ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.
ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್ ನಾಯ್ಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
10 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಎಆರ್ಒ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿ ಚಂದ್ರಪ್ಪ ಬೀರಜ್ಜನವರ್, ಹೆಗ್ಗನಹಳ್ಳಿ ನಿವಾಸಿ ಸೋಮಶೇಖರ್ ಎಂಬುವರರಿಗೆ ಖಾತಾ ದಾಖಲಾತಿ ನೀಡಲು ಒಟ್ಟು 60 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಮುಂಚಿತವಾಗಿ 10 ಸಾವಿರ ರೂ. ಹಣ ಪಡೆಯುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಳಿಕ ಲೋಕಾಯುಕ್ತ ಅಧಿಕಾರಿಗಳು, ಚಂದ್ರಪ್ಪ ಬೀರಜ್ಜನವರ್ ಮನೆ ಮೇಲೆ ದಾಳಿ ನಡೆಸಿ 5 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದು, ರಾಣಿಬೆನ್ನೂರಿನಲ್ಲಿ ಇರುವ 6 ಎಕರೆ ಜಮೀನಿನ ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.