ಅಯ್ಯೋ.. ನನಗೆ ವಯಸ್ಸಾಗಿದೆ ಕೆಲಸ ಮಾಡಲ್ಲ ಎಂದಿದ್ದಕ್ಕೆ ದಲಿತ ವೃದ್ಧನ ಮೇಲೆ ಹಲ್ಲೆ..!

Published on

spot_img
spot_img

ವಿವೇಕವಾರ್ತೆ : ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ ದಲಿತ ಸಮುದಾಯದ ವೃದ್ಧರೊಬ್ಬರ ಮೇಲೆ ಮೇಲ್ವರ್ಗದ ಕೆಲವು ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ ಅಮಾನವೀಯ ಘಟನೆ ವರದಿಯಾಗಿದೆ. ಕುರಾರಿ ಗಿರಿಧರ್ ಶಾ ಗ್ರಾಮದಲ್ಲಿ 66 ವರ್ಷದ ಅಚ್ಚೆಬರ್ ಕುಮಾರ್ ಎಂಬುವವರ ಮೇಲೆ ಭೀಕರ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ. ಸತ್ತ ಹಸುವಿನ ಕಳೇಬರವನ್ನು ಎತ್ತಲು ನಿರಾಕರಿಸಿದ ಕಾರಣಕ್ಕೆ ವೃದ್ಧನನ್ನು ಅಮಾನುಷವಾಗಿ ಥಳಿಸಲಾಗಿದೆ. ಅವರ ಕಾಲಿನ ಮೂಳೆ ಮುರಿದಿದ್ದು, ದೇಹದ ವಿವಿಧ ಭಾಗಗಳಲ್ಲಿ ಗಾಯಗಳಾಗಿವೆ.  ಅಬ್ಬಾ.. ನಿಜವಾದ ವಕೀಲನಂತೆ ನಟಿಸಿ 26 ಕೇಸ್’ಗಳನ್ನು ಗೆದ್ದಿದ್ದ ನಕಲಿ ಲಾಯರ್ ಅರೆಸ್ಟ್..!

ಹಲವು ಗಂಟೆಗಳ ಕಾಲ ಹಲ್ಲೆ ನಡೆಸಿದ ಬಳಿಕ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅಚ್ಚೆಬರ್ ಕುಮಾರ್ ಅವರನ್ನು ಮೇಲ್ವರ್ಗದ ಜನರು ಕಾಲುವೆಯೊಂದರ ಬಳಿ ಎಸೆದು ಹೋಗಿದ್ದರು ಎಂದು ದಿನಗೂಲಿ ಕಾರ್ಮಿಕರಾಗಿರುವ ಸಂತ್ರಸ್ತನ ಮಗ ಕೃಷ್ಣ ಕುಮಾರ್ ತಿಳಿಸಿದ್ದಾರೆ. “ಅವರು ನನ್ನ ತಂದೆಯನ್ನು ಪ್ರಾಣಿಗಳಿಗಿಂತಲೂ ಕಡೆಯಾಗಿ ನಡೆಸಿಕೊಂಡಿದ್ದಾರೆ. ಅಲ್ಲಿ ನಡೆದಿದ್ದು ಏನು ಎಂದು ಪ್ರತಿಯೊಬ್ಬರೂ ನೋಡಿದ್ದಾರೆ. ಆದರೆ ಭಯದಿಂದಾಗಿ ಅದರ ಬಗ್ಗೆ ಒಬ್ಬರೂ ಮಾತನಾಡುವ ಧೈರ್ಯ ಮಾಡುತ್ತಿಲ್ಲ” ಎಂದು ಅವರು ಹೇಳಿದ್ದಾರೆ. ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?

ಸಂತ್ರಸ್ತನ ಮಗ ಕೃಷ್ಣ ಕುಮಾರ್ ನೀಡಿದ ದೂರಿನ ಅನ್ವಯ ಪೊಲೀಸರು ಆಶೀಶ್ ಸಿಂಗ್ ಎಂಬ 27 ವರ್ಷದ ವ್ಯಕ್ತಿ ವಿರುದ್ಧ ಸೋಮವಾರ ಪ್ರಕರಣ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 323 (ಉದ್ದೇಶಪೂರ್ವಕವಾಗಿ ಘಾಸಿ ಮಾಡುವುದು), 325 (ಗಂಭೀರ ಗಾಯಕ್ಕೆ ಕಾರಣವಾಗುವುದು) ಮತ್ತು 504 (ಶಾಂತಿ ಕಡಲು ಪ್ರಚೋದನೆ ನೀಡುವ ಉದ್ದೇಶಪೂರ್ವಕ ಅವಮಾನ) ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!