ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣ

Published on

spot_img
spot_img

ಉಡುಪಿ: ಭಾನುವಾರ ಬೆಳಗ್ಗೆ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆ ನಡೆಸಿರುವ ಘಟನೆ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದೆ. ಒಬ್ಬಳ ಮೇಲಿನ ದ್ವೇಷಕ್ಕೆ ಇನ್ನೂ ಮೂವರು ಬಲಿಯಾಗಿರುವುದು ಇದೀಗ ತಿಳಿದುಬಂದಿದೆ.

ಸಂತೆಕಟ್ಟೆ (Santekatte) ನೇಜಾರು (Nejaru) ಸಮೀಪ ತಾಯಿ ಹಸೀನಾ (46), ಅಫ್ನಾನ್ (23), ಅಯ್ನಾಝ್ (21) ಹಾಗೂ ಆಸಿಂನನ್ನು (12) ದುಷ್ಕರ್ಮಿಯೊಬ್ಬ ಮಾರಕಾಸ್ತ್ರಗಳಿಂದ ಇರಿದು ಕೊಲೆ (Murder) ಮಾಡಿದ್ದ. ಏರ್ ಇಂಡಿಯಾ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಅಫ್ನಾನ್ ಮೇಲಿನ ದ್ವೇಷಕ್ಕೆ ದುಷ್ಕರ್ಮಿ ಇನ್ನೂ ಮೂವರನ್ನು ಕೊಲೆ ಮಾಡಿದ್ದಾನೆ.

ಅಫ್ನಾನ್ ಏರ್ ಇಂಡಿಯಾ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಅಯ್ನಾಝ್ ಲಾಜಿಸ್ಟಿಕ್ ಸಂಸ್ಥೆಯಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದರು. ಆಸಿಂ 8ನೇ ತರಗತಿಯಲ್ಲಿ ಓದುತ್ತಿದ್ದ. ತಾಯಿ ಹಸೀನಾ ಗೃಹಿಣಿಯಾಗಿದ್ದಳು. ಕಳೆದ ರಾತ್ರಿ ಅಫ್ನಾನ್ ರಜೆ ಹಿನ್ನೆಲೆ ಉಡುಪಿಗೆ ಬಂದಿದ್ದಳು. ಹಂತಕ ಬೆಂಗಳೂರಿನಿಂದ ಬಂದಿರುವ ಶಂಕೆ ಮೂಡಿದೆ. ಸಾಕ್ಷ್ಯ ನಾಶಮಾಡುವ ಸಲುವಾಗಿ ಉಳಿದ ಮೂವರನ್ನೂ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಆಟೋ ಹತ್ತಿ ಬಂದಿದ್ದ ಹಂತಕ:
ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ನಡೆಸಿದ ಹಂತಕನನ್ನು ತಾನೇ ಕರೆದುಕೊಂಡು ಅವರ ಮನೆಗೆ ಬಿಟ್ಟಿದ್ದಾಗಿ ಸಂತೆಕಟ್ಟೆ ಆಟೋ ಚಾಲಕ ಶ್ಯಾಮ್ ತಿಳಿಸಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ ಅವರು, ನಾನು ಸಂತೆಕಟ್ಟೆ ಆಟೋ ಡ್ರೈವರ್. ಹೂವಿನ ಮಾರ್ಕೆಟ್ ಬಳಿ ನನ್ನ ಆಟೋ ಸ್ಟ್ಯಾಂಡ್‌ ಇದೆ. ಆತ ತೃಪ್ತಿ ಲೇಔಟ್ ಹತ್ತಿರ ಬಿಡುವಂತೆ ಹೇಳಿದ್ದ. ನಾನು ಆತನನ್ನು ಹೇಳಿದೆಡೆಗೆ ತಂದು ಬಿಟ್ಟೆ. ಆ ವ್ಯಕ್ತಿಯನ್ನು ಮನೆಗೆ ಬಿಟ್ಟು 15 ನಿಮಿಷದಲ್ಲಿ ಮತ್ತೆ ಸಂತೆಕಟ್ಟೆಯಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.

ನಮ್ಮ ಆಟೋ ಸ್ಟ್ಯಾಂಡ್‌ನಲ್ಲಿ ಕ್ಯೂ ಸಿಸ್ಟಂ ಇದೆ. ಆತ ವಾಪಸ್ ಹೋಗೋವಾಗ ನನಗೆ ಸಿಕ್ಕಿಲ್ಲ. ನಾನೇ ನಿಮ್ಮನ್ನು ಕರೆದುಕೊಂಡು ಹೋಗುತ್ತಿದ್ದೆ ಎಂದು ಹೇಳಿದೆ. ಆದರೆ ಆತ ಆತುರದಲ್ಲಿ ಬೇರೆ ಆಟೋ ಹತ್ತಿ ಹೋಗಿದ್ದಾನೆ. ನಾವು ಬಾಡಿಗೆ ಮಾಡಿದ ಅರ್ಧ ಗಂಟೆಯಲ್ಲಿ ಈ ಕೃತ್ಯ ನಡೆದಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದು ಹೇಳಿದರು.

ಆ ವ್ಯಕ್ತಿ ಬೆಂಗಳೂರು ಭಾಗದ ಕನ್ನಡವನ್ನು ಮಾತನಾಡುತ್ತಿದ್ದ. ಉಡುಪಿ-ಮಂಗಳೂರು ಕನ್ನಡ ಆತ ಮಾತನಾಡುತ್ತಿರಲಿಲ್ಲ. ಕೃತ್ಯ ನಡೆಸಿ ಅಪರಿಚಿತರ ಬೈಕಿನಲ್ಲಿ ವಾಪಸ್ ಸಂತೆಕಟ್ಟೆಗೆ ಬಂದಿದ್ದಾನೆ. ಆತ ಮಾಸ್ಕ್ ಹಾಕಿದ್ದ. ಬೋಳು ತಲೆ ಮತ್ತು ಬ್ಯಾಗ್‌ ಒಂದನ್ನು ಹಾಕಿಕೊಂಡಿದ್ದ. ಆತ ಟಾರ್ಗೆಟ್ ಮಾಡಿದ್ದ ಮನೆ, ತೃಪ್ತಿ ಲೇಔಟ್ ಬಗ್ಗೆ ಮೊದಲೇ ಮಾಹಿತಿ ಇತ್ತು ಎಂಬುದು ಸ್ಪಷ್ಟವಾಗಿದೆ ಎಂದು ಖಾಸಗ ಟಿವಿಗೆ ಚಾಲಕ ತಿಳಿಸಿದ್ದಾರೆ.

ಕೃಪೆ

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!