Saturday, September 30, 2023

BS Yediyurappa ರಣತಂತ್ರ ಶುರುವಾಯ್ತಾ? ಒಂದೇ ಕಲ್ಲಿಗೆ 2 ಹಕ್ಕಿ ಹೊಡೀತಾರಾ?

ವಿವೇಕವಾರ್ತೆ : ಯಡಿಯೂರಪ್ಪ (BS Yediyurappa) ಕಡೆಗಣನೆಯಿಂದ ಬಿಜೆಪಿಗೆ ಸೋಲು ಆಯ್ತು ಎಂದು ಹೈಕಮಾಂಡ್ ವಿರುದ್ಧ ಬಿಜೆಪಿ ನಾಯಕರೇ ಬೇಸರ ಹೊರ ಹಾಕುತ್ತಿದ್ದಾರೆ. ಈ ಬಗ್ಗೆ ಕೂಡಲೇ ನಿರ್ಧಾರ ಮಾಡುವಂತೆ ಆಪ್ತರು ಹೈಕಮಾಂಡ್ ಮೇಲೆ ಒತ್ತಡ ಹಾಕುತ್ತಿದ್ದಾರೆ.

ಬಿಜೆಪಿ ಸೋಲಿಗೆ BSY ಕಡೆಗಣನೆ ಕಾರಣ. BSY ಮಾಸ್ ಲೀಡರ್, ಸಮುದಾಯದ ಬಲ. ಪಕ್ಷವನ್ನು ತಳಮಟ್ಟದಿಂದ ಕಟ್ಟಿದ ನಾಯಕ. ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದು ಮೊದಲ ತಪ್ಪು ಎಂದು ಹೇಳುತ್ತಿದ್ದಾರೆ.

ನಾಯಕರು ಪಕ್ಷ ಬಿಡ್ತಿದ್ರೂ ವರಿಷ್ಠರು ಸೈಲೆಂಟ್ ಆಗಿದ್ದಾರೆ. BL ಸಂತೋಷ್ ಸಭೆಗೂ ಯಡಿಯೂರಪ್ಪರಿಗೆ ಆಹ್ವಾನ ನೀಡಿರಲಿಲ್ಲ. ಯಡಿಯೂರಪ್ಪ ಅವರ ಕಡೆಗಣನೆಯಿಂದ ಕಾರ್ಯಕರ್ತರೂ ದೂರವಾಗ್ತಿದ್ದಾರೆ ಎಂದು ಬಿಎಸ್​ವೈ ಆಪ್ತರು ಹೇಳುತ್ತಿದ್ದಾರೆ.

ಯಡಿಯೂರಪ್ಪ ಆಪ್ತರ ಈ ಹೇಳಿಕೆಗಳ ಹಿಂದೆ ಇದೆಯಾ ಒತ್ತಡ ತಂತ್ರ ಇದೆನಾ? ಈ ಹೇಳಿಕೆಗಳ ಮೂಲಕ ಹೈಕಮಾಂಡ್​​ಗೆ ಸ್ಪಷ್ಟ ಸಂದೇಶದ ರವಾನೆ ಮಾಡುತ್ತಿದ್ದಾರಾ ಎಂಬ ಚರ್ಚೆಗಳು ಕಮಲ ಅಂಗಳದಲ್ಲಿ ಶುರುವಾಗಿವೆ.

ಪುತ್ರ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿಸಲು ಆಪ್ತರ ಮೂಲಕ ಹೈಕಮಾಂಡ್ ಮೇಲೆ ಯಡಿಯೂರಪ್ಪ ಒತ್ತಡ ಹಾಕುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಬಿಜೆಪಿ ರಾಜ್ಯಾಧ್ಯಕ್ಷ ರೇಸ್‌ನಲ್ಲಿ ವಿಜಯೇಂದ್ರ ಹೆಸರು ಮುನ್ನಲೆಯಲ್ಲಿದೆ. ಲಿಂಗಾಯತ ಸಮುದಾಯದ ಬೆಂಬಲದ ಬಗ್ಗೆಯೂ ಯಡಿಯೂರಪ್ಪ ಆಪ್ತರು ಮಾತನಾಡುತ್ತಿದ್ದಾರೆ.

ಪಕ್ಷ ಸಂಘಟನೆಗೆ ಯುವ ನಾಯಕನಿಗೆ ಮಣೆ ಹಾಕಬೇಕು? ಮಗನಿಗೆ ಮಣೆ ಹಾಕಿದ್ರೆ, ಅಪ್ಪನಿಗೆ ಗೌರವ ನೀಡಿದಂತೆ ಎಂಬ ಸಂದೇಶವನ್ನು ರವಾನಿಸಿದ್ದಾರಂತೆ. ಪುತ್ರನಿಗೆ ನಾಯಕತ್ವ ಕಟ್ಟಿ, ಪಕ್ಷ ಬಲಿಷ್ಠಗೊಳಿಸೋದು ಯಡಿಯೂರಪ್ಪ ಅವರ ಪ್ಲಾನ್ ಆಗಿದೆಯಂತೆ.

ಈ ಮೂಲಕ ಪುತ್ರನಿಗೆ ರಾಜ್ಯಾಧ್ಯಕ್ಷ ಸ್ಥಾನ ಮತ್ತು ಲಿಂಗಾಯತ ಮತಗಳನ್ನು ಸೆಳೆಯುವ ಗುರಿಯನ್ನು ಯಡಿಯೂರಪ್ಪ ಹೊಂದಿದ್ದಾರೆ ಎನ್ನಲಾಗ್ತಿದೆ.

RELATED ARTICLES

ಸಂಕ್ರಾಂತಿ ವೇಳೆಗೆ ರಾಜ್ಯದಲ್ಲಿ ಕೆಲ ಅವಘಢ ; ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ : ಕೋಡಿಮಠ ಶ್ರೀ.!

ವಿವೇಕ ವಾರ್ತೆ : ಲೋಕಸಭಾ ಚುನಾವಣೆ ಬಗ್ಗೆ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರಮುಖ ಭವಿಷ್ಯವೊಂದನ್ನು ನುಡಿದಿದ್ದಾರೆ. https://youtu.be/u6lq_pUsNkA?si=YWlDzZ4FEqGXLL4M ಮುಂದಿನ ಚುನಾವಣೆಯಲ್ಲಿ ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ. ಅಮಾವಾಸ್ಯೆಯ ಬಳಿಕ ಕರ್ನಾಟಕದಲ್ಲಿ ಭಾರೀ...

PM Narendra Modi Horoscope: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಹಿನ್ನೆಲೆಯಲ್ಲಿ ಜಾತಕ ವಿಶ್ಲೇಷಣೆ

ವಿವೇಕವಾರ್ತೆ : 2028ರ ಜೂನ್ ವೇಳೆಗೆ ನರೇಂದ್ರ ಮೋದಿ ಅವರ ಜನ್ಮ ಜಾತಕದ ಪ್ರಕಾರ ಕುಜ-ರಾಹು ಸಂಧಿ ಕಾಲ (ಅಂದರೆ ಕುಜ ದಶೆ ಮುಗಿದು ರಾಹು ದಶೆ ಆರಂಭ ಆಗುವ ಕಾಲ). ಇದು...

ಬೆಳಗಾವಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಥ ಎಳೆಯುತ್ತಿರುವ ಪ್ರವೀಣ ಹಿರೇಮಠ

ವಿವೇಕವಾರ್ತೆ : ಗಾಲಿ ಜನಾರ್ದನ ರೆಡ್ಡಿ ಅವರು ಭಾಜಪದಿಂದ ಅಸಾಮಾಧಾನಗೊಂಡು ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನ ಸ್ಥಾಪಿಸಿ ಮೊದಲ ಚುನಾವಣೆಯಲ್ಲಿ ಜನರ ಮನಸನ್ನ ಗೆದ್ದಿದೆ, ರಾಜ್ಯ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷದ ಮಹತ್ವ 70ರ...
- Advertisment -

Most Popular

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...

ಶಾಲೆಯಲ್ಲೇ ಶಿಕ್ಷಕಿಯರ ರೀಲ್ಸ್ : ಲೈಕ್, ಶೇರ್ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಡ.!

ವಿವೇಕವಾರ್ತೆ : ಶಿಕ್ಷಕಿಯರು, ವಿದ್ಯಾರ್ಥಿಗಳಿಗೆ ಪಾಠ ಮಾಡುವ ಬದಲು ಶಾಲೆಗಳಲ್ಲಿ ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ, ವಿದ್ಯಾರ್ಥಿಗಳಿಗೆ ತಮ್ಮ ಚಾನೆಲ್ ಗೆ Subscribers ಆಗಿ ತಮ್ಮ ವಿಡಿಯೋಗಳನ್ನು ಇತರರಿಗೆ...
error: Content is protected !!