ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

Published on

spot_img
spot_img

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb Threat) ಕರೆ (Call) ಮಾಡಿದ್ದು, ಯುವತಿ (Young Woman) ಬೆಳಗಾವಿ (Belagavi) ಮೂಲದವಳು ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಬೆಳಗಾವಿಯ ಶಾಹುನಗರ ನಿವಾಸಿ ಶೃತಿ ಶೆಟ್ಟಿ ಬೆಂಗಳೂರಿನ ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದಾಳೆ. ಕರೆ ಮಾಡಿದ್ದ ಶೃತಿ ಬೆಂಗಳೂರಿನಲ್ಲಿ ಈ ಮೊದಲು ಅದೇ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಳು. ಹೆಚ್ಚಿನ ವಿದ್ಯಾಭ್ಯಾಸಕ್ಕೆಂದು ಕೆಲಸ ತೊರೆದು ಶೃತಿ ಬಂದಿದ್ದಳು. ವಿದ್ಯಾಭ್ಯಾಸದ ಬಳಿಕ ಶೃತಿಯನ್ನು ರೀ ಜಾಯಿನ್ ಮಾಡಿಕೊಳ್ಳಲು ಕಂಪನಿ ಹಿಂದೇಟು ಹಾಕಿದೆ. ಇದರಿಂದ ಮಾನಸಿಕವಾಗಿ ಕುಗ್ಗಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾಳೆ ಎಂದು ಮೂಲಗಳು ತಿಳಿಸಿವೆ.


ಸದ್ಯ ಶೃತಿಯನ್ನು ವಶಕ್ಕೆ ಪಡೆಯಲು ಬೆಂಗಳೂರಿನ ಪೊಲೀಸ್ ತಂಡ ಬೆಳಗಾವಿಗೆ ಆಗಮಿಸಿತ್ತು. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಪಿಎಸ್‌ಐ ಮೆಹಬೂಬ್ ಹಾಗೂ ಮಹಿಳಾ ಪೊಲೀಸ್ ಪೇದೆ, ಶೃತಿ ಮನೆಗೆ ಆಗಮಿಸಿದ್ದು, ಇವರಿಗೆ ಬೆಳಗಾವಿ ಎಪಿಎಂಸಿ ಠಾಣೆ ಸಿಪಿಐ, ಪಿಎಸ್‌ಐ ಸೇರಿ ಪೊಲೀಸ್ ಸಿಬ್ಬಂದಿ ಸಾಥ್ ನೀಡಿದ್ದಾರೆ.

ಯುವತಿ ಶೃತಿ ಶೆಟ್ಟಿಯನ್ನು ವಿಚಾರಣೆ ನಡೆಸಿದ ಪರಪ್ಪನ ಅಗ್ರಹಾರ ಪೊಲೀಸರು ಹುಸಿ ಬಾಂಬ್ ಕರೆ ಮಾಡಿರುವ ಕುರಿತು ಪ್ರಾಥಮಿಕ ಮಾಹಿತಿ ಪಡೆದಿದ್ದಾರೆ. ಈ ವೇಳೆ ಎರಡನೇ ಬಾರಿಗೆ ಕಂಪನಿಯಲ್ಲಿ ಕೆಲಸಕ್ಕೆ ಸೇರಿಸಿಕೊಳ್ಳದಿದ್ದಕ್ಕೆ ಕರೆ ಮಾಡಿರುವುದಾಗಿ ಯುವತಿ ಹೇಳಿದ್ದಾಳೆ. ತಾಯಿಯ ಮೊಬೈಲ್‌ನಿಂದ ಇಂದು ಬೆಳಗ್ಗೆ ಕರೆ ಮಾಡಿರುವುದಾಗಿ ಶೃತಿ ಹೇಳಿಕೆ ನೀಡಿದ್ದಾಳೆ. ಬಳಿಕ ಬುಧವಾರ ಪರಪ್ಪನ ಅಗ್ರಹಾರ ಠಾಣೆಗೆ ವಿಚಾರಣೆಗೆ ಆಗಮಿಸುವಂತೆ ಶೃತಿಗೆ ನೋಟಿಸ್ ನೀಡಲಾಗಿದೆ. ಯುವತಿ ಶೃತಿ, ಆಕೆಯ ತಂದೆ-ತಾಯಿಗೆ ಠಾಣೆಗೆ ಬರುವಂತೆ ಪೊಲೀಸರು ನೋಟಿಸ್ ನೀಡಿ ತೆರಳಿದ್ದಾರೆ.

ಕೃಪೆ

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...

ದಪ್ಪ ಇದ್ದೀನಿ.. ನೋಡೋಕೆ ಚೆನ್ನಾಗಿ ಕಾಣ್ತಿಲ್ಲ ಅಂತ ಬೆಳಗಾವಿ ಮೂಲದ MBBS ವಿದ್ಯಾರ್ಥಿನಿ ಆತ್ಮಹತ್ಯೆ

ವಿವೇಕವಾರ್ತೆ: ದಪ್ಪ ಇದ್ದೀನಿ. ನೋಡೋಕೆ ಚೆನ್ನಾಗಿ ಕಾಣ್ತಿಲ್ಲ ಎಂದು ಬೇಸರಗೊಂಡು ಎಂಬಿಬಿಎಸ್‌ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ...
error: Content is protected !!