ಘಟಪ್ರಭಾ : ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!

Published on

spot_img
spot_img

ವಿವೇಕವಾರ್ತೆ: ತಾನು ಓದುತ್ತಿರುವ ಕಾಲೇಜಿನ 3ನೇ ಮಹಡಿಯಿಂದ ಕೆಳಗೆ ಹಾರಿ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ಇಲ್ಲಿನ ಕರ್ನಾಟಕ ಆರೋಗ್ಯಧಾಮದ (ಕೆ.ಎಚ್.ಆಯ್ ಆಸ್ಪತ್ರೆ) ಆವರಣದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಋತುಜಾ ರಮೇಶ ಪಡಲೋಸ್ಕರ್ (21) ಎಂದು ತಿಳಿದು ಬಂದಿದ್ದು ಈ ಯುವತಿ ಮೂಲತಃ ನೆರೆಯ ಗೋವಾ ರಾಜ್ಯದವಳಾಗಿದ್ದು ಇಲ್ಲಿನ ಕರ್ನಾಟಕ ಆರೋಗ್ಯಧಾಮದಲ್ಲಿ ಜಿಎನ್‌ಎಮ್ ನರ್ಸಿಂಗ ಕೋರ್ಸನಲ್ಲಿ 3ನೇ ವರ್ಷದ ವಿದ್ಯಾರ್ಥಿಯಾಗಿ ಅಭ್ಯಾಸ ಮಾಡುತ್ತಿದ್ದು ಸಂಜೆ 9ಗಂಟೆ ಸುಮಾರಿಗೆ ಕಾಲೇಜಿನ ಕೊನೆಯ ಮಹಡಿಗೆ ತೆರಳಿ ಅಲ್ಲಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಕೂಡಲೆ ಅವಳ ಸ್ನೇಹಿತರೆಲ್ಲ ಆಸ್ಪತ್ರೆಗೆ ಸೇರಿಸಿದರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

ಸಾವಿನ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಗೋಕಾಕ ಡಿವೈಎಸ್‌ಪಿ ಡಿ.ಎಚ್.ಮುಲ್ಲಾ, ಘಟಪ್ರಭಾ ಪೊಲೀಸ್ ಠಾಣೆಯ ಪಿಐ ಬಸವರಾಜ ಕಾಮನಬೈಲು ಭೇಟಿ ನೀಡಿ ಪರೀಶಿಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!