ಬೆಂಗಳೂರು ದಾರುಣ ಘಟನೆ: ಗಂಡನ ಕುಡಿತದ ಹಿನ್ನಲೆಯಲ್ಲಿ ಜಗಳ – ತಾಯಿ ಮಗುವನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಯತ್ನ
ಬೆಂಗಳೂರು ಉತ್ತರ ಜಿಲ್ಲೆಯ ನೆಲಮಂಗಲ ಪೊಲೀಸ್ ಉಪವಿಭಾಗದ ಕೆ.ಜಿ. ಲಕ್ಕೇನಹಳ್ಳಿ ಗ್ರಾಮದಲ್ಲಿ ಒಂದು ದುಃಖದಾಯಕ ಘಟನೆ ನಡೆದಿದೆ. ಗಂಡನೊಂದಿಗೆ ಜಗಳವಾಡಿದ ತಾಯಿಯೊಬ್ಬಳು ತನ್ನ ಐದು ವರ್ಷದ ಮಗುವನ್ನು ಕತ್ತು ಹಿಸುಕಿ ಕೊಂದು, ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ಕೊಲೆಯಾದ ಮಗು ಸಿರಿಯಾಗಿದೆ. ಮಹಾಲಕ್ಷ್ಮಿ ಮತ್ತು ಜಯರಾಂ ಎಂಬ ದಂಪತಿ ಎಂಟು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದರು. ಆದರೆ ಕಳೆದ ಎರಡು ವರ್ಷಗಳಿಂದ ಜಯರಾಂ ಕೆಲಸವಿಲ್ಲದೆ ಮನೆಯಲ್ಲಿ ಕುಳಿತು ಕುಡಿತಕ್ಕೆ ಬೀಳಿದ್ದ. ಈ ಹಿನ್ನೆಲೆಯಲ್ಲಿ ದಂಪತಿಯ ನಡುವೆ ಮನೆಯಲ್ಲಿ ನಿರಂತರ ಜಗಳ ನಡೆಯುತ್ತಿತ್ತು.
ಬುಧವಾರ ಅವರ ನಡುವೆ ಜಗಳ ತೀವ್ರ ರೂಪ ಪಡೆದಿದ್ದು, ಬಳಿಕ ಮಹಾಲಕ್ಷ್ಮಿ ತನ್ನ ಮಗುವನ್ನು ತೆಗೆದುಕೊಂಡು ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾಳೆ. ಈ ವೇಳೆ ಆಕೆಯು ಮಗುವಿನ ಕತ್ತು ಹಿಸುಕಿ ಕೊಂದು, ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಮಾವಿನ ಹಣ್ಣು ತಿಂದು ಸಿಪ್ಪೆ ಎಸೆಯುತ್ತೀರಾ!? ಹಾಗಿದ್ರೆ ಈ ಸ್ಟೋರಿ ನೋಡಿ!
ತಕ್ಷಣವೇ ಮನೆಯವರು ಬಾಗಿಲು ಒಡೆದು ಒಳಗೆ ನುಗ್ಗಿದಾಗ ಘಟನೆಯ ಮಾಹಿತಿ ಬೆಳಕಿಗೆ ಬಂದಿದೆ. ಸ್ಥಳೀಯರು ತಕ್ಷಣ ಮಹಾಲಕ್ಷ್ಮಿಗೆ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ನಡೆದ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಎಸ್ಪಿ ಡಾ. ವೆಂಕಟೇಶ್ ಪ್ರಸನ್ನ ಹಾಗೂ ಸಿಪಿಐ ಮುರಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.