Sunday, October 1, 2023

ಆಂಟಿ ಪ್ರೀತ್ಸೆ ಎಂದವನಿಗೆ NO ಅಂದಿದ್ದಕ್ಕೆ ಉಗ್ರ ಪ್ಲ್ಯಾನ್‌; ಮಿಕ್ಸಿ ಬಾಂಬ್‌ ಕಳಿಸಿದ್ದ ಪಾಗಲ್‌ ಪ್ರೇಮಿ!

ಇಲ್ಲಿನ ಕೊರಿಯರ್ ಶಾಪ್‌ನಲ್ಲಿ ಮಿಕ್ಸಿ ಬ್ಲಾಸ್ಟ್ (Hassan Blast) ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ವಿಚ್ಛೇದಿತ ಮಹಿಳೆಯೊಬ್ಬರ ಹಿಂದೆ ಬಿದ್ದಿದ್ದ ಪಾಗಲ್‌ ಪ್ರೇಮಿ, ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಆಕೆಯನ್ನು ಮುಗಿಸಲು ಸ್ಕೆಚ್‌ ಹಾಕಿ ಮಿಕ್ಸಿ ಬಾಂಬ್‌ ಕಳಿಸಿದ್ದ ಎಂಬ ಸಂಗತಿ ಬಯಲಾಗಿದೆ.

ನಗರದ ಕೆ.ಆರ್.ಪುರಂ ಸಬ್ ರಿಜಿಸ್ಟ್ರಾರ್ ಕಚೇರಿ ರಸ್ತೆಯಲ್ಲಿನ ಅಂಗಡಿಯಲ್ಲಿ ಸೋಮವಾರ (ಡಿ. ೨೬) ಸಂಜೆ ಮಿಕ್ಸಿ ಸ್ಫೋಟಗೊಂಡು ಆತಂಕಕ್ಕೆ ಕಾರಣವಾಗಿತ್ತು. ಇದು ಉಗ್ರ ಕೃತ್ಯ ಇರಬಹುದೇ ಎಂಬ ಶಂಕೆಯೂ ವ್ಯಕ್ತವಾಗಿತ್ತು. ಆದರೆ, ಈ ಮಧ್ಯೆ ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುದ್ದಿಗೋಷ್ಠಿ ನಡೆಸಿ ಉಗ್ರ ಕೃತ್ಯವಲ್ಲ, ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆಸಿರುವ ಸ್ಫೋಟ ಎಂಬ ಮಾಹಿತಿ ನೀಡಿದ್ದರು. ಈಗ ಸಂಪೂರ್ಣ ತನಿಖೆ ನಡೆಸಿರುವ ಪೊಲೀಸರು ಇದು ಪಾಗಲ್‌ ಪ್ರೇಮಿಯೊಬ್ಬನ ಕೃತ್ಯ ಎಂಬುದನ್ನು ಬಯಲಿಗೆಳೆದಿದ್ದಾರೆ.

ಏನಿದು ಪ್ರಕರಣ?
ಬೆಂಗಳೂರು ಮೂಲದ ಪಾಗಲ್‌ ಪ್ರೇಮಿಯೊಬ್ಬ ಹಾಸನದ ಮಹಿಳೆಯೊಬ್ಬಳ ಹಿಂದೆ ಬಿದ್ದಿದ್ದ. ಆದರೆ, ಆತನ ಪ್ರೀತಿಯನ್ನು ಆಕೆ ನಿರಾಕರಿಸುತ್ತಲೇ ಬಂದಿದ್ದಳು ಎನ್ನಲಾಗಿದೆ. ಈ ಸಂಬಂಧ ಇಬ್ಬರ ನಡುವೆ ಗಲಾಟೆಯೂ ನಡೆದಿತ್ತು. ಎರಡು ಬಾರಿ ತನ್ನ ವಿಳಾಸ ಬರೆಯದೆ ಆತ ಆ ಮಹಿಳೆಯ ವಿಳಾಸಕ್ಕೆ ಕೊರಿಯರ್ ಮೂಲಕ ಕೆಲವು ವಸ್ತುಗಳನ್ನು ಕಳಿಸಿದ್ದರೂ ಆಕೆ ಅದನ್ನು ಕಸದ ಬುಟ್ಟಿಗೆ ಹಾಕಿದ್ದಳು. ಈ ಹಿನ್ನೆಲೆಯಲ್ಲಿ ವ್ಯಗ್ರನಾದ ಆತ ಉಗ್ರ ರೀತಿಯಲ್ಲಿ ಪ್ಲ್ಯಾನ್‌ ಮಾಡಿದ್ದ. ಆಕೆಯನ್ನೇ ಕೊಂದು ಹಾಕಲು ಮುಂದಾಗಿದ್ದ. ಇದರ ಭಾಗವಾಗಿ ಮಿಕ್ಸರ್‌ನಲ್ಲಿ ಸ್ಫೋಟಕವನ್ನು ಇಟ್ಟು ಕಳುಹಿಸಿದ್ದ.

ಆದರೆ, ಈ ಬಾರಿ ಮತ್ತೆ ಫ್ರಂ ಅಡ್ರೆಸ್‌ ಇಲ್ಲದೆ ಬಂದ ಕೊರಿಯರ್‌ ಅನ್ನು ಮಹಿಳೆ ಎಸೆಯದೆ ಪುನಃ ಕೊರಿಯರ್‌ ಶಾಪ್‌ಗೆ ತಂದುಕೊಟ್ಟು ಅದನ್ನು ವಾಪಸ್‌ ಮಾಡುವಂತೆ ಹೇಳಿದ್ದಳು. ಆಗ, ಶಾಪ್‌ ಮಾಲೀಕ ಶಶಿ ಅದನ್ನು ವಾಪಸ್‌ ಕಳುಹಿಸಲು ೩೫೦ ರೂಪಾಯಿ ಶುಲ್ಕವನ್ನು ಕೇಳಿದ್ದ. ಆದರೆ, ಹಣ ಕೊಡಲು ನಿರಾಕರಿಸಿದ ಮಹಿಳೆ, ಇದು ನನಗೆ ಸಂಬಂಧಪಟ್ಟಿದ್ದಲ್ಲ, ನೀವು ಏನಾದರೂ ಮಾಡಿ ಎಂದು ಹೊರ ನಡೆದಿದ್ದಳು.

ಕೊರಿಯರ್‌ ಅಂಗಡಿ ಮಾಲೀಕ ಶಶಿ ಆ ಪಾರ್ಸೆಲ್‌ ಬಾಕ್ಸ್‌ನಲ್ಲಿ ಏನಿದೆ ಎಂಬುದನ್ನು ಕುತೂಹಲದಿಂದ ತೆರೆದು ನೋಡಿದ್ದ. ಅದರೊಳಗೆ ಮಿಕ್ಸಿ ಇರುವುದನ್ನು ಕಂಡು ಪರಿಶೀಲನೆ ಮಾಡಲು ಮುಂದಾಗಿದ್ದ. ಹೀಗೆ ಪರಿಶೀಲಿಸುವಾಗ ಮಿಕ್ಸಿ ಬ್ಲಾಸ್ಟ್ ಆಗಿ ಗಂಭೀರವಾಗಿ ಗಾಯಗೊಂಡಿದ್ದಾನೆ.

ಸಣ್ಣ ಪ್ರಮಾಣದ ಸ್ಫೋಟಕ ಇಟ್ಟಿದ್ದ ಪಾಗಲ್‌ ಪ್ರೇಮಿ
ಆ ಮಹಿಳೆ ತನ್ನ ಪ್ರೀತಿಯನ್ನು ನಿರಾಕರಣೆ ಮಾಡಿದ್ದರಿಂದ ಅವಳನ್ನು ಕೊಂದೇ ಬಿಡಲು ಯೋಚಿಸಿದ ಆರೋಪಿ ಮಿಕ್ಸಿಯೊಳಗೆ ಸಣ್ಣ ಪ್ರಮಾಣದ ಸ್ಫೋಟಕ ಇಟ್ಟಿದ್ದ. ಅದನ್ನು ಆನ್ ಮಾಡಿದರೆ ಬ್ಲಾಸ್ಟ್ ಆಗುವಂತೆ ಪ್ಲ್ಯಾನ್ ಮಾಡಿದ್ದ. ಆದರೆ, ಫ್ರಂ ಅಡ್ರೆಸ್‌ ಇಲ್ಲದೇ ಇದ್ದುದರಿಂದ ಇದು ಆತನದ್ದೇ ಗಿಫ್ಟ್‌ ಎಂದು ಭಾವಿಸಿದ ಮಹಿಳೆ ಆ ಕೊರಿಯರ್ ಬಾಕ್ಸ್ ಅನ್ನು ಓಪನ್ ಮಾಡದೆಯೇ ಹಿಂದಿರುಗಿಸಿದ್ದಳು. ಹಾಗಾಗಿ ಆಕೆ ಅಪಾಯದಿಂದ ಪಾರಾದಳು.

ಆರೋಪಿ ವಶಕ್ಕೆ
ಕೊರಿಯರ್ ಮಾಡಿದ್ದಾನೆನ್ನಲಾದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಹಾಸನದ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ, ಆರೋಪಿಯ ವಿವರವನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.

RELATED ARTICLES

ಪ್ರೇಮಿಗಳಿಗೆ ರೂಂ ಕೊಟ್ಟು ಖಾಸಗಿ ವೀಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‍ಮೇಲ್ ; ಇಬ್ಬರು ಅಂದರ್..!

ವಿವೇಕವಾರ್ತೆ : ಬೆಂಗಳೂರಿನ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿರುವ ಹೋಟೆಲ್​ನಲ್ಲಿ ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ...

ಗನ್​ ತೋರಿಸಿ ಮಹಿಳಾ ಕಾನ್ಸ್​ಟೇಬಲ್​​​ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ : ಪ್ರಕರಣ ದಾಖಲು

ವಿವೇಕವಾರ್ತೆ : ಮಹಿಳಾ ಪೊಲೀಸ್​ ಪೇದೆ ಮೇಲೆ ಸಹೋದ್ಯೋಗಿಯೇ ಹಲವು ಬಾರಿ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಲ್ಲಿನ ಸ್ವರ್ಗೇಟ್​ ಪೊಲೀಸ್​ ಕಾಲೋನಿಯನ್ನು ಗನ್​ನಿಂದ ಬೆದರಿಸಿ ಮಹಿಳಾ ಪೊಲೀಸ್​ ಕಾನ್ಸ್​ಟೇಬಲ್​​​​​...

ಬೆಂಗಳೂರಲ್ಲಿ ‘ಕಾಮುಕ ಟೆಕ್ಕಿ’ ಅಂದರ್ : ಚೆಂದ ಚೆಂದದ ಆಂಟಿಯರೇ ಈತನ ಟಾರ್ಗೆಟ್.!

ವಿವೇಕವಾರ್ತೆ : ಬೆಂಗಳೂರಿನಲ್ಲೊಬ್ಬ ಕಾಮುಕ ಟೆಕ್ಕಿ ಪೊಲೀಸರ ಬಲೆಗೆ ಬಿದ್ದಿದ್ದು, ಈತನ ಕಥೆ ಕೇಳಿದ್ರೆ ನೀವೇ ಶಾಕ್ ಆಗ್ತೀರಾ.ಚೆಂದ ಚೆಂದದ ಫೋಟೋ ಹಾಕುವ ಆಂಟಿಯರಿಗೆ ರಿಕ್ವೆಸ್ಟ್ ಕಳುಹಿಸುತ್ತಿದ್ದ ಕಾಮುಕ ಫೈಜಲ್ ಎಂಬಾತನನ್ನು ಪೊಲೀಸರು...
- Advertisment -

Most Popular

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
error: Content is protected !!