡಿದ್ದಾರೆ.

ಯುವಕನ ಈ ಹುಚ್ಆಟಕ್ಕೆ ಅನೇಕರು ಪ್ರತಿಕ್ರಿಯಿಸಿದ್ದಾರೆ. ನೀನು ಈ ರೀತಿಯ ಅಧಿಕ ಪ್ರಸಂಗತನದ ಕೆಲಸಗಳನ್ನು ಮಾಡುವ ಬದಲು ಸುಮ್ಮನೆ ಇರುವುದೇ ಲೇಸು ಎಂದಿದ್ದಾರೆ. ಇನ್ನು ಕೆಲ ನೆಟ್ಟಿಗರು ಈ ರೀತಿಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದನ್ನು ಆಕ್ಷೇಪಿಸಿದ್ದಾರೆ.

ಹಾಗೇಯೇ ಕಲವರು ಇಂತಹ ವ್ಯಕ್ತಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಮಾಡುವುದು ಅಪಾಯಕಾರಿ ಎಂದಿದ್ದಾರೆ. ಗೊತ್ತಿಲ್ಲದ ಸಾಹಸಕ್ಕೆ ಕೈ ಹಾಕಬೇಡಿ, ಹೀಗೆ ಯಾರು ಸುಮ್ಮನೆ ಮೂರ್ಖರಂತೆ ವರ್ತಿಸಬೇಡಿ ಎಂದು ಹಲವರು ವೈರಲ್​ ವಿಡಿಯೋಗೆ ಕಮೆಂಟ್​ ಮಾಡಿ ಕಿಡಿಕಾರಿದ್ಧಾರೆ.

https://twitter.com/darkking_main/status/1705757487838957654?ref_src=twsrc%5Etfw%7Ctwcamp%5Etweetembed%7Ctwterm%5E1705757487838957654%7Ctwgr%5E30085cd402905cce8a2ac205c8d760db8831c6c1%7Ctwcon%5Es1_c10&ref_url=https%3A%2F%2Fapi-news.dailyhunt.in%2F

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!