ಸಾರ್ವಜನಿಕರ ಎದುರೆ ಪೊಲೀಸ್ ಕಾನ್ಸ್‌ಟೇಬಲ್’ಗೆ ಚಾಕು ಇರಿತ.!

Published on

spot_img
spot_img

ವಿವೇಕವಾರ್ತೆ : ಬೆಂಗಳೂರಿನ ಸದಾಶಿವನಗರ ಠಾಣೆಯ ಪೊಲೀಸ್ ಸಿಬ್ಬಂದಿ ಆರೋಪಿಯನ್ನು ಹಿಡಿಯಲು ಹೋದ ವೇಳೆ ಆತ ಚಾಕು ಇರಿದ ಘಟನೆ ನಡೆದಿದೆ.

ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಸೈಯದ್ ಸಮೀವುಲ್ಲಾ ಎಂಬುವರಿಗೆ ಚಾಕು ಇರಿಯಲಾಗಿದೆ. ಹಸನ್ ಖಾನ್ ಎಂಬಾತ ಚಾಕು ಇರಿದ ಆರೋಪಿಯಾಗಿದ್ದಾನೆ‌.

ಹಸನ್ ಖಾನ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಹೀಗಾಗಿ ಸಿಸಿಬಿಯ ಓ.ಸಿ.ಡಬ್ಲ್ಯೂ ವಿಭಾಗದ ಸಿಬ್ಬಂದಿ ಸೂಚನೆ ಮೇರೆಗೆ ಆರೋಪಿಯ ಅರೆಸ್ಟ್ ಮಾಡಲು ಸೈಯದ್‌ ಸಮೀವುಲ್ಲಾ ಹೋಗಿದ್ದರು.

ಹೆಚ್.ಕೆ.ಪಿ ದರ್ಗಾದ ಸರ್ಕಲ್‌ನ ಗೂಡ್ಸ್‌ ಆಟೋ ಸ್ಟ್ಯಾಂಡ್‌ ಬಳಿ ನಿಂತಿದ್ದ ಹಸನ್‌ ಖಾನ್’ನ್ನು ಹಿಡಿಯಲು ಸೈಯದ್‌ ಸಮೀವುಲ್ಲಾ ತೆರಳಿದ್ದಾರೆ.

ಇದನ್ನು ಕಂಡ ಆರೋಪಿ ತನ್ನ ಬಳಿ ಇದ್ದ ಚೂರಿಯನ್ನು ತೋರಿಸಿದ್ದಾನೆ. ಇದಕ್ಕೆ ಹೆಡ್‌ ಕಾನ್ಸ್‌ಟೇಬಲ್‌ ಜಗ್ಗದೆ ಇದ್ದಾಗ ಸಾರ್ವಜನಿಕರ ಎದುರೇ ಚಾಕು ಇರಿದು, ಕೊಲೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.

ಬಳಿಕ ಸ್ಥಳೀಯರ ನೆರವಿನಿಂದ ಪೊಲೀಸ್ ಹೆಡ್‌ ಕಾನ್ಸ್‌ಟೇಬಲ್ ಬಚಾವ್ ಆಗಿದ್ದಾರೆ.

ಘಟನೆ ಸಂಬಂಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!