Central Railway: 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗ- ಈಗಲೇ ಅಪ್ಲೈ ಮಾಡಿ

Published on

spot_img
spot_img

ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಮಧ್ಯ ರೈಲ್ವೆ(Central Railway) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 2422 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ cr.indianrailways.gov.inಗೆ ಭೇಟಿ ನೀಡಬಹುದು.

ಅಧಿಸೂಚನೆಯಲ್ಲಿ ಪ್ರಕಟವಾಗಿರುವ ಮಾಹಿತಿ ಪ್ರಕಾರ, ಪ್ರಸ್ತುತ ಅರ್ಜಿ ಪ್ರಕ್ರಿಯೆ ನಡೆಯುತ್ತಿದೆ. ಅಭ್ಯರ್ಥಿಗಳು ಜನವರಿ 15, 2023 ರೊಳಗೆ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ನಮೂನೆಯನ್ನು ಸಲ್ಲಿಸಬೇಕು. ಆ ಸಂದರ್ಭದಲ್ಲಿ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿಯೇ ಅರ್ಜಿ ನಮೂನೆಯನ್ನು ಪಡೆಯಬೇಕು. ಈ ಗಡುವಿನ ಯಾವುದೇ ಬದಲಾವಣೆಯನ್ನು ನೋಟಿಸ್ ಮೂಲಕ ಅಭ್ಯರ್ಥಿಗಳಿಗೆ ತಿಳಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಮೊದಲು ಅಧಿಕೃತ ವೆಬ್​ಸೈಟ್​ rrccr.com ಗೆ ಭೇಟಿ ನೀಡಬೇಕು.
ಬಳಿಕ ಅಲ್ಲಿ ಕಾಣ ಸಿಗುವ “Click here to apply online” ಆಯ್ಕೆಯನ್ನು ಕ್ಲಿಕ್ ಮಾಡಬೇಕು.
ಆ ಮೂಲಕ ಮುಖಪುಟಕ್ಕೆ ಹೋಗಿ ಅಪ್ರೆಂಟಿಸ್ ನೇಮಕಾತಿ ಲಿಂಕ್‌ಗೆ ಹೋಗಬೇಕು.ಅಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕದೊಂದಿಗೆ ಅದನ್ನು ಸಲ್ಲಿಸಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆ ಮಧ್ಯ ರೈಲ್ವೆ
ಹುದ್ದೆ ಅಪ್ರೆಂಟಿಸ್
ಒಟ್ಟು ಹುದ್ದೆ 2422
ವೇತನ ನಿಯಮಾನುಸಾರ
ಉದ್ಯೋಗದ ಸ್ಥಳ ಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನ 15/01/2023

ಕೇಂದ್ರ ರೈಲ್ವೆ ನೇಮಕಾತಿ 2022: ವಯೋಮಿತಿ

ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 12, 2022ಕ್ಕೆ ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ ಮೀರಿರಬಾರದು.

ಕೇಂದ್ರ ರೈಲ್ವೆ ನೇಮಕಾತಿ 2022: ವಿದ್ಯಾರ್ಹತೆ

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಯಿಂದ ಕಡ್ಡಾಯವಾಗಿ ಶೇ.50ರಷ್ಟು ಅಂಕಗಳೊಂದಿಗೆ 10ನೇ ತರಗತಿ ಅಥವಾ ಪಿಯುಸಿ ಪಾಸಾಗಿರಬೇಕು.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!