ವಿವೇಕವಾರ್ತೆ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಪುತ್ತೂರಿನ ವ್ಯಕ್ತಿಯೊಬ್ಬ ಕೊನೆಗೆ ಮಹಿಳೆಯನ್ನೇ ಬ್ಲ್ಯಾಕ್ ಮೇಲ್ ಮಾಡಿ ಹಣ ಕೀಳಲು ಯತ್ನಿಸಿದ ಬಗ್ಗೆ ದೂರು ದಾಖಲಾಗಿದೆ.
ಪ್ರಶಾಂತ ಭಟ್ ಮಾಣಿಲ ಎಂಬಾತ ಈ ಕೃತ್ಯವೆಸಗಿದ್ದು, ಈತ ಪುತ್ತೂರಿನ ಆರ್ಲಪದವು ಮೂಲದವನು ಎಂದು ತಿಳಿದುಬಂದಿದೆ.
ಮಹಿಳೆಗೆ ಸಂಗೀತದಲ್ಲಿ ಆಸಕ್ತಿ ಇದ್ದು, ಕ್ಲಬ್ ಹೌಸ್ ಆ್ಯಪ್ನಲ್ಲಿ ಹಾಡುತ್ತಿದ್ದಳು. 2020 ರಲ್ಲಿ ಆ್ಯಪ್ ಮೂಲಕವೇ ಪ್ರಶಾಂತ ಭಟ್ ಪರಿಚಯ ಮಾಡಿಕೊಂಡಿದ್ದನು. ಪರಿಚಯ ಸ್ನೇಹಕ್ಕೆ ತಿರುಗಿ ಪ್ರೇಮಕ್ಕೆ ತಿರುಗಿದೆ.
2023ರ ಜನವರಿ ತಿಂಗಳಲ್ಲಿ ಪ್ರಶಾಂತ್ ಮಹಿಳೆಯನ್ನು ಭೇಟಿಯಾಗಿದ್ದನು. ಲಾಡ್ಜ್’ಲ್ಲಿ ರೂಂ ಮಾಡಿ, ಬಲವಂತವಾಗಿ ಮಹಿಳೆಯ ಮೇಲೆ ಲೈಂಗಿಕ ಕ್ರಿಯೆ ನಡೆಸಿದ್ದ. ಅಲ್ಲದೇ ಅದೇ ಲಾಡ್ಜಿನಲ್ಲಿ ಮತ್ತೊಮ್ಮೆ ಇದೆ ಘಟನೆ ನಡೆದಿದೆ.
ಈ ವೇಳೆ ಪ್ರಶಾಂತ ಆಕೆಯೊಂದಿಗೆ ಖಾಸಗಿ ಕ್ಷಣಗಳ ಫೋಟೋ ಸೆರೆ ಹಿಡಿದಿದ್ದಾನೆ. ಜತೆಗೆ ವಿಡಿಯೊ ಕಾಲ್ ಮಾಡಿ ಅಲ್ಲಿಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಲಾಗಿದೆ. ಮಾತ್ರವಲ್ಲದೆ ಮಹಿಳೆಯಿಂದ ಹಣಕ್ಕೂ ಬೇಡಿಕೆ ಇಟ್ಟಿದ್ದು, ಒಮ್ಮೆ 25 ಸಾವಿರ ಹಣ ನೀಡಿದ್ದಾಳೆ.
ಬಳಿಕ ಆರೋಪಿಯು ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿ ಏಳು ಲಕ್ಷ ರೂ. ಗಳಿಗೆ ಬೇಡಿಕೆ ಇಟ್ಟಿದ್ದಾನೆ.
ಅಲ್ಲದೇ ಮಹಿಳೆಯ ತಾಯಿ ಹಾಗೂ ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದಾನೆ ಎಂದು ಮಹಿಳೆಯು ದೂರಿನಲ್ಲಿ ತಿಳಿಸಿದ್ದಾರೆ.
ಕಾರವಾರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಯು ನ್ಯಾಯಾಂಗ ಬಂಧನದಲ್ಲಿದ್ದಾನೆ.