Sunday, October 1, 2023

ರಿಮೋಟ್ ಬೇಡ: ಸ್ಮಾರ್ಟ್​ಫೋನ್ ಮೂಲಕ ಟಿವಿ ಚಾನೆಲ್ ಬದಲಾಯಿಸುವುದು ಹೇಗೆ?

ವಿವೇಕವಾರ್ತೆ : ಇನ್ನುಂದೆ ಟಿವಿ ರಿಮೋಟ್ ಕಳೆದು ಹೋದರೆ ಚಿಂತಿಸಬೇಕಿಲ್ಲ. ನಿಮ್ಮಲ್ಲಿ ಸ್ಮಾರ್ಟ್​ಫೋನ್ ಇದ್ದರೆ ಅದರ ಮೂಲಕ ಮನೆಯ ಟಿವಿಯನ್ನು ನೀವು ನಿಯಂತ್ರಿಸಬಹುದು. ನಿಮ್ಮ ಸ್ಮಾರ್ಟ್‌ಫೋನ್ ಅನ್ನು ಟಿವಿ ರಿಮೋಟ್ ಆಗಿ ಬಳಸಬಹುದು.

ಹೆಚ್ಚಾಗಿ ಟಿವಿಯನ್ನು (TV) ನೋಡುವವರಿಗೆ ಸಾಮಾನ್ಯಗಿ ಒಂದು ಸಮಸ್ಯೆ ಇದ್ದೇ ಇರುತ್ತದೆ. ಅವರು ರಿಮೋಟ್ ಅನ್ನು ಎಲ್ಲೋ ಇಟ್ಟಿರುತ್ತಾರೆ. ಆದರೆ, ಅದನ್ನು ಎಲ್ಲಿ ಇರಿಸಿದ್ದಾರೆ ಎಂಬುದನ್ನು ಮರೆತುಬಿಡುತ್ತಾರೆ. ಅಥವಾ ಕೆಲವೊಮ್ಮೆ ಮನೆಯಲ್ಲಿ ಚಿಕ್ಕ ಮಕ್ಕಳು ರಿಮೋಟ್​ನಲ್ಲಿ ಆಟವಾಡುತ್ತಾರೆ ಎಂಬ ಕಾರಣಕ್ಕೆ ಅದನ್ನು ಅಡಗಿಸಿ ಇಟ್ಟು ನಂತರ ಎಲ್ಲಿ ಇಟ್ಟೆ ಎಂದು ಮರೆತು ಬಿಡುವುದೂ ಉಂಟು. ಇದರಿಂದಾಗಿ ಜನರು ಬಹಳಷ್ಟು ತೊಂದರೆಗಳನ್ನು ಅನುಭವಿಸತ್ತಾರೆ. ಈ ಸಾಲಿನಲ್ಲಿ ನೀವು ಕೂಡ ಸೇರಿದ್ದರೆ, ಉಪಯುಕ್ತವಾದ ಮಾಹಿತಿ ಇಲ್ಲೊಂದಿದೆ.

ಇನ್ನುಂದೆ ಟಿವಿ ರಿಮೋಟ್ ಕಳೆದು ಹೋದರೆ ಚಿಂತಿಸಬೇಕಿಲ್ಲ. ನಿಮ್ಮಲ್ಲಿ ಸ್ಮಾರ್ಟ್​ಫೋನ್ ಇದ್ದರೆ ಅದರ ಮೂಲಕ ಮನೆಯ ಟಿವಿಯನ್ನು ನೀವು ನಿಯಂತ್ರಿಸಬಹುದು. ನಿಮ್ಮ ಸ್ಮಾರ್ಟ್‌ಫೋನ್ ಅನ್ನು ಟಿವಿ ರಿಮೋಟ್ ಆಗಿ ಬಳಸಬಹುದು. ಗೂಗಲ್ ಟಿವಿ ಅಪ್ಲಿಕೇಶನ್‌ನ ಸಹಾಯದಿಂದ ನಿಮ್ಮ ಆಂಡ್ರಾಯ್ಡ್ ಟಿವಿಯನ್ನು ನೀವು ನಿಯಂತ್ರಿಸಬಹುದು. ಇಷ್ಟು ಮಾತ್ರವಲ್ಲದೆ ನೀವು ಆಯಂಡ್ರಾಯ್ಡ್ ಜೊತೆಗೆ ಆಯಪಲ್ ಐಫೋನ್ ನಲ್ಲೂ ಇದೇ ವಿಧಾನವನ್ನು ಅಳವಡಿಸಿಕೊಳ್ಳಬಹುದು. ಈ ಟ್ರಿಕ್ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ಮುಂದೆ ತಿಳಿಯಿರಿ.

ಆಂಡ್ರಾಯ್ಡ್ ಫೋನ್ ಅನ್ನು ರಿಮೋಟ್ ಆಗಿ ಪರಿವರ್ತಿಸುವುದು ಹೇಗೆ?
  • ಗೂಗಲ್ ಪ್ಲೇ ಸ್ಟೋರ್​ನಿಂದ ಗೂಗಲ್ ಟಿವಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿ.
  • ನಿಮ್ಮ ಟಿವಿ ಮತ್ತು ಮೊಬೈಲ್ ಅನ್ನು ಒಂದೇ ವೈ-ಫೈಗೆ ಸಂಪರ್ಕಿಸಿ. ಮನೆಯಲ್ಲಿ ವೈ-ಫೈ ಇಲ್ಲದಿದ್ದರೆ, ನೀವು ಬ್ಲೂಟೂತ್ ಮೂಲಕವೂ ಕನೆಕ್ಟ್ ಮಾಡಬಹುದು.
  • ಮೊದಲು ಅಪ್ಲಿಕೇಶನ್‌ನಲ್ಲಿ ರಿಮೋಟ್ ಬಟನ್ ಕ್ಲಿಕ್ ಮಾಡಿ.
  • ಈಗ ಸ್ಮಾರ್ಟ್​ಫೋನ್​ನಲ್ಲಿರುವ ಆಯಪ್ ಸ್ಕ್ಯಾನ್ ಮಾಡಲು ಪ್ರಾರಂಭಿಸುತ್ತದೆ. ನಿಮ್ಮ ಟಿವಿ ಕಾಣಿಸಿಕೊಂಡ ತಕ್ಷಣ ಅದನ್ನು ಆಯ್ಕೆಮಾಡಿ.
  • ನಂತರ ನಿಮ್ಮ ಟಿವಿ ಪರದೆಯ ಮೇಲೆ ಒಂದು ಕೋಡ್ ಕಾಣಿಸುತ್ತದೆ. ಅಪ್ಲಿಕೇಶನ್‌ನಲ್ಲಿ ಆ ಕೋಡ್ ಅನ್ನು ನಮೂದಿಸಿ ಮತ್ತು ಕನೆಕ್ಟ್ ಆಯ್ಕೆಯನ್ನು ಟ್ಯಾಪ್ ಮಾಡಿ.
  • ಒಮ್ಮೆ ನಿಮ್ಮ ಫೋನ್ ಕನೆಕ್ಟ್ ಆದರೆ, ನೀವು ಅದನ್ನು ಸಾಮಾನ್ಯ ರಿಮೋಟ್‌ನಂತೆ ಬಳಸಲು ಸಾಧ್ಯವಾಗುತ್ತದೆ.

ಐಫೋನ್ ಅನ್ನು ರಿಮೋಟ್ ಆಗಿ ಪರಿವರ್ತಿಸುವುದು ಹೇಗೆ?

  • ನಿಮ್ಮ ಐಫೋನ್ ಮತ್ತು ಟಿವಿಯನ್ನು ಒಂದೇ ವೈ-ಫೈಗೆ ಸಂಪರ್ಕಪಡಿಸಿ.
  • ಆಯಪ್ ಸ್ಟೋರ್‌ನಿಂದ ಗೂಗಲ್ ಟಿವಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿರಿ.
  • ಗೂಗಲ್ ಟಿವಿ ಅಪ್ಲಿಕೇಶನ್‌ನಲ್ಲಿ ಟಿವಿ ರಿಮೋಟ್ ಐಕಾನ್ ಮೇಲೆ ಟ್ಯಾಪ್ ಮಾಡಿ.
  • ನಿಮ್ಮ ಟಿವಿ ಪರದೆಯ ಮೇಲೆ 6 ಅಂಕಿಗಳ ಕೋಡ್ ಕಾಣಿಸುತ್ತದೆ. ಅಪ್ಲಿಕೇಶನ್‌ನಲ್ಲಿ ಕೋಡ್ ನಮೂದಿಸಿ ಮತ್ತು ಕನೆಕ್ಟ್ ಮಾಡಿ.
RELATED ARTICLES

ನಿಮ್ಮ ಮೊಬೈಲ್ ನಲ್ಲಿ `ಡೇಟಾ’ ಬೇಗನೆ ಖಾಲಿಯಾಗುತ್ತದೆಯೇ? ಜಸ್ಟ್ ಈ ಸೆಟ್ಟಿಂಗ್ ಆಫ್ ಮಾಡಿ!

ವಿವೇಕವಾರ್ತೆ : ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಇಂಟರ್ನೆಟ್ ಅನ್ನು ಬಳಸುತ್ತೀರಾ ಮತ್ತು ಅದು ಬೇಗನೆ ಕೊನೆಗೊಳ್ಳುವುದರಿಂದ ಅಸಮಾಧಾನಗೊಳ್ಳುತ್ತೀರಾ. ಅಂತಹ ಪರಿಸ್ಥಿತಿಯಲ್ಲಿ, ನೀವು ಇನ್ನು ಮುಂದೆ ಚಿಂತಿಸಬೇಕಾಗಿಲ್ಲ. ಈ 5 ಸಲಹೆಗಳು ಮತ್ತು ತಂತ್ರಗಳೊಂದಿಗೆ ಡೇಟಾವನ್ನು...

ಮೊಬೈಲ್ ಬಳಕೆದಾರರೇ ಗಮನಿಸಿ : ಈ 4 ಆಯಪ್ ಗಳಿದ್ದರೆ ಬೇಗ ತೆಗೆದುಹಾಕಿ, ಇಲ್ಲದಿದ್ದರೆ ನಿಮ್ಮ ಖಾತೆ ಖಾಲಿಯಾಗಬಹುದು

ವಿವೇಕವಾರ್ತೆ : ಇತ್ತೀಚಿನ ದಿನಗಳಲ್ಲಿ ಎಲ್ಲರೂ ಸ್ಮಾರ್ಟ್ಫೋನ್ಗಳಿಗೆ ಸಂಪರ್ಕ ಹೊಂದಿದ್ದಾರೆ. ಇದು ತನ್ನದೇ ಆದ ಪ್ರಯೋಜನಗಳನ್ನು ಸಹ ಹೊಂದಿದೆ, ಬ್ಯಾಂಕ್ ಸಂಬಂಧಿತ ಕೆಲಸಗಳು ಸೇರಿದಂತೆ ಇತರ ಕಾರ್ಯಗಳನ್ನು ಸಹ ನಿಮಿಷಗಳಲ್ಲಿ ಸ್ಮಾರ್ಟ್ಫೋನ್ನಿಂದ ಮಾಡಲಾಗುತ್ತದೆ. ನಿಮ್ಮ...

ಒಂದಲ್ಲ ಎರಡಲ್ಲ ಹತ್ತಾರು ರಾಣಿಯರನ್ನು ತೃಪ್ತಿಪಡಿಸ್ತಿದ್ದ ರಾಜರ ಗುಟ್ಟೇನು?

ವಿವೇಕವಾರ್ತೆ : ಮಹಾರಾಜರ ಕಥೆಗಳನ್ನು ನಾವು ಟಿವಿಯಲ್ಲಿ ನೋಡಿರ್ತೇವೆ ಇಲ್ಲವೆ ಪುಸ್ತಕದಲ್ಲಿ ಓದಿರ್ತೇವೆ. ಪ್ರಾಚೀನ ಕಾಲದಲ್ಲಿದ್ದ ರಾಜರಿಗೆ ಒಂದಲ್ಲ ಅನೇಕ ರಾಣಿಯರು ಇರುತ್ತಿದ್ದರು. ಎಲ್ಲ ರಾಣಿಯರನ್ನು ಸಂಭಾಳಿಸುತ್ತಿದ್ದ, ಶಾರೀರಿಕ ಸಂಬಂಧ ಬೆಳೆಸುತ್ತಿದ್ದ ರಾಜರು,...
- Advertisment -

Most Popular

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
error: Content is protected !!