ವಿಜಯಪುರ : ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರ ಸಾವು..!

Published on

spot_img
spot_img

ವಿವೇಕವಾರ್ತೆ : ರಾಷ್ಟ್ರೀಯ ಹೆದ್ದಾರಿ 52ರ ಪಕ್ಕದಲ್ಲಿ ನಿಂತವರ ಮೇಲೆ ಲಾರಿಯೊಂದು ಹರಿದು ಸ್ಥಳದಲ್ಲೆ ನಾಲ್ವರು ಬೈಕ್ ಸವಾರರರು ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಹಿಟ್ನಳ್ಳಿ ಟೋಲ್ ನಾಕಾ ಬಳಿ ನಡೆದಿದೆ.

ವಿಜಯಪುರ ನಗರದ ಹೊರವಲಯದ ಸೋಲಾಪುರ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 52ರ ವಿಜಯಪುರ ಹಿಟ್ನಳ್ಳಿ ಟೋಲ್ ನಾಕಾ ಬಳಿ ತಡ ರಾತ್ರಿ ಲಾರಿ ಹರಿದು ನಾಲ್ವರು ಬೈಕ್ ಸವಾರರು ಸಾವಿಗೀಡಾಗಿದ್ದಾರೆ.

ಸಾವಿಗೀಡಾದ ದುರ್ದೈವಿ ಯುವಕರನ್ನು ವಿಜಯಪುರ ವಜ್ರಹನುಮಾನ ನಗರ ನಿವಾಸಿಗಳಾದ ಪ್ರವೀಣ ಪಾಟೀಲ(31), ಶಿವಾನಂದ ಚೌಧರಿ ( 24), ಈರಣ್ಣ ಕೋಲ್ಹಾರ( 26) ಮತ್ತು ಸುನೀಲ ಖಾನಾಪೂರ ( 26) ಎಂದು ಗುರುತಿಸಲಾಗಿದೆ.

ಜಿಲ್ಲೆಯ ಚಡಚಣ ಮೂಲದ ಚಾಲಕ ಸೂರಜ್ ಶಿಂಧೆ ಎಂಬಾತ ಕಂಟೇನರ್ ಲಾರಿ (ಎಂ.ಎಚ್. 12/ಕ್ಯೂಡಬ್ಲ್ಯು 852) ಯನ್ನು ವಿಜಯಪುರ ಕಡೆಯಿಂದ ಆಲಮಟ್ಟಿ ಕಡೆಗೆ ವೇಗವಾಗಿ ಮತ್ತು ಅಜಾಗೃತವಾಗಿಯಾಗಿ ಚಲಾಯಿಸಿಕೊಂಡು ಬಂದು, ರಾಷ್ಟ್ರೀಯ ಹೆದ್ದಾರಿ 52ರ ಪಕ್ಕದಲ್ಲಿ ಎರಡು ಬೈಕುಗಳಲ್ಲಿ ಮಾತನಾಡುತ್ತಾ ನಿಂತಿದ್ದವರ ಮೇಲೆ ಹತ್ತಿಸಿಕೊಂಡು ಹೋಗಿದ್ದಾನೆ.

ಲಾರಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಗಾಯಾಳುಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಘಟನೆ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!