Friday, September 22, 2023

ಎಚ್ಚರ.! ಮಹಿಳೆಗೆ ‘ಚಮ್ಮಕ್ ಚಲ್ಲೋ, ಐಟಂ, ಮಾಟಗಾತಿ’ ಎಂದ್ರೆ, ‘ಅಶ್ಲೀಲ ಸನ್ನೆ’ ಮಾಡಿದ್ರೆ 3 ವರ್ಷ ಜೈಲು ಪಾಲಾಗ್ತೀರಾ.!

ಹಿಂದೂ ಧರ್ಮದಲ್ಲಿ, ಮಹಿಳೆಯರಿಗೆ ‘ದೇವತೆ’ ಎಂಬ ಸ್ಥಾನಮಾನವನ್ನ ನೀಡಲಾಗಿದ್ದು, ಅವರನ್ನ ಗೌರವಿಸೋದು ಎಲ್ಲಾ ಭಾರತೀಯರ ಧರ್ಮವಾಗಿದೆ. ಅದು ಕರ್ತವ್ಯವೂ ಹೌದು. ಆದ್ರೆ, ಇಂದಿನ ಸಮಾಜದಲ್ಲಿ, ಜನರು ಈ ಎಲ್ಲಾ ವಿಷಯಗಳನ್ನ ಅನುಸರಿಸುತ್ತಿಲ್ಲ.

ಈಗ ಕೆಲವು ಪುಂಡರು, ಹುಡುಗಿಯರು ಮತ್ತು ಮಹಿಳೆಯರ ಬಗ್ಗೆ ಅಸಹ್ಯವಾದ ಕಾಮೆಂಟ್’ಗಳನ್ನ ಮಾಡುವುದು ಫ್ಯಾಷನ್ ಆಗಿದೆ. ಅವ್ರು ಮಹಿಳೆಯರ ಮೇಲೆ ಅಶ್ಲೀಲ ಕಾಮೆಂಟ್ ಮತ್ತು ಅಶ್ಲೀಲ ಸನ್ನೆಗಳನ್ನು ಮಾಡದಿದ್ರೆ, ಅವ್ರಿಗೆ ಸಮಾಧಾನ ಆಗೋದಿಲ್ಲ. ಪೊಲೀಸ್ ಆಡಳಿತವು ಅಂತಹ ಜನರ ಬಗ್ಗೆ ತುಂಬಾ ಕಟ್ಟುನಿಟ್ಟಾಗಿದ್ದು, ಅಗತ್ಯವಿದ್ದಾಗ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದೆ. ಆದ್ರೆ, ಇದರ ಹೊರತಾಗಿಯೂ, ಅವರು ಸುಧರಿಸದಿದ್ದಾಗ, ಅಂತಹ ಜನರಿಗೆ ಐಪಿಸಿ ಅಡಿಯಲ್ಲಿ ಕಠಿಣ ಶಿಕ್ಷೆಗೆ ಅವಕಾಶವಿದೆ ಅನ್ನೋದು ನಿಮಗೆ ತಿಳಿದಿದೆಯೇ.?

ವಾಸ್ತವವಾಗಿ, ರಾಷ್ಟ್ರೀಯ ಅಪರಾಧ ತನಿಖಾ ಬ್ಯೂರೋ (NCIB) ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಟ್ವಿಟರ್’ನಲ್ಲಿ ಪೋಸ್ಟ್ ಮಾಡಿದೆ ಮತ್ತು ಅದರ ಬಗ್ಗೆ ಪ್ರಮುಖ ಮಾಹಿತಿಯನ್ನ ನೀಡಿದೆ. ‘ ಚಮ್ಮಕ್ ಚಲ್ಲೋ, ಐಟಂ, ಮಾಟಗಾತಿ, ಚಾರಿತ್ರ್ಯಹೀನಳು ಅಂತೆಲ್ಲಾ ನಿಂದಿಸಿದ್ರೆ ಅಥವಾ ಅಶ್ಲೀಲ ಸನ್ನೆಗಳನ್ನ ತೋರಿಸಿ ಅವಮಾನಿಸಿದರೇ, ಐಪಿಸಿಯ ಸೆಕ್ಷನ್ 509 ರ ಅಡಿಯಲ್ಲಿ ಮೂರು ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಗೆ ಜೈಲು ಶಿಕ್ಷೆ ವಿಧಿಸಬಹುದು’ ಎಂದು ಟ್ವೀಟ್’ನಲ್ಲಿ ತಿಳಿಸಲಾಗಿದೆ.

ಎನ್ಸಿಐಬಿಯ ಈ ಟ್ವೀಟ್ ನೋಡಿ.!

https://twitter.com/NCIBHQ/status/1603615122836312064?t=5waBQ-EVGsDxG7Ka6nLG1A&s=19

RELATED ARTICLES

ಮೊದಲ ರಾತ್ರಿ ಪತ್ನಿಯ ಮದುವೆ ಸೀರೆಗೆ ಕೊರಳೊಡ್ಡಿದ ಯುವಕ.? ಸಾವು ನಿಗೂಢ.!

ವಿವೇಕ ವಾರ್ತೆ : ಮದುವೆಯಾದ ಎರಡೇ ದಿನದಲ್ಲಿ ಯುವಕನೊಬ್ಬ ಪತ್ನಿಯ ಮದುವೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನೈನ ಚೆಂಗಲ್ಪಟ್ಟು ಏರಿಯಾದಲ್ಲಿ ನಡೆದಿದೆ. ಮೃತ ವ್ಯಕ್ತಿ ಸರವಣನ್​ ಎಂದು ವರದಿಯಾಗಿದೆ. ಈತ...

ಮಾಡದ ತಪ್ಪಿಗೆ ಠಾಣೆಗೆ ಕರೆಸಿ ಥಳಿಸಿದ್ದ ಪೊಲೀಸರು ; ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ.!

ವಿವೇಕವಾರ್ತೆ : ಪೊಲೀಸರ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್‌ ಬರೆದಿಟ್ಟು ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ತಲಘಟ್ಟಪುರದ ನಿವಾಸಿ ನಾಗರಾಜ್(47) ಎನ್ನಲಾಗಿದೆ. ‘ವೈಯಾಲಿಕಾವಲ್‌ ಠಾಣೆ...

ಮನೆಯಲ್ಲಿದ್ದ 6 ಜನರನ್ನು ಕಟ್ಟಿ ಹಾಕಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ..!

ವಿವೇಕ ವಾಣಿ : ಹುಬ್ಬಳ್ಳಿಯ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್ ನಲ್ಲಿ ಉಲ್ಲಾಸ್ ದೊಡ್ಮನಿ ಎಂಬುವರ ಮನೆಯಲ್ಲಿ ಬಹುದೊಡ್ಡ ಕಳ್ಳತನ ನಡೆಸಲಾಗಿದೆ. ಅವರ ಮನೆಯ ಕಿಟಕಿಯ ಕಬ್ಬಿಣದ ಗ್ರಿಲ್ ಕಟ್ ಮಾಡಿದ ಕಳ್ಳರು ಮನೆಯೊಳಗೆ...
- Advertisment -

Most Popular

ಮೊದಲ ರಾತ್ರಿ ಪತ್ನಿಯ ಮದುವೆ ಸೀರೆಗೆ ಕೊರಳೊಡ್ಡಿದ ಯುವಕ.? ಸಾವು ನಿಗೂಢ.!

ವಿವೇಕ ವಾರ್ತೆ : ಮದುವೆಯಾದ ಎರಡೇ ದಿನದಲ್ಲಿ ಯುವಕನೊಬ್ಬ ಪತ್ನಿಯ ಮದುವೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನೈನ ಚೆಂಗಲ್ಪಟ್ಟು ಏರಿಯಾದಲ್ಲಿ ನಡೆದಿದೆ. ಮೃತ ವ್ಯಕ್ತಿ ಸರವಣನ್​ ಎಂದು ವರದಿಯಾಗಿದೆ. ಈತ...

ಮಾಡದ ತಪ್ಪಿಗೆ ಠಾಣೆಗೆ ಕರೆಸಿ ಥಳಿಸಿದ್ದ ಪೊಲೀಸರು ; ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ.!

ವಿವೇಕವಾರ್ತೆ : ಪೊಲೀಸರ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್‌ ಬರೆದಿಟ್ಟು ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ತಲಘಟ್ಟಪುರದ ನಿವಾಸಿ ನಾಗರಾಜ್(47) ಎನ್ನಲಾಗಿದೆ. ‘ವೈಯಾಲಿಕಾವಲ್‌ ಠಾಣೆ...

ಮನೆಯಲ್ಲಿದ್ದ 6 ಜನರನ್ನು ಕಟ್ಟಿ ಹಾಕಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ..!

ವಿವೇಕ ವಾಣಿ : ಹುಬ್ಬಳ್ಳಿಯ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್ ನಲ್ಲಿ ಉಲ್ಲಾಸ್ ದೊಡ್ಮನಿ ಎಂಬುವರ ಮನೆಯಲ್ಲಿ ಬಹುದೊಡ್ಡ ಕಳ್ಳತನ ನಡೆಸಲಾಗಿದೆ. ಅವರ ಮನೆಯ ಕಿಟಕಿಯ ಕಬ್ಬಿಣದ ಗ್ರಿಲ್ ಕಟ್ ಮಾಡಿದ ಕಳ್ಳರು ಮನೆಯೊಳಗೆ...

ಬೆಳಗಾವಿ : 4 ತಿಂಗಳ ಮಗುವನ್ನು ನೆಲಕ್ಕೆಸೆದು ಕೊಂದ ಪೊಲೀಸ್ ಕಾನ್ಸ್‌ಟೇಬಲ್ ಅಂದರ್.!

ವಿವೇಕ ವಾರ್ತೆ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಚಿಂಚಲಿ ಗ್ರಾಮದಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬ, ನಾಲ್ಕು ತಿಂಗಳ ತನ್ನ ಮಗುವನ್ನು ನೆಲಕ್ಕೆ ಎಸೆದು ಕೊಲೆ ಮಾಡಿದ ಘಟನೆ ನಡೆದಿದ್ದು, ಪರಾರಿಯಾಗಿದ್ದ ಆರೋಪಿಯನ್ನು...
error: Content is protected !!