Tuesday, September 26, 2023

ಯುವನಿಧಿ ಯೋಜನೆಗೆ ಯಾರು ಅರ್ಹರು, ಏನು ದಾಖಲೆ ಬೇಕು, ಅಪ್ಲೈ ಮಾಡುವುದು ಹೇಗೆ ಇಲ್ಲಿದೆ ವಿವರ

ವಿವೇಕವಾರ್ತೆ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರೆಂಟಿ ಯೋಜನೆ (Guarantee Schemes) ಗಳ ಪೈಕಿ ಐದನೆಯದು ಕರ್ನಾಟಕ ಯುವನಿಧಿ (Karnataka Yuva Nidhi). ಈ ಯೋಜನೆ ಕಡೆಗೆ ಯುವಜನರು ಗಮನನೆಟ್ಟಿದ್ದು, ಯೋಜನೆಯ ಸೌಲಭ್ಯಗಳು, ಅರ್ಹತೆ, ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಗಾಗಿ ಹುಡುಕಾಟ ನಡೆಸತೊಡಗಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್‌ ಪಕ್ಷ ಘೋಷಿಸಿದ ಐದು ಗ್ಯಾರೆಂಟಿಗಳ ಪೈಕಿ ಒಂದಾಗಿರುವ ಯುವನಿಧಿ ಯೋಜನೆ ಪ್ರಕಾರ ನಿರುದ್ಯೋಗಿಗಳಿ ಮಾಸಿಕ ಭತ್ಯೆ ನೀಡುವ ಭರವಸೆ ವ್ಯಕ್ತಪಡಿಸಲಾಗಿತ್ತು. ಕಾಂಗ್ರೆಸ್‌ ಪಕ್ಷ ತನ್ನ ಪ್ರಣಾಳಿಕೆಯಲ್ಲೂ ಇದನ್ನು ಘೋಷಿಸಿತ್ತು. ಆದರೆ, ಸರ್ಕಾರ ರಚನೆಯಾದ ಬಳಿಕ ಎಲ್ಲ ಗ್ಯಾರೆಂಟಿ ಯೋಜನೆಗಳಿಗೂ ಷರತ್ತುಗಳನ್ನು ಅನ್ವಯಿಸಿ ಜಾರಿಗೊಳಿಸುತ್ತಿದೆ.

ಇದರಂತೆ ಜೂನ್‌ ತಿಂಗಳು ಕರ್ನಾಟಕ ಸರ್ಕಾರವು ಗ್ಯಾರಂಟಿ ಯೋಜನೆಗಳ ಜಾರಿಗೆ ತೀರ್ಮಾನಿಸಿದ ಬಳಿಕ ಯುವನಿಧಿ ಫಲಾನುಭವಿಗಳ ಅರ್ಹತೆ ವಿಚಾರವಾಗಿ ಅಧಿಕೃತ ಆದೇಶ ಪ್ರಕಟಿಸಿತ್ತು. ಇದರಲ್ಲಿ ಕರ್ನಾಟಕ ಯುವನಿಧಿ ಯೋಜನೆಯ ಅರ್ಹತೆ, ಷರತ್ತುಗಳು, ಅರ್ಜಿಸಲ್ಲಿಸುವ ವಿಧಾನಗಳನ್ನು ನಮೂದಿಸಿದೆ. ಯುವ ನಿಧಿ ಯೋಜನೆ ಕುರಿತಾದ ಎಲ್ಲ ಪ್ರಶ್ನೆಗಳಿಗೂ ಇಲ್ಲಿದೆ ಉತ್ತರ.

ಕರ್ನಾಟಕ ಯುವ ನಿಧಿ ಯೋಜನೆ ಯಾರಿಗೆ ಏನು ಸೌಲಭ್ಯ

ಕರ್ನಾಟಕ ಯುವ ನಿಧಿ ಯೋಜನೆಯ ಫಲಾನುಭವಿಯಾಗುವುದಕ್ಕೆ ಇರಬೇಕಾದ ಅರ್ಹತೆ ಮತ್ತು ಸಿಗುವ ಭತ್ಯೆ ವಿವರ ಹೀಗಿದೆ. 2022- 23ನೇ ಸಾಲಿನಲ್ಲಿಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಸಿಗದ, ವೃತ್ತಿಪರ ಕೋರ್ಸ್‌ ಒಳಗೊಂಡು ಎಲ್ಲ ಪದವೀಧರರಿಗೆ ಪ್ರತಿ ತಿಂಗಳು 3,000 ರೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂಪಾಯಿ ನಿರುದ್ಯೋಗ ಭತ್ಯೆ ಸಿಗಲಿದೆ. ಈ ಭತ್ಯೆಯು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಗೆ ಸಿಗಲಿದೆ.

ಕರ್ನಾಟಕ ಯುವ ನಿಧಿ ಯೋಜನೆ ಷರತ್ತುಗಳೇನು

  1. ‘ಸೇವಾ ಸಿಂಧು’ ಪೋರ್ಟಲ್‌ ಮೂಲಕವೇ ಅರ್ಜಿ ಸಲ್ಲಿಸಬೇಕು
  2. ನಿರುದ್ಯೋಗ ಸ್ಥಿತಿ ಬಗ್ಗೆ ಸ್ವಯಂ ಘೋಷಣೆ ಸಾಕು.
  3. ಪದವಿ/ ಡಿಪ್ಲೊಮಾ ಮುಗಿಸಿದ ಫ್ರೆಷರ್ಸ್‌ಗೆ 6 ತಿಂಗಳಾದರೂ ಉದ್ಯೋಗ ಸಿಗದೆ ಇದ್ದರೆ ಅಂತಹ ಕನ್ನಡಿಗರಿಗೆ ಅನ್ವಯ
  4. ಈ ಯೋಜನೆಯು ಪ್ರತಿ ಫಲಾನುಭವಿಗೆ 2 ವರ್ಷಗಳಿಗೆ ಮಾತ್ರ ಸೀಮಿತ. 2 ವರ್ಷಗಳೊಳಗೆ ಉದ್ಯೋಗ ದೊರೆತರೆ ಯೋಜನೆ ಸೌಲಭ್ಯ ಸ್ಥಗಿತ
  5. ಪ್ರತಿ ತಿಂಗಳು ಡಿಬಿಟಿ ಮೂಲಕ ಹಣ ಪಾವತಿ ಆಗಲಿದೆ.
  6. ಉದ್ಯೋಗ ದೊರೆತ ನಂತರ ಘೋಷಣೆ ಮಾಡಿಕೊಂಡು ಭತ್ಯೆ ಸ್ವೀಕರಿಸುವುದನ್ನು ನಿಲ್ಲಿಸಬೇಕು. ಇಲ್ಲದೇ ಇದ್ದರೆ ದಂಡ ವಿಧಿಸಲಾಗುತ್ತದೆ..

ಯುವನಿಧಿ ಯೋಜನೆಗೆ ಅರ್ಹರಲ್ಲದವರು ಇವರು

ಉನ್ನತ ವ್ಯಾಸಂಗಕ್ಕೆ ದಾಖಲಾಗುವವರು ಮತ್ತು ವಿದ್ಯಾಭ್ಯಾಸ ಮುಂದುವರಿಸುವವರು. ಅದೇ ರೀತಿ, ಶಿಶಿಕ್ಷು (ಅಪ್ರೆಟೀಸ್‌) ವೇತನ ಪಡೆಯುತ್ತಿರುವವರು. ಸರಕಾರಿ/ ಖಾಸಗಿ ಉದ್ಯೋಗ ಪಡೆದಿರುವವರು. ಹಾಗೆಯೇ ಸರಕಾರದ ನಾನಾ ಯೋಜನೆಗಳಡಿ ಅಥವಾ ಬ್ಯಾಂಕ್‌ ಸಾಲ ಪಡೆದು ಸ್ವಯಂ ಉದ್ಯೋಗ ಶುರುಮಾಡಿದವರು.

ಕರ್ನಾಟಕ ಯುವ ನಿಧಿ ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲಾತಿ ಬೇಕು

  1. ಮತದಾರರ ಗುರುತಿನ ಚೀಟಿ.
  2. ಆಧಾರ್‌ ಕಾರ್ಡ್‌
  3. ಬ್ಯಾಂಕ್‌ ಖಾತೆ ಮಾಹಿತಿ
  4. ಪದವಿ ಅಂಕಪಟ್ಟಿ ಹಾಗೂ ವಿಶ್ವವಿದ್ಯಾಲಯ ಪದವಿ ಪ್ರಮಾಣ ಪತ್ರ
  5. ಡಿಪ್ಲೊಮಾ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರ.

ಕರ್ನಾಟಕ ಯುವ ನಿಧಿ ಅರ್ಜಿ ಸಲ್ಲಿಸುವುದು ಎಲ್ಲಿ

ಯುವನಿಧಿಗೆ ಅರ್ಹತೆ ಹೊಂದಿರುವ ಯುವಕ ಯುವತಿಯರು ‘ಸೇವಾ ಸಿಂಧು’ ಪೋರ್ಟಲ್‌ನಲ್ಲಿಅರ್ಜಿ ಸಲ್ಲಿಸಬೇಕು. ಹಲವು ಸರ್ಕಾರಿ ಯೋಜನೆಗಳ ಸವಲತ್ತು ಪಡೆಯುವ ತಾಣ ಇದು. ಇದರಲ್ಲಿ ಈಗ ಯುವ ನಿಧಿ ಕೂಡಾ ಸೇರ್ಪಡೆಯಾಗಿದೆ. ಆದರೆ ಅರ್ಜಿ ಸಲ್ಲಿಕೆಗೆ ಇನ್ನೂ ವಿಂಡೋ ಓಪನ್‌ ಆಗಿಲ್ಲ.

RELATED ARTICLES

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!