Breaking; ಕಿಲ್ಲರ್ ಬಿಎಂಟಿಸಿಗೆ ಸಿಲುಕಿ 3 ವರ್ಷದ ಕಂದಮ್ಮ ಸಾವು

Published on

spot_img
spot_img

ವಿವೇಕವಾರ್ತೆ ;- ನಗರದ ಹುಳಿಮಾವು ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಬಿಎಂಟಿಸಿ ಬಸ್ ಹರಿದು ಮೂರು ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಜರುಗಿದೆ.

3 ವರ್ಷದ ಅಯಾನ್ ಪಾಷಾ ಮೃತಪಟ್ಟ ಮಗು. ಅಯಾನ್, ಮಂಡ್ಯ ಜಿಲ್ಲೆ ಮದ್ದೂರಿನ ಆಯಿಷಾ ಮತ್ತು ನಯೀಂ ಪಾಷಾ ದಂಪತಿಯ ಮಗು. ಆಯಿಷಾ, ಮಗುವನ್ನು ನಗರದ ಸಿಂಗಸಂದ್ರದಲ್ಲಿರುವ ತಮ್ಮ ಅಕ್ಕ ಗವರ್ ಉನ್ನಿಸಾ ಅವರ ಮನೆಯಲ್ಲಿ ಬಿಟ್ಟಿದ್ದರು. ಉನ್ನಿಸಾ ಅವರು ಮಗುವನ್ನು ದ್ವಿಚಕ್ರ ವಾಹನದಲ್ಲಿ ಹಿಂದೆ ಕೂರಿಸಿಕೊಂಡು ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಉನ್ನಿಸಾ ಅವರು ಟ್ರಾಫಿಕ್ ಸಿಗ್ನಲ್ನಲ್ಲಿ ದ್ವಿಚಕ್ರ ವಾಹನವನ್ನು ಮುಂದಕ್ಕೆ ಚಾಲನೆ ಮಾಡುತ್ತಿದ್ದಂತೆ ಮಗು ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದೆ. ಅದೇ ವೇಳೆಗೆ ಹಿಂದಿನಿಂದ ಬಂದ ಬಿಎಂಟಿಸಿ ಬಸ್ ಮಗು ಮೇಲೆ ಹರಿದಿದೆ. ಉನ್ನಿಸಾ ಅವರ ನಿರ್ಲಕ್ಷ್ಯವೇ ದುರ್ಘಟನೆಗೆ ಕಾರಣವೆಂದು ಹೇಳಲಾಗುತ್ತಿದೆ. ಮಗು ಮೇಲೆ ಹರಿದ ಬಸ್ ಅತ್ತಿಬೆಲೆಯಿಂದ ಮೆಜೆಸ್ಟಿಕ್’ಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.

Source link

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!