Wednesday, September 27, 2023

ಗನ್​ ತೋರಿಸಿ ಮಹಿಳಾ ಕಾನ್ಸ್​ಟೇಬಲ್​​​ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ : ಪ್ರಕರಣ ದಾಖಲು

ವಿವೇಕವಾರ್ತೆ : ಮಹಿಳಾ ಪೊಲೀಸ್​ ಪೇದೆ ಮೇಲೆ ಸಹೋದ್ಯೋಗಿಯೇ ಹಲವು ಬಾರಿ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಲ್ಲಿನ ಸ್ವರ್ಗೇಟ್​ ಪೊಲೀಸ್​ ಕಾಲೋನಿಯನ್ನು ಗನ್​ನಿಂದ ಬೆದರಿಸಿ ಮಹಿಳಾ ಪೊಲೀಸ್​ ಕಾನ್ಸ್​ಟೇಬಲ್​​​​​ ಮೇಲೆ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ಸಂತ್ರಸ್ತ ಮಹಿಳಾ ಪೊಲೀಸ್ ಪೇದೆಯು ಆರೋಪಿ ವಿರುದ್ಧ ಖಡಕ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿ ದೀಪಕ್​ ಸೀತಾರಾಮ್​ ಮೋಘೆ ಅವರನ್ನು ಪುಣೆಯ ಮಾರ್ಕೆಟ್​ ಯಾರ್ಡ್​ ಪೊಲೀಸ್​ ಠಾಣೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಜೊತೆಗೆ ಸಂತ್ರಸ್ತ ಮಹಿಳಾ ಪೊಲೀಸ್​ ಪೇದೆಯನ್ನೂ ಇಲ್ಲಿನ ಠಾಣೆಗೆ ನೇಮಿಸಲಾಗಿತ್ತು. ಈ ಇಬ್ಬರು ಸ್ವರ್ಗೇಟ್​ ಪೊಲೀಸ್​ ಕಾಲೋನಿಯಲ್ಲಿ ವಾಸವಿದ್ದರು. ಈ ವೇಳೆ ಆರೋಪಿ ಮಹಿಳಾ ಪೊಲೀಸ್​ ಪೇದೆ ಮನೆಗೆ ನುಗ್ಗಿ ಪಿಸ್ತೂಲ್​ ತೋರಿಸಿ ಬೆದರಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂತ್ರಸ್ತ ಮಹಿಳಾ ಪೊಲೀಸ್​ ದೂರಿನ ಪ್ರಕಾರ, ಆರೋಪಿ ದೀಪಕ್ ಸೀತಾರಾಮ್​ ಮೋಘೆ ಮಾರ್ಕೆಟ್ ಯಾರ್ಡ್​ ಪೊಲೀಸ್​ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದೀಪಕ್​ ಮೋಘೆ ಕಳೆದ 2020ರಿಂದ ಆಗಸ್ಟ್​ 1, 2023ರವರೆಗೆ ಹಲವು ಬಾರಿ ಪುಣೆಯ ಪೊಲೀಸ್​ ಕಾಲೋನಿ ಮತ್ತು ಖಡಕ್​ವಾಸ್ಲಾದ ಲಾಡ್ಜ್​ವೊಂದರಲ್ಲಿ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಿದ್ದಾರೆ.

ಕಳೆದ ಲಾಕ್​ ಡೌನ್​ ಸಂದರ್ಭದಲ್ಲಿ ಆರೋಪಿ ದೀಪಕ್​ ಮಹಿಳೆ ಪೇದೆಯನ್ನು ಪರಿಚಯಿಸಿಕೊಂಡಿದ್ದನು. ಬಳಿಕ ಆರೋಪಿ ಮಹಿಳಾ ಪೇದೆ ಮನೆಗೆ ಊಟಕ್ಕೆ ಬರುತ್ತಿದ್ದನು. ಈ ನಡುವೆ ಆರೋಪಿ ಮಹಿಳಾ ಪೇದೆಗೆ ಮತ್ತು ಬರುವ ಔಷಧ ನೀಡಿದ್ದಾನೆ. ಇದರಿಂದಾಗಿ ಅವರು ಪ್ರಜ್ಞೆ ತಪ್ಪಿದ್ದು, ಬಳಿಕ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ತನ್ನ ಹೇಯ ಕೃತ್ಯವನ್ನು ಚಿತ್ರೀಕರಿಸಿದ್ದು, ಈ ಬಗ್ಗೆ ಬಾಯಿ ಬಿಟ್ಟರೆ ವಿಡಿಯೋ ವೈರಲ್​ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆ ಬಳಿಕವೂ ಆರೋಪಿ ನಿರಂತರ ಮಹಿಳಾ ಪೊಲೀಸ್​ ಪೇದೆಗೆ ಗನ್​ನಿಂದ ಬೆದರಿಕೆ ಹಾಕಿ ದೌರ್ಜನ್ಯ ನಡೆಸಿರುವುದಾಗಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆರೋಪಿ ದೀಪಕ್​ ಮೋಘೆ ಸಂತ್ರಸ್ತೆಯ ಪತಿಗೂ ಕೊಲೆ ಬೆದರಿಕೆ ಹಾಕಿದ್ದಾನೆ.

ಚಿನ್ನಾಭರಣ, ಲ್ಯಾಪ್​ಟಾಪ್​, ಮೊಬೈಲ್​ನೊಂದಿಗೆ ಪರಾರಿ : ಆರೋಪಿ ದೀಪಕ್​ ಮೋಘೆ ಮಹಿಳಾ ಪೇದೆಯ ಮನೆಯಲ್ಲಿದ್ದ ಚಿನ್ನಾಭರಣ, ಲ್ಯಾಪ್​ಟಾಪ್​, ಮೊಬೈಲ್​ ಫೋನ್​ ಬಲವಂತವಾಗಿ ಪಡೆದುಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಆರೋಪಿ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಮಹಿಳಾ ಪೇದೆ ಒತ್ತಾಯಿಸಿದ್ದಾರೆ. ಕಳೆದ ದಿನ ಪುಣೆಯಲ್ಲಿ ಮಹಿಳಾ ಪೊಲೀಸ್​ ಪೇದೆ ಮೇಲೆ ಪೊಲೀಸ್​ ಅಧಿಕಾರಿಯೊಬ್ಬರು ದೌರ್ಜನ್ಯ ಎಸಗಿದ ಬಗ್ಗೆ ಪ್ರಕರಣ ದಾಖಲಾಗಿತ್ತು.

RELATED ARTICLES

ಪ್ರೇಮಿಗಳಿಗೆ ರೂಂ ಕೊಟ್ಟು ಖಾಸಗಿ ವೀಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‍ಮೇಲ್ ; ಇಬ್ಬರು ಅಂದರ್..!

ವಿವೇಕವಾರ್ತೆ : ಬೆಂಗಳೂರಿನ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿರುವ ಹೋಟೆಲ್​ನಲ್ಲಿ ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ...

ಬೆಂಗಳೂರಲ್ಲಿ ‘ಕಾಮುಕ ಟೆಕ್ಕಿ’ ಅಂದರ್ : ಚೆಂದ ಚೆಂದದ ಆಂಟಿಯರೇ ಈತನ ಟಾರ್ಗೆಟ್.!

ವಿವೇಕವಾರ್ತೆ : ಬೆಂಗಳೂರಿನಲ್ಲೊಬ್ಬ ಕಾಮುಕ ಟೆಕ್ಕಿ ಪೊಲೀಸರ ಬಲೆಗೆ ಬಿದ್ದಿದ್ದು, ಈತನ ಕಥೆ ಕೇಳಿದ್ರೆ ನೀವೇ ಶಾಕ್ ಆಗ್ತೀರಾ.ಚೆಂದ ಚೆಂದದ ಫೋಟೋ ಹಾಕುವ ಆಂಟಿಯರಿಗೆ ರಿಕ್ವೆಸ್ಟ್ ಕಳುಹಿಸುತ್ತಿದ್ದ ಕಾಮುಕ ಫೈಜಲ್ ಎಂಬಾತನನ್ನು ಪೊಲೀಸರು...

Crime News: ರೈಲಿಗೆ ತಲೆಕೊಟ್ಟು ಗೃಹಿಣಿ ಆತ್ಮಹತ್ಯೆ; ಇತ್ತ ಕತ್ತು ಸೀಳಿ ಬಾವನನ್ನೇ ಹತ್ಯೆಗೈದ ಬಾಮೈದ!

ವಿವೇಕವಾರ್ತೆ :Crime News: ರೈಲಿಗೆ ತಲೆಕೊಟ್ಟು ಗೃಹಿಣಿ ಆತ್ಮಹತ್ಯೆ; ಇತ್ತ ಕತ್ತು ಸೀಳಿ ಬಾವನನ್ನೇ ಹತ್ಯೆಗೈದ ಬಾಮೈದ! ಮುಂದೆ ಓದಿ.. ವರದಕ್ಷಿಣೆ ಕಿರುಕುಳಕ್ಕೆ (Dowry Harassment) ಮನನೊಂದು ಗೃಹಿಣಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ (Suicide)...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!