Monday, October 2, 2023

ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್.!

ವಿವೇಕವಾರ್ತೆ : ಬೀದರ್ ಜಿಲ್ಲೆ ಬಸವಕಲ್ಯಾಣದ ಉಪ ತಹಸೀಲ್ದಾರ್‌ ಪಹಣಿಯಲ್ಲಿ ಹೆಸರು ಸೇರಿಸುವ ಕೆಲಸಕ್ಕೆ ಒಂದು ಲಕ್ಷ ರೂಪಾಯಿ ಲಂಚವನ್ನು ಪಡೆಯುತ್ತಿರುವಾಗಲೇ ಲೋಕಾಯುಕ್ತ ಬಲೆ ಬಿದ್ದಿದ್ದಾರೆ.

ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಸೀಲ್ದಾರ್‌ ಶಿವಾನಂದ ಬಿರಾದಾರ್ ಎಂದು ತಿಳಿದುಬಂದಿದೆ.

ಲಂಚದ ಬೇಡಿಕೆ ಕುರಿತು ದೂರು ಬಂದ ಹಿನ್ನೆಲೆ ಲೋಕಾಯುಕ್ತ ಕಾರ್ಯಾಚರಣೆ ನಡೆಸಿತ್ತು. ಉಜಳಂಬ ಗ್ರಾಮದ ರೈತ ಸುಧೀರ ಎಂಬುವವರಿಂದ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಕೊಹಿನೂರು ನಾಡಕಚೇರಿಯಲ್ಲಿ ಉಪತಹಸೀಲ್ದಾರ್ ಆಗಿರುವ ಶಿವಾನಂದ ಬಿರಾದಾರ್ ಅವರನ್ನು ಲೋಕಾಯುಕ್ತ ತಂಡ ಬಂಧಿಸಿದೆ.

ಸುಧೀರ, ಮ್ಯುಟೇಶನ್ ಮತ್ತು ಪಹಣಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿಯನ್ನು ಸಲ್ಲಿಸಿದ್ದರು. ಇದನ್ನು ಮಾಡಿಕೊಡಲು ಶಿವಾನಂದ ಅವರು 2,50,000 ರೂಪಾಯಿ ನೀಡುವಂತೆ ಲಂಚದ ಬೇಡಿಕೆ ಇಟ್ಟಿದ್ದರು. ಈ ಮೊತ್ತ ಕಡಿಮೆ ಮಾಡುವಂತೆ ಬೇಡಿದಾಗ ಕೊನೆಗೆ 1,00,000 ರೂಪಾಯಿಗೆ ಲಂಚದ ಮೊತ್ತವನ್ನು ಶಿವಾನಂದ ಇಳಿಕೆ ಮಾಡಿದ್ದರು.

ಇದರಂತೆ ಆ 1 ಲಕ್ಷ ರೂಪಾಯಿಯನ್ನು ಸುಧೀರ ಇಂದು ಕೊಡಲು ಹೋಗಿದ್ದರು. ಅದಕ್ಕಿಂತ ಮುಂಚೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಈ ವೇಳೆ ಲೋಕಾಯುಕ್ತ ಪೊಲೀಸರ ಮಾರ್ಗದರ್ಶನದಲ್ಲಿ ಸುಧೀರ ಲಂಚದ ಹಣ ಕೊಡಲು ಹೋಗಿದ್ದರು.

ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಶಿವಾನಂದ ಅವರನ್ನು ಲಂಚದ ಹಣದ ಸಹಿತ ಹಿಡಿದು ಕೇಸ್ ದಾಖಲಿಸಿಕೊಂಡಿದ್ದಾರೆ. ಈ ಕುರಿತು ತನಿಖೆ ಪ್ರಗತಿಯಲ್ಲಿದ್ದು, ಆರೋಪಿ ಅಧಿಕಾರಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಲೋಕಾಯುಕ್ತ ಡಿವೈಎಸ್‌ಪಿ ಎನ್​.ಎಂ. ಓಲೇಕಾರ್ ತಂಡ ಈ ಕಾರ್ಯಾಚರಣೆ ನಡೆಸಿತ್ತು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ಆರ್.ಕರ್ನೂಲ್‌ ತಿಳಿಸಿದ್ದಾರೆ.

RELATED ARTICLES

ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದಕ್ಕೆ 4ನೇ ಅಂತಸ್ತಿನಿಂದ ಜಿಗಿದ ಬಾಲಕಿ : ದೃಶ್ಯ ಕ್ಯಾಮರಾದಲ್ಲಿ ಸೆರೆ.!

ವಿವೇಕವಾರ್ತೆ : ಓರ್ವ ವಿದ್ಯಾರ್ಥಿನಿ ಜನವಸತಿ ಕಟ್ಟಡದ 4ನೇ ಅಂತಸ್ತಿನಿಂದ ಜಿಗಿದಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ಶನಿವಾರ ನಡೆದಿದೆ. ಬಲ್ಲ ಮೂಲಗಳ ಪ್ರಕಾರ, ವಿದ್ಯಾರ್ಥಿನಿ 12 ನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿದ್ದು, ಇದರಿಂದ ಮಾನಸ್ಸಿಕವಾಗಿ...

ಅರ್ಧ ವಾರ್ಷಿಕ ಪರೀಕ್ಷೆ ಬರೆಯುವ ವೇಳೆ ಹೃದಯಾಘಾತಕ್ಕೆ 15ರ ಬಾಲಕ ಬಲಿ.!

ವಿವೇಕ ವಾರ್ತೆ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆಯೇ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಪರೀಕ್ಷೆ ಬರೆಯುವ ವೇಳೆ ಮೃತನಾದ ದುರ್ದೈವಿ ಬಾಲಕನನ್ನು ರಾಹುಲ ಕೋಲಕಾರ...

ಐಪಿಎಸ್‌ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಮತ್ತೆ ವರ್ಗ

ವಿವೇಕವಾರ್ತೆ : ಇತ್ತೀಚೆಗಷ್ಟೆ ಆಂತರಿಕ ಭದ್ರತಾ ವಿಭಾಗದ ಡಿಐಜಿ ಆಗಿ ವರ್ಗಾವಣೆಗೊಂಡಿದ್ದ ಐಪಿಎಸ್‌ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಐಜಿ ಆಗಿ ವರ್ಗಾವಣೆ ಮಾಡಿ...
- Advertisment -

Most Popular

ಸವದತ್ತಿ ರೇಣುಕಾದೇವಿ ಹುಂಡಿ ಹಣ ಎಣಿಕೆ : 40 ದಿನದಲ್ಲಿ ಭಕ್ತರು ನೀಡಿದ ಕಾಣಿಕೆ ಹಣವೆಷ್ಟು ಗೊತ್ತೇ.?

ವಿವೇಕ ವಾರ್ತೆ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಶನಿವಾರ ಹುಂಡಿ ಎಣಿಕೆ ಕಾರ್ಯ ನಡೆಯಿತು. ಇನ್ನು 40 ದಿನಗಳ ಅವಧಿಯಲ್ಲಿ ಬರೋಬ್ಬರಿ 1.03 ಕೋಟಿ ರೂ. ಮೌಲ್ಯದ ಕಾಣಿಕೆ...

ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದಕ್ಕೆ 4ನೇ ಅಂತಸ್ತಿನಿಂದ ಜಿಗಿದ ಬಾಲಕಿ : ದೃಶ್ಯ ಕ್ಯಾಮರಾದಲ್ಲಿ ಸೆರೆ.!

ವಿವೇಕವಾರ್ತೆ : ಓರ್ವ ವಿದ್ಯಾರ್ಥಿನಿ ಜನವಸತಿ ಕಟ್ಟಡದ 4ನೇ ಅಂತಸ್ತಿನಿಂದ ಜಿಗಿದಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ಶನಿವಾರ ನಡೆದಿದೆ. ಬಲ್ಲ ಮೂಲಗಳ ಪ್ರಕಾರ, ವಿದ್ಯಾರ್ಥಿನಿ 12 ನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿದ್ದು, ಇದರಿಂದ ಮಾನಸ್ಸಿಕವಾಗಿ...

ಅರ್ಧ ವಾರ್ಷಿಕ ಪರೀಕ್ಷೆ ಬರೆಯುವ ವೇಳೆ ಹೃದಯಾಘಾತಕ್ಕೆ 15ರ ಬಾಲಕ ಬಲಿ.!

ವಿವೇಕ ವಾರ್ತೆ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆಯೇ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಪರೀಕ್ಷೆ ಬರೆಯುವ ವೇಳೆ ಮೃತನಾದ ದುರ್ದೈವಿ ಬಾಲಕನನ್ನು ರಾಹುಲ ಕೋಲಕಾರ...

ಕಾಂಗ್ರೆಸ್ ಗುಲಾಮರೇ. ನಿನ್ನ ಅಮ್ಮ ಎಲ್ಲಿಂದ ಬಂದವರು? : ಅಕ್ಬರುದ್ದೀನ್ ಓವೈಸಿ ವಿವಾದಾತ್ಮಕ ಹೇಳಿಕೆ

ವಿವೇಕವಾರ್ತೆ: ಕಾಂಗ್ರೆಸ್ ಗುಲಾಮರೇ ನಿಮ್ಮ ಅಮ್ಮ (ಸೋನಿಯಾ ಗಾಂಧಿ) ಎಲ್ಲಿಂದ ಬಂದವರು? ನೀವು ಬಿಜೆಪಿಯ ಬಿ ಟೀಂ ಎಂದು ಎಐಎಂಐಎಂ ಮುಖಂಡ ಅಕ್ಬರುದ್ದೀನ್ ಓವೈಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಾವು...
error: Content is protected !!