5 ವರ್ಷದ ಮಗಳನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿ ತಾಯಿ ಆತ್ಮಹತ್ಯೆ..!

Published on

spot_img
spot_img

ವಿವೇಕವಾರ್ತೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ‌ಕೆರೆಬಿಳಚಿ ಬಳಿ ಇರುವ ಸೂಳೆಕೆರೆಯಲ್ಲಿ ತಾಯಿಯೊಬ್ಬಳು 5 ವರ್ಷದ ಮಗಳನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರು ಕವಿತಾ (27) ಹಾಗೂ ನಿಹಾರಿಕಾ (5) ಎಂದು ತಿಳಿದುಬಂದಿದೆ.

ಮೃತ ಕವಿತಾ ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಗ್ರಾಮದ ನಿವಾಸಿ ಮಂಜುನಾಥ ಎಂಬುವರ ಪತ್ನಿ ಎಂದು ತಿಳಿದುಬಂದಿದೆ.

ಕಳೆದ ಶುಕ್ರವಾರ ಮಗಳೊಂದಿಗೆ ನಿಹಾರಿಕಾಳೊಂದಿಗೆ ಕವಿತಾ ಕಾಣೆಯಾಗಿದ್ದರು. ತನ್ನ ಹೆಂಡತಿ ಕಾಣೆಯಾಗಿದ್ದಾಳೆ ಎಂದು ಪತಿ ಮಂಜುನಾಥ್ ಚನ್ನಗಿರಿ ಪೊಲೀಸ್ ಠಾಣೆಗೆ ದೂರು‌ ನೀಡಿದ್ದರು.

ಆದರೆ ಇಂದು ಕೆರೆಯಲ್ಲಿ ತಾಯಿ ಹಾಗೂ ಮಗಳ ಶವ ಪತ್ತೆಯಾಗಿದೆ. ಇನ್ನು ಕವಿತಾ ಕೆರೆಗೆ ಹಾರುವ ಮುನ್ನ ಮಗಳು ನಿಹಾರಿಕಾ ದುಪ್ಪಟ್ಟಾದಿಂದ ಕಟ್ಟಿಕೊಂಡು ಕೆರೆಗೆ ಹಾರಿದ್ದರು ಎನ್ನಲಾಗಿದೆ.

ಇನ್ನೂ ಪತಿ ಹಾಗೂ ಕುಟುಂಬಸ್ಥರು ಕವಿತಾಗೆ ನಿರಂತರ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಕಾರಣದಿಂದಾಗಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕವಿತಾಳ ತವರು ಮನೆಯವರು, ನಮ್ಮ ಮಗಳಿಗೆ ಕಿರುಕುಳ ನೀಡಲಾಗಿದೆ ಎಂದು ಆಕೆಯ ಗಂಡ ಹಾಗೂ ಕುಟುಂಬದವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!