ಹಮಾಸ್ ಉಗ್ರರಿಂದ ಮಗಳ ಬೆತ್ತಲೆ ಮೆರವಣಿಗೆ- ಸಾರ್ವಜನಿಕರಲ್ಲಿ ತಾಯಿ ಮನವಿ

Published on

spot_img
spot_img

ವಿವೇಕವಾರ್ತೆ: ಇಸ್ರೇಲ್‌ನ ಯುವತಿಯೊಬ್ಬಳ (Israel Woman) ಬೆತ್ತಲೆ ದೇಹವನ್ನು ಹಮಾಸ್ ಉಗ್ರರು (Hamas Militants) ತೆರೆದ ಟ್ರಕ್‌ನಲ್ಲಿ ಮೆರವಣಿಗೆ ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಈ ಕುರಿತು ಆಕೆಯ ತಾಯಿ ಸಾರ್ವಜನಿಕರಲ್ಲಿ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

ಇಸ್ರೇಲ್ (Israel) ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ 300ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ದಾಳಿ ವೇಳೆ ಹಮಾಸ್ ಉಗ್ರರು ಇಸ್ರೇಲ್ ಯುವತಿಯ ಬೆತ್ತಲೆಯನ್ನಾಗಿ ಮಾಡಿ ತೆರೆದ ಟ್ರಕ್‌ನಲ್ಲಿ (Open Truck) ಮೆರವಣಿಗೆ ಮಾಡಿ ಕ್ರೌರ್ಯ ಮೆರೆದಿದ್ದಾರೆ. ದಾಳಿ ವೇಳೆ ಹುತಾತ್ಮರಾದ ಅಮಾಯಕ ನಾಗರಿಕರ ಮೃತದೇಹಗಳನ್ನು ತೆರೆದ ಟ್ರಕ್‌ನಲ್ಲಿ ಇರಿಸಿ ಮೆರವಣಿಗೆ ಮಾಡಿದ್ದು, ಮಹಿಳೆಯ ಬೆತ್ತಲೆ ದೇಹ ಮೆರವಣಿಗೆ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಪ್ಯಾಲೇಸ್ಟಿನಿಯನ್ ಭಯೋತ್ಪಾದಕರು ಗಾಜಾಕ್ಕೆ ಓಡಿಸುತ್ತಿದ್ದ ಪಿಕ್-ಅಪ್ ಟ್ರಕ್‌ನ ಹಿಂಭಾಗದಲ್ಲಿ ಶನಿ ಲೌಕ್ ಅವರ ದೇಹವನ್ನು ಮೆರವಣಿಗೆ ಮಾಡುತ್ತಿದ್ದ ವೀಡಿಯೋವನ್ನು ನೋಡಿದ ಮಹಿಳೆಯ ತಾಯಿ ವೀಡಿಯೋದಲ್ಲಿ ಇರುವುದು ತಮ್ಮ ಮಗಳೆಂದು ದೃಢಪಡಿಸಿದ್ದಾರೆ. ಅಲ್ಲದೇ ಮಗಳ ಕುರಿತು ಹೆಚ್ಚಿನ ಮಾಹಿತಿ ನೀಡುವಂತೆ ಸಾರ್ವಜನಿಕರ ಬಳಿ ಅಂಗಲಾಚಿದರು.

ಪ್ಯಾಲೆಸ್ಟಿನಿಯನ್ ನಾಗರೀಕರು ಮಹಿಳೆಯ ಮೃತದೇಹವನ್ನು ನಿಂದಿಸಿ ಬಳಿಕ ಉಗುಳುವುದನ್ನು ಈ ವೀಡಿಯೋದಲ್ಲಿ ನೋಡಬಹುದು. ನಂತರ ಕಪಾಳಮೋಕ್ಷ ಮಾಡುವುದನ್ನು ಸಹಾ ವೀಡಿಯೋದಲ್ಲಿ ಕಾಣಬಹುದು. ಕ್ಷಿಪಣಿ ದಾಳಿಯ ಬಳಿಕ ಪ್ಯಾಲೆಸ್ಟಿನಿಯಾದವರು ದಕ್ಷಿಣ ಇಸ್ರೇಲ್‌ಗೆ ನುಸುಳಿದ್ದು, ತೆರೆದ ಟ್ರಕ್‌ಗಳಲ್ಲಿ ಬೀದಿ ಬೀದಿ ಸುತ್ತುತ್ತಿದ್ದಾರೆ. ಈ ವೇಳೆ ರಸ್ತೆಯಲ್ಲಿ ಸಿಕ್ಕ ಸಿಕ್ಕ ನಾಗರಿಕರನ್ನು ಕೊಲ್ಲುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

ಕೃಪೆ

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!