ಮೊಬೈಲ್ ಚಾರ್ಜ್ ಗೆ ಇಟ್ಟು ಮಾತನಾಡುವ ವೇಳೆ ಬ್ಲಾಸ್ಟ್ : ಯುವತಿಯ ಸಾವು.!

Published on

spot_img
spot_img

ವಿವೇಕವಾರ್ತೆ : ಮೊಬೈಲ್ ಚಾರ್ಜ್’ಗೆ ಹಾಕಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಮೊಬೈಲ್ ಸ್ಫೋಟಗೊಂಡು ಮಹಿಳೆಯೋರ್ವಳು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ.

ಮೃತ ಯುವತಿಯನ್ನು ಕೊಕಿಲಾಂಪಾಲ್​​ (33) ಎಂದು ಗುರುತಿಸಲಾಗಿದೆ. ಈಕೆ ತಂಜಾವೂರು ಜಿಲ್ಲೆಯ ಪಾಪನಾಶಂ ಬಳಿಯಿರುವ ವಿಶಿಷ್ಟರಾಜಪುರಂ ಮೂಲದವಳು. ಮದುವೆಯಾಗಿದ್ದು ಓರ್ವ ಗಂಡು ಮಗನಿದ್ದಾನೆ. ಪತಿ ಪ್ರಭಾಕರನ್​ ಅನಾರೋಗ್ಯ ಕಾರಣದಿಂದ ಕೆಲವು ವರ್ಷಗಳ ಹಿಂದೆಯೇ ಮೃತಪಟ್ಟನು.

ಪತಿ ಮರಣಾ ನಂತರ ಕೋಕಿಲಾಂಪಾಲ್ ಜೀವನ ನಡೆಸಲು ಮೇಲಕಾಪಿಸ್ಥಳದಲ್ಲಿ ವಾಚ್ ಮತ್ತು ಸೆಲ್ ಫೋನ್ ರಿಪೇರಿ ಅಂಗಡಿ ನಡೆಸುತ್ತಿದ್ದಳು. ಕಳೆದ ಬುಧವಾರ ಮಧ್ಯಾಹ್ನ ಸೆಲ್ ಫೋನ್ ಚಾರ್ಜ್ ಮಾಡುವಾಗ ಕಿವಿಯಲ್ಲಿ ಹೆಡ್ ಫೋನ್ ಹಾಕಿಕೊಂಡು ಮಾತನಾಡುತ್ತಿದ್ದರು. ಆಗ ಅನಿರೀಕ್ಷಿತವಾಗಿ ಮೊಬೈಲ್ ಸ್ಫೋಟಗೊಂಡಿದೆ. ಪರಿಣಾಮ ಕೋಕಿಲಾಂಪಲ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ.

ಈ ದುರ್ಘಟನೆಯಲ್ಲಿ ಅಂಗಡಿಯಲ್ಲಿದ್ದ ಸಾಮಗ್ರಿಗಳು ಕೂಡ ಬೆಂಕಿಗೆ ಆಹುತಿಯಾಗಿವೆ. ಘಟನೆಯ ಕುರಿತು ಕೋಕಿಲಂಪಾಲ್ ತಂದೆ ಕಪಿಸ್ತಲಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!