ಬೀದಿ ಬೀದಿಗಳಲ್ಲಿ ಹಣದ ಮಳೆ ಸುರಿಸಿದ ಫ್ಲಿಪ್​ಕಾರ್ಟ್ ವಾಹನ ; ವಿಡಿಯೋ ವೈರಲ್.!

Published on

spot_img
spot_img

ವಿವೇಕವಾರ್ತೆ : ಆನ್​ಲೈನ್​​ ಶಾಪಿಂಗ್ ದೈತ್ಯ ಫ್ಲಿಪ್​ಕಾರ್ಟ್​ ವಾಹನದಿಂದ ಶನಿವಾರ ಅಚ್ಚರಿಯ ಘಟನೆಯೊಂದು ದೇಶದ ವಾಣಿಜ್ಯ ನಗರಿ ಮುಂಬೈನ ಗೇಟ್​ವೇ ಸೇರಿದಂತೆ ನಗರದ ಹಲವು ಭಾಗಗಳು ಘಟಿಸಿದೆ.

ಶನಿವಾರ ಆನ್​ಲೈನ್​​ ಶಾಪಿಂಗ್ ದೈತ್ಯ ಫ್ಲಿಪ್​ಕಾರ್ಟ್​ಗೆ ಸೇರಿದ ವಾಹನವೊಂದು ಎರಡು ಸಾವಿರ ಮುಖಬೆಲೆಯ ನೋಟುಗಳನ್ನು ಗಾಳಿಯಲ್ಲಿ ಮಳೆ ಸುರಿಸಿದಂತೆ ಸುರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಿನೆಮಾ ದೃಶ್ಯಗಳಲ್ಲಿ ಕಾಣುವಂತೆ ಎರಡು ಸಾವಿರ ಮುಖಬೆಲೆಯ ನೋಟುಗಳು ಫ್ಲಿಪ್​ಕಾರ್ಟ್​ಗೆ ಸೇರಿದ ವಾಹನದ ಹಿಂಭಾಗದ ಬಾಗಲಿನಿಂದ ಗಾಳಿಯಲ್ಲಿ ತೇಲಿಬರುತ್ತಿದ್ದರೆ, ಇತ್ತ ಸಾಮಾನ್ಯ ಜನರು ಕುತೂಹಲಭರಿತರಾಗಿ ನೋಡುತ್ತಿರುವುದು ಕಂಡು ಬರುತ್ತದೆ.

ಅಂದಹಾಗೆ ಫ್ಲಿಪ್ ಕಾರ್ಟ್ ಬಿಗ್ ಬಿಲಿಯಾನ್ ಡೇಸ್ ಸೇಲ್ ಅಭಿಯಾನ ಇಂದಿನಿಂದ (ದಿ.​ 8) 15ರವರೆಗೆ ನಡೆಯಲಿದ್ದು, ಅದರ ಪ್ರಚಾರಕ್ಕಾಗಿ ಈ ರೀತಿ ಮಾಡಿತೇ ಅಂತ ಹಲವರು ಪ್ರಶ್ನಿಸಿದ್ದಾರೆ.

ಫ್ಲಿಪ್​ಕಾರ್ಟ್​ಗೆ ಸೇರಿದ ವಾಹನದಿಂದ ವಾಣಿಜ್ಯ ನಗರಿ ಮುಂಬೈನ ಪ್ರಮುಖ ಬೀದಿಗಳಲ್ಲಿ ಎರಡು ಸಾವಿರು ಮುಖಬೆಲೆಯ ನೋಟುಗಳನ್ನು ಗಾಳಿಯಲ್ಲಿ ತೂರುತ್ತಾ ಹೋಗುತ್ತಿದ್ದರೆ, ರಸ್ತೆ ಬದಿಗಳಲ್ಲಿ ಈ ದೃಶ್ಯವನ್ನು ನೋಡುತ್ತಾ ಜನರು ಸುಮ್ಮನೆ ನಿಂತಿರುವುದು ಕಂಡು ಬರುತ್ತದೆ.

ವೈರಲ್ ಆಗಿರೋ ದೃಶ್ಯವನ್ನು ನೋಡಿದರೆ ಇದು ಆಕಸ್ಮಿವಾಗಿ ಆಯಿತೇ ಅಥವಾ ಪ್ರಚಾರಕ್ಕಾಗಿ ಕಂಪನಿ ಈ ರೀತಿ ಮಾಡಿತೇ ಎಂದು ಹಲವರು ಪ್ರಶ್ನಿಸಿದ್ದಾರೆ.

ಈ ಬಗ್ಗೆ ವಿಡಿಯೋ ಹಂಚಿಕೊಂಡಿರುವ ಫ್ಲಿಪ್ ಕಾರ್ಟ್, ಸದ್ಯದಲ್ಲೇ ಸ್ಪಷ್ಟನೆ ನೀಡಲಿದ್ದೇವೆ ಎಂದು ತಿಳಿಸಿದೆ.

https://twitter.com/Flipkart/status/1710514479841280404?ref_src=twsrc%5Etfw%7Ctwcamp%5Etweetembed%7Ctwterm%5E1710514479841280404%7Ctwgr%5E%7Ctwcon%5Es1_c10&ref_url=https%3A%2F%2Fapi-news.dailyhunt.in%2F

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!