ಸಾವಿನಲ್ಲೂ ಒಂದಾದ ಸ್ನೇಹಿತರು : ಗೆಳೆಯನ ಸಾವಿನ ಸುದ್ದಿ ಕೇಳಿ ಹೃದಯಾಘಾತ.!

Published on

spot_img
spot_img

ವಿವೇಕ ವಾರ್ತೆ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಲ್ಲಿ, ಎರಡು ದೇಹ ಒಂದೇ ಪ್ರಾಣ ಎನ್ನುವಂತೆ ಇದ್ದ ಜೀವದ ಗೆಳೆಯರಿಬ್ಬರೂ ಸಾವಿನಲ್ಲೂ ಕೂಡ ಒಂದಾದ ಘಟನೆ ನಡೆದಿದೆ.

ಜೀವದ ಗೆಳೆಯರಾದ ಆನಂದ್ (30) ಹಾಗೂ ಸಾಗರ್ (35) ಎಂಬುವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಶಿಕಾರಿಪುರ ತಾಲೂಕಿನ ಪುಣೇದಹಳ್ಳಿಯ ಆನಂದ್ ಹಾಗೂ ನವರಾಜ್, ಸ್ನೇಹಿತನ ಹುಟ್ಟುಹಬ್ಬಕ್ಕೆ ಕೇಕ್ ತರಲು ಬೈಕ್‌ನಲ್ಲಿ ಹೋಗುತ್ತಿದ್ದರು.

ಈ ವೇಳೆ ಶಿಕಾರಿಪುರ ಮತ್ತು ಶಿರಾಳಕೊಪ್ಪದ ನಡುವೆ ಇರುವ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಸಮೀಪ ಎರಡು ಬೈಕ್‌ಗಳು ಮುಖಾಮುಖಿಯಾಗಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಆನಂದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಅದೃಷ್ಟವಶಾತ್ ಬೈಕ್ ನಲ್ಲಿದ್ದ ಇನ್ನೋರ್ವ ಯುವಕ ಬದುಕುಳಿದಿದ್ದಾನೆ.

ಇನ್ನೂ ಬೈಕ್ ನಲ್ಲಿ ತೆರಳುವ ವೇಳೆ ಆನಂದ್ ಮೃತಪಟ್ಟಿದ್ದಾನೆ ಎನ್ನುವ ಸುದ್ದಿ ಬರಸಿಡಿಲಿನಂತೆ ಬಂದು ತಿಳಿಯುತ್ತಿದ್ದಂತೆ ಆತನ ಸ್ನೇಹಿತ ಸಾಗರ್ ಕೂಡಾ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಈ ಕುರಿತು ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!