Tuesday, September 26, 2023

ಮಲಗಿದ್ದ ವೇಳೆ ಏಕಾಏಕಿ ಫ್ರಿಡ್ಜ್​​​ ಸ್ಫೋಟ : ಮಹಿಳೆಯ ಎದುರೇ ಸೊಸೆ, ಮಗಳ ಸಜೀವ ದಹನ.!

ವಿವೇಕ ವಾರ್ತೆ : ಮನೆಯಲ್ಲಿ ಇರಿಸಲಾಗಿದ್ದ ಫ್ರಿಡ್ಜ್​​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನಂತರ ಸ್ಫೋಟ ಸಂಭವಿಸಿ ಇಬ್ಬರು ಸಜೀವವಾಗಿ ದಹನಗೊಂಡಿರುವ ಆಘಾತಕಾರಿ ಘಟನೆ ಬಿಹಾರದ ಮುಜಾಫರ್‌ಪುರ ಬಳಿ ನಡೆದಿದೆ.

ಮೃತರು ರಿಚಾ (20) ಮತ್ತು ರಿಂಕು (20) ಎಂದು ವರದಿಯಾಗಿದೆ.

ರಿಚಾ ಮೂರು ತಿಂಗಳ ಹಿಂದೆ ಪರಮಾನಂದಪುರ ನಿವಾಸಿ ನೀರಜ್ ಎಂಬಾತನ ಜತೆಗೆ ವಿವಾಹವಾಗಿದ್ದು, ರಿಂಕು ಈತನ ಸಹೋದರಿಯಾಗಿದ್ದಾಳೆ.

ಮನೆಯಲ್ಲಿ ಆತನ ತಾಯಿ ಸೇರಿ ಮೂವರು ವಾಸಿಸುತ್ತಿದ್ದು, ಮದುವೆಯಾದ ಕೆಲವು ದಿನಗಳ ನಂತರ ನೀರಜ್​ ಸೂರತ್‌ಗೆ ತೆರಳಿ ಅಲ್ಲಿಯೇ ಕೆಲಸ ಮಾಡುತ್ತಿದ್ದಾರೆ.

ನೀರಜ್​ ಮನೆಯಲ್ಲಿ ಶನಿವಾರ ರಾತ್ರಿ ರೆಫ್ರಿಜರೇಟರ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಕೆಲವೇ ಕ್ಷಣಗಳಲ್ಲಿ ಫ್ರಿಡ್ಜ್ ಸ್ಫೋಟಗೊಂಡಿದೆ. ಇದರಿಂದಾಗಿ ಬೆಂಕಿಯ ಜ್ವಾಲೆ ಮನೆಯೆಲ್ಲ ವ್ಯಾಪಿಸಿದ್ದು, ಅದರ ಹಿಡಿತಕ್ಕೆ ಬಂದ ರಿಚಾ ಮತ್ತು ರಿಂಕು ಸಜೀವವಾಗಿ ದಹನವಾಗಿದ್ದಾರೆ. ಘಟನೆ ವೇಳೆ ಮನೆಯಲ್ಲಿ ಮೂವರು ಮಾತ್ರ ಇದ್ದು, ಮೃತರು ಒಂದು ಕೋಣೆಯಲ್ಲಿದ್ದರೆ, ನೀರಜ್​ನ ತಾಯಿ ಇನ್ನೊಂದು ಕೋಣೆಯಲ್ಲಿದ್ದರು. ತಾಯಿಯ ಕಣ್ಣೆದುರೇ ಮಗಳು ಮತ್ತು ಸೊಸೆ ಸುಟ್ಟು ಕರಕಲಾಗಿದ್ದು, ಆಘಾತದ ನಂತರ ಆಕೆ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ.

ಸ್ಥಳೀಯರ ಪ್ರಕಾರ, ಸ್ಫೋಟದ ತೀವ್ರತೆಯಿಂದಾಗಿ ಸುತ್ತಮುತ್ತಲಿನ ಜನರು ಎಚ್ಚರವಾಗಿದ್ದು, ಜನರು ಏನಾಗಿದೆ ಎಂದು ಅರ್ಥಮಾಡಿಕೊಳ್ಳುವ ಹೊತ್ತಿಗೆ ಇಬ್ಬರೂ ಮೃತಪಟ್ಟಿದ್ದರು. ಸ್ಥಳೀಯರು ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟರು ಆದರೆ ಅಷ್ಟರಲ್ಲಾಗಲೇ ತಡವಾಗಿತ್ತು. ಕೂಡಲೇ ಘಟನೆ ಕುರಿತು ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ತರಾತುರಿಯಲ್ಲಿ ಸ್ಥಳಕ್ಕೆ ಆಗಮಿಸಿದ್ದರು. ಪೊಲೀಸರು ಕುಟುಂಬ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದು, ಸದ್ಯ ಕುಟುಂಬಸ್ಥರು ಯಾವುದೇ ಲಿಖಿತ ದೂರು ನೀಡಿಲ್ಲ. ಘಟನೆಗೆ ಶಾರ್ಟ್ ಸರ್ಕ್ಯೂಟ್‌ ಎಂದು ಶಂಕಿಸಲಾಗಿದೆ. (ಏಜೆನ್ಸೀಸ್​)

RELATED ARTICLES

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!