Bengaluru: ಕಾರ್ ಪೂಲಿಂಗ್ ವಿಚಾರ: ಸಂಸದ ತೇಜಸ್ವಿ ಸೂರ್ಯಗೆ ಎಚ್ಚರಿಕೆ ಕೊಟ್ಟ ಖಾಸಗಿ ಸಾರಿಗೆ ಒಕ್ಕೂಟ

Published on

spot_img
spot_img

ವಿವೇಕವಾರ್ತೆ;- ಸಂಸದ ತೇಜಸ್ವಿ ಸೂರ್ಯ ವಿರುದ್ಧ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ‘ಕಾರ್ ಪೂಲಿಂಗ್’ ಬಂದ್ ಮಾಡದಂತೆ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದ್ದು, ಪತ್ರ ವಾಪಸ್ ಪಡೆಯಲು ಆಗ್ರಹಿಸಿದೆ.

ಈ ಸಂಬಂಧ ಮಾತನಾಡಿದ ಅವರು, ಸೆಪ್ಟೆಂಬರ್ 11ರಂದು ಬೆಂಗಳೂರು ಬಂದ್ ಮಾಡಿ ಎಲ್ಲಾ ಕಾನೂನು ಬಾಹಿರ ಆಯಪ್ ಆಧಾರಿತ ಕಂಪನಿಗಳ ಮೇಲೆ ಕ್ರಮ ಜರುಗಿಸುವಂತೆ ನಾವು ಆಗ್ರಹಿಸಿದ್ದೆವು.

ಸಾರಿಗೆ ಸಚಿವರು ಕ್ರಮ ಕೈಗೊಳ್ಳುವ ಭರವಸೆಯನ್ನೂ ನೀಡಿದ್ದರು. ಈ ನಡುವೆ ಸಂಸದ ತೇಜಸ್ವಿ ಸೂರ್ಯ ಸಿಎಂಗೆ ಪತ್ರ ಬರೆದು ಕಾರ್ ಪೂಲಿಂಗ್ ನಿಷೇಧಿಸದಂತೆ ಆಗ್ರಹಿಸಿದ್ದಾರೆ. ತೇಜಸ್ವಿ ಸೂರ್ಯ ಸಂಸದ ಆಗುವ ಮೊದಲು ವಕೀಲರಾಗಿದ್ದರು. ಕಾನೂನು ದಿಕ್ಕರಿಸುವುದು ಅಪರಾಧ ಎನ್ನುವ ಸಾಮಾನ್ಯ ಜ್ಞಾನ ಕೂಡ ಅವರಿಗೆ ಇಲ್ಲ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ನಾವು ಪತ್ರ ಬರೆದಿದ್ದೆವೆ ಎಂದರು.

ಕಾರ್ ಪೂಲಿಂಗ್ ನಿಷೇಧಿಸದಂತೆ ಒತ್ತಾಯಿಸಲು ಮೋಹನ್ ದಾಸ್ ಪೈ ಎಂಬ ಉದ್ಯಮಿ ಸಂಸದರಿಗೆ ಬೆಂಬಲ ನೀಡುತ್ತಿದ್ದಾರೆ. ಹಾಗಾಗಿ, ಸಂಸದರು ಸಿಎಂಗೆ ಬರೆದಿರುವ ಪತ್ರ ವಾಪಾಸ್ ಪಡೆಯಲು ನಾವು 4 ದಿನಗಳ ಕಾಲಾವಕಾಶ ನೀಡುತ್ತೇವೆ. ಪತ್ರ ವಾಪಾಸ್ ಪಡೆಯದಿದ್ದರೆ ಜಯನಗರದ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ಇಲ್ಲದಿದ್ದರೆ ಸಂಸದರ ಮುಂದೆ ಕಪ್ಪು ಬಟ್ಟೆ ಪ್ರದರ್ಶನ ಮಾಡುತ್ತೇವೆ ಎಂದು ಹೇಳಿದರು.

ಅನುಮತಿ ಪಡೆಯದೆ ಪೂಲಿಂಗ್ ಮಾಡಿ ಯಾರಿಗೆ ಏನಾದರು ಸಂಭವಿಸಿದರೆ ಜನರಿಗೆ ಇನ್ಸೂರೆನ್ಸ್ ಯಾರು ಕೊಡ್ತಾರೆ. ಸರ್ಕಾರ ತೇಜಸ್ವಿ ಸೂರ್ಯ ಅವರನ್ನು ಬೆಂಬಲಿಸಿ ಕಾರ್ ಪೋಲಿಂಗ್ ಗೆ ಅವಕಾಶ ಕೊಟ್ರೆ ಸರ್ಕಾರದ ವಿರುದ್ಧ ಕೂಡ ಪ್ರತಿಭಟನೆ ಮಾಡ್ತೀವಿ. ಹಾಗೇನಾದರೂ ಕಾರ್ ಪೂಲಿಂಗ್ ಗೆ ಅವಕಾಶ ಕೊಡುವುದಾದರೆ ನಮಗೂ ಕೊಡಿ, ನಾವೂ ವೈಟ್ ಬೋರ್ಡ್ ವಾಹನದಲ್ಲಿ ಬಾಡಿಗೆ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Source link

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!