ಮನೆಗಳ್ಳರಿಗೆ ಸಾಥ್ ನೀಡಿದ ಪೊಲೀಸ್ ಸಿಬ್ಬಂದಿ ಅರೆಸ್ಟ್…!

Published on

spot_img
spot_img

ವಿವೇಕವಾರ್ತೆ :  ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನಕ್ಕೆ ಇಳಿದಿದ್ದ ಪೊಲೀಸ್ ಕಾನ್ಸ್​ಟೇಬಲ್​​ ಒಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಪೊಲೀಸ್ ಕಾನ್ಸ್​ಟೇಬಲ್ ಬೆಂಗಳೂರು ಏರ್‌ಪೋರ್ಟ್ ಠಾಣೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಯಲ್ಲಪ್ಪ ​​ಎಂದು ತಿಳಿದುಬಂದಿದೆ.

ಯಲ್ಲಪ್ಪ, ಈ ಹಿಂದೆ ಬನಶಂಕರಿ ಠಾಣೆಯ ಕ್ರೈಂ ವಿಭಾಗದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಂದರ್ಭದಲ್ಲಿ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

ಇನ್ನುಪ್ರಕರಣವೊಂದರ ಆರೋಪಿಗಳ ವಿಚಾರಣೆ ವೇಳೆ ಯಲ್ಲಪ್ಪನ ಪಾತ್ರವಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಮಾಹಿತಿ ಲಭ್ಯವಾಗಿದ್ದರಿಂದ ಆತನನ್ನು ಅಮಾನತುಗೊಳಿಸಿ, ತನಿಖೆಗೆ ಆದೇಶಿಸಲಾಗಿತ್ತು.

ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲ್ಲಪ್ಪನ ವಿರುದ್ಧ ಚಾರ್ಜ್​ಶೀಟ್​ ಸಹ ಸಲ್ಲಿಕೆಯಾಗಿತ್ತು. ಆದರೆ ಇದ್ಯಾವುದಕ್ಕೋ ತಲೆಕೆಡಿಸಿಕೊಳ್ಳದೇ ಯಲ್ಲಪ್ಪ ಮತ್ತೆ ಹಳೆಚಾಳಿ ಮುಂದುವರೆಸಿದ್ದ.

ಚಂದ್ರಾ ಲೇಔಟ್, ಜ್ಞಾನಭಾರತಿ ಹಾಗೂ ಚಿಕ್ಕಜಾಲ ವ್ಯಾಪ್ತಿಯಲ್ಲಿ ಯಲ್ಲಪ್ಪ ಮನೆಗಳ್ಳರಿಗೆ ಸಾಥ್ ನೀಡಿರುವುದು ಗೊತ್ತಾಗಿದೆ. ಸದ್ಯ ಆರೋಪಿಯ ಕೃತ್ಯ ಬಯಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಜ್ಞಾನಭಾರತಿ ಠಾಣಾ ಪೊಲೀಸರು ಮಾಹಿತಿ ನೀಡಿದ್ದಾರೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!