Suspend; ಅತ್ತಿಬೆಲೆ ಪಟಾಕಿ ದುರಂತ, ನಾಲ್ವರು ಅಧಿಕಾರಿಗಳು ಅಮಾನತು

Published on

spot_img
spot_img

ವಿವೇಕವಾರ್ತೆ;- ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜಿಲ್ಲಾಧಿಕಾರಿ ನೀಡಿರುವ ವರದಿ ಆಧರಿಸಿ ಕರ್ತವ್ಯ ನಿರ್ಲಕ್ಷ್ಯತೆ ಆರೋಪದ ಮೇಲೆ ತಹಸೀಲ್ದಾರ್ ಶಶಿಧರ ಮಾಡ್ಯಾಳ್ ಅತ್ತಿಬೆಲೆ ನಾಡಕಚೇರಿ ಉಪತಹಸೀಲ್ದಾರ್ ಶ್ರೀಧರ್.ವಿ.ಸಿ ಅತ್ತಿಬೆಲೆ ವೃತ್ತದ ರಾಜಸ್ವ ನಿರೀಕ್ಷಕ ಪುಷ್ಪರಾಜ್.ಎ ಹಾಗೂ ಗ್ರಾಮ ಆಡಳಿತಾಧಿಕಾರಿ ಭಾಗೇಶ್ ಹೊಸಮನೆ ಅವರನ್ನು ಇಲಾಖೆ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತು ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

ಅಮಾನತು ಅವಧಿಯಲ್ಲಿ ನಿಯಮಾನುಸಾರ ಜೀವನ ಆಧಾರ ಭತ್ಯೆಯನ್ನು ಪಡೆಯಲು ಅರ್ಹರಾಗಿದ್ದು, ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಹಸಿರು ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ಕಾರಣರಾದ ಮತ್ತು ಅಸಮರ್ಪಕ ವರದಿ ಸಲ್ಲಿಸಲು ಕಾರಣರಾದ ಆರೋಪದ ಮೇಲೆ ಶಿಸ್ತು ಕ್ರಮ ಜರುಗಿಸಲು ತೀರ್ಮಾನಿಸಿ ಜಂಟಿ ಇಲಾಖೆ ವಿಚಾರಣೆಯನ್ನು ಬಾಕಿ ಇರಿಸಿ ಸೇವಾ ನಿಯಮಗಳ ಅನ್ವಯ ಅಮಾನತುಗೊಳಿಸಲಾಗಿದೆ.

Source link

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!