Wednesday, September 27, 2023

ರಾಷ್ಟ್ರದ ಮಹಾನ್ ವ್ಯಕ್ತಿಗಳಿಗೆ ದೊಡ್ಡ ಕಂಟಕ : ಕೋಡಿಮಠದ ಶ್ರೀ ಸ್ಪೋಟಕ ಮಾಹಿತಿ.!

ವಿವೇಕ ವಾರ್ತೆ ಬರುವ 2024ರ ಯುಗಾದಿ ವೇಳೆಗೆ ದೇಶದಲ್ಲಿ ಮತ್ತೊಂದು ದುರ್ಘಟನೆ ಸಂಭವಿಸುತ್ತದೆ ಎಂದು ಕೋಡಿಮಠದ ಪೀಠಾಧ್ಯಕ್ಷ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಭವಿಷ್ಯ ನುಡಿದಿದ್ದಾರೆ.

ರಾಷ್ಟ್ರದ ಮಹಾನ್ ವ್ಯಕ್ತಿಗಳಿಗೆ ದೊಡ್ಡ ಕಂಟಕವಿದ್ದು, ಆಳುವವರು ಎಚ್ಚರ ವಹಿಸಿದರೆ ಅದನ್ನು ತಪ್ಪಿಸಬಹುದು ಎಂದು ಸ್ವಾಮಿಜೀ ಹೇಳಿದ್ದಾರೆ.

ಅವರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿಯಲ್ಲಿರುವ ಕೋಡಿಮಠದಲ್ಲಿ ಮಾತನಾಡಿ, “ದೇಶದಲ್ಲಿ ಮತ್ತೊಂದು ದುರ್ಘಟನೆ ನಡೆಯುತ್ತದೆ, ಜಗತ್ತಿನ ಸಾಮ್ರಾಟರೆಲ್ಲಾ ತಲ್ಲಣವಾಗುವ ಕಾಲ ಬರುತ್ತದೆ. ದೊಡ್ಡ ಪಟ್ಟಣಗಳಿಗೆ ಅಪಾಯದ ಸೂಚನೆಯಿದ್ದು, ದೊಡ್ಡ ದೊಡ್ಡ ಕಟ್ಟಡಗಳು ಕುಸಿಯುವ ಸಾಧ್ಯತೆಯಿದೆ. ಅಲ್ಲದೇ, 2024ರ ಯುಗಾದಿಯೊಳಗೆ ಮೂರು ಮಂದಿ ಮಹಾನ್ ವ್ಯಕ್ತಿಗಳಿಗೆ ಅಪಾಯವಿದೆ. ನಮ್ಮನ್ನು ಆಳುವವರು ಎಚ್ಚರ ವಹಿಸಿದರೆ ಈ ದುರ್ಘಟನೆ ತಪ್ಪಿಸಬಹುದು. ಕಾಲ ಬಂದಾಗ ನಾನೇ ಎಲ್ಲವನ್ನು ವಿವರಿಸುತ್ತೇನೆ. ಜೀವನ ಆಡಂಬರ ರಹಿತವಾಗಿರಬೇಕು. ಆಧ್ಯಾತ್ಮಿಕವಾದ ಚಿಂತನೆ ನಮ್ಮಲ್ಲಿರಬೇಕು”. ಎಂದು ಸ್ವಾಮಿಜೀ ತಿಳಿಸಿದ್ದಾರೆ.

ಇನ್ನು ” ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಆದ್ರೆ, ಕೆಲವರು ಬಹುಬೇಗ ಹಣ ಮಾಡುವ ಆಸೆ ಹೊಂದಿದ್ದಾರೆ. ಅದೇ ಅವರಿಗೆ ಆಪತ್ತು ತಂದುಕೊಡುತ್ತದೆ. ಆಘಾತಗಳು ಸಂಭವಿಸಲಿದೆ, ಆದ್ರೆ ಯಾವುದೇ ತೊಂದರೆಯಿಲ್ಲ. ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಆಗುವ ಸಂಭವವಿದೆ. ಹೀಗಾಗಿ, ಸರ್ಕಾರ ಜನರ ಹಿತಕ್ಕಾಗಿ ಬದಲಾಗಬೇಕಿದೆ ” ಎಂದವರು ಹೇಳಿದರು.

ಮುಂದಿನ ಪ್ರಧಾನಿ ಯಾರಾಗಬೇಕೆಂಬ ಮಾಧ್ಯಮಗಳ ಪ್ರಶ್ನಗೆ ಉತ್ತರ ನೀಡಿದ ಅವರು, ಇಂತಹ ಪ್ರಶ್ನೆಗೆ ಉತ್ತರ ನೀಡುವುದು ಸಾಮಾನ್ಯವಾದ ಸಂಗತಿಯಲ್ಲ. ಅದನ್ನು ಸುಮ್ಮನೆ ಹೇಳುವುದಕ್ಕಾಗುವುದಿಲ್ಲ. ಅದರ ಬಗ್ಗೆ ಜಪ-ತಪಗಳನ್ನು ಮಾಡಬೇಕು. ಆಧ್ಯಾತ್ಮ ಚಿಂತನೆ ಮಾಡಬೇಕಿದೆ. ಪಂಚಾಗ್ನಿ, ಜಲಾಗ್ನಿ, ವಾಯಾಗ್ನಿ ಸೇರಿದಂತೆ 4 ಕಡೆ ಬೆಂಕಿಯನ್ನಿಟ್ಟು, ತಲೆಯ ಮೇಲೆ ಬೆಂಕಿಕುಂಡವಿಟ್ಟು ಧ್ಯಾನ ಮಾಡಬೇಕು.

ಮೊನ್ನೆ ಹಿಮಾಲಯದ ಜೋಶಿಮಠ ಮುಳುಗುವ ಮುನ್ನ ಧ್ಯಾನ ಮಗ್ನನಾಗಿದ್ದೆ. ಏಕಾಏಕಿ ಬೆಂಕಿ ನನ್ನ ಉದರದ ಮೇಲೆ ಬಿದ್ದು, ಗಾಯವಾಯ್ತು. ಆಗ ನನಗೆ ಗೌರಿಶಂಕರ ಶಿಖರಕ್ಕೆ ಮತ್ತು ಜೋಶಿಮಠಕ್ಕೆ ಕಂಟಕವಿದೆ ಎಂದು ಗೊತ್ತಾಯ್ತು. ಹೀಗಾಗಿ ಇಂತಹ ಪ್ರಶ್ನೆಗಳಿಗೆ ಸುಮ್ಮನೆ ಉತ್ತರ ನೀಡಲು ಸಾಧ್ಯವಿಲ್ಲ. ಸಮಯ ಬಂದಾಗ ನಾನೇ ಹೇಳುತ್ತೇನೆ ಎಂದು ಸ್ವಾಮಿಜೀ ತಿಳಿಸಿದರು.

RELATED ARTICLES

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!