Friday, September 22, 2023

ಜ. 8ಕ್ಕೆ ರಾಕಿಂಗ್ ‌ಸ್ಟಾರ್ ಫ್ಯಾನ್ಸ್​ಗೆ ಕಾದಿದೆ ಬಿಗ್ ಸರ್​ಪ್ರೈಸ್

ಸ್ಯಾಂಡಲ್​ವುಡ್ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗವೇ ರಾಕಿಂಗ್ ಸ್ಟಾರ್ ಯಶ್ ನಟನೆಯ ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲದಲ್ಲಿದೆ. ಯಶ್ 19ನೇ ಸಿನಿಮಾದ ಕುರಿತು ನಾನಾ ಸುದ್ದಿಗಳು ಹರಿದಾಡುತ್ತಲೇ ಇವೆ. ಯಶ್ 19ನೇ ಚಿತ್ರದ ನಿರ್ದೇಶನ ಯಾರು ಮಾಡುತ್ತಾರೆ, ಸಿನಿಮಾ ಯಾವಾಗ ಶುರುವಾಗಲಿದೆ ಎನ್ನುವ ಬಗ್ಗೆ ಹಲವು ಸುದ್ದಿಗಳು ಹಬ್ಬಿವೆ.

ಯಶ್ ನಟನೆಯ ಮುಂದಿನ ಸಿನಿಮಾವನ್ನನು ಕೆವಿಎನ್ ಪ್ರೊಡಕ್ಷನ್ ಹೌಸ್ ನಿರ್ಮಾಣ ಮಾಡಲಿದೆ ಎಂಬ ಸುದ್ದಿ ಬಹುದಿನಗಳಿಂದ ಹರಿದಾಡುತ್ತಿದೆ. ಇದರ ಜೊತೆಗೆ ನರ್ತನ್ ನಿರ್ದೇಶನ ಮಾಡಲಿದ್ದಾರೆ ಎಂಬ ಮಾತುಕೂಡ ಇದೆ. ಇದಕ್ಕೀಗ ಮತ್ತಷ್ಟು ಪುಷ್ಠಿ ಸಿಕ್ಕಿದೆ.

ಇಂದು ಸ್ಯಾಂಡಲ್​ವುಡ್​ನ ಖ್ಯಾತ ನಿರ್ದೇಶಕ ನರ್ತನ್ ಅವರ ಹುಟ್ಟುಹಬ್ಬ. ಇವರ ಜನ್ಮದಿನಕ್ಕೆ ಕೆವಿಎನ್ ಪ್ರೊಡಕ್ಷನ್ ಹೌಸ್ ತಮ್ಮ ಸೋಸಿಯಲ್ ‌ಮೀಡಿಯಾ ಪೇಜ್​ನಲ್ಲಿ ನರ್ತನ್​ಗೆ ಕೆವಿನ್ ವಿಶ್ ಮಾಡಿದೆ. ಇದರಲ್ಲಿ ನಮ್ಮ ಡೈರೆಕ್ಟರ್ ಎಂದು ಬರೆದಿರುವುದು ಕುತೂಹಲ ಕೆರಳಿಸಿದೆ. ಈ ಮೂಲಕ ಯಶ್ 19 ಬಗ್ಗೆ ಚಿಕ್ಕ ಸುಳಿವು ನೀಡಿರುವ ಕೆವಿಎನ್ ಜನವರಿ 8 ಕ್ಕೆ ಯಶ್ ಹುಟ್ಟುಹಬ್ಬದ ದಿನ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಶಿವರಾಜ್​ ಕುಮಾರ್ ಹಾಗೂ ಶ್ರೀಮುರಳಿ ನಟನೆಯ ‘ಮಫ್ತಿ’ ಸಿನಿಮಾ ನಿರ್ದೇಶನ ಮಾಡುವ ಮೂಲಕ ನರ್ತನ್ ಅವರು ಸಾಕಷ್ಟು ಗಮನ ಸೆಳೆದರು. ಅವರಿಗೆ ಈ ಚಿತ್ರ ಸಾಕಷ್ಟು ಖ್ಯಾತಿ ನೀಡಿತು. ಈಗ ಅವರು ನಿರ್ದೇಶನ ಮಾಡಲಿರುವ ಮುಂದಿನ ಚಿತ್ರ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಶುರುವಾಗಿದೆ.

RELATED ARTICLES

ರಿಷಬ್ ಬಾಲಿವುಡ್‌ ಎಂಟ್ರಿ ಫಿಕ್ಸ್: ನಿರ್ದೇಶಕರು ಯಾರು? ಕಥೆ ಏನು? ಇಲ್ಲಿದೆ ಡಿಟೈಲ್ಸ್

ವಿವೇಕವಾರ್ತೆ : 'ಕಾಂತಾರ' ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಪಟ್ಟಕ್ಕೇರಿದ ರಿಷಬ್ ಶೆಟ್ಟಿ ಈಗ ಬಾಲಿವುಡ್‌ಗೆ ಪಾದಾರ್ಪಣೆ ಕೊಡುತ್ತಿದ್ದಾರೆ. ಸದ್ಯ 'ಕಾಂತಾರ' ಸಿನಿಮಾದಲ್ಲಿ ಡಿವೈನ್ ಸ್ಟಾರ್ ಬ್ಯುಸಿಯಾಗಿದ್ದು ಆ ಬಳಿಕ ಹಿಂದಿ...

ʻಟೋಬಿʼ ಚೆನ್ನಾಗಿಲ್ಲ ಅಂದಿದ್ದಕ್ಕೆ ಮಹಿಳೆಗೆ ಅವಾಚ್ಯ ನಿಂದನೆ ; ವ್ಯಕ್ತಿಯ ವಿರುದ್ಧ ನೆಟ್ಟಿಗರ ಆಕ್ರೋಶ.!

ವಿವೇಕ ವಾರ್ತೆ : ರಾಜ್‌ ಬಿ ಶೆಟ್ಟಿ ಅಭಿನಯದ ಟೋಬಿ ಸಿನಿಮಾ ನಿನ್ನೆ (ಅ.25) ಬಿಡುಗಡೆಗೊಂಡಿದ್ದು, ಕೆಲವರು ಸಿನಿಮಾವನ್ನು ಹೊಗಳಿದರೆ ಇನ್ನು ಕೆಲವರು ಚಿತ್ರ ನಿರೀಕ್ಷಿಸಿದ ಮಟ್ಟಕ್ಕೆ ಇಲ್ಲ‌. ಒಮ್ಮೆ ನೋಡಬಹುದು ಎಂದು...

ಅತ್ಯಾಚಾರ, ಬ್ಲ್ಯಾಕ್‌ಮೇಲ್: ಕನ್ನಡದ ಖ್ಯಾತ ನಟ ಬಂಧನ

ವಿವೇಕವಾರ್ತೆ : ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ, ಅದರ ವಿಡಿಯೊ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಹಣ ಹಾಗೂ ಚಿನ್ನಾಭರಣ ಸುಲಿಗೆ ಮಾಡಿದ್ದ ಆರೋಪದಡಿ ಸಿನಿಮಾ ನಟ ವೀರೇಂದ್ರ ಬಾಬುನನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು...
- Advertisment -

Most Popular

ಮೊದಲ ರಾತ್ರಿ ಪತ್ನಿಯ ಮದುವೆ ಸೀರೆಗೆ ಕೊರಳೊಡ್ಡಿದ ಯುವಕ.? ಸಾವು ನಿಗೂಢ.!

ವಿವೇಕ ವಾರ್ತೆ : ಮದುವೆಯಾದ ಎರಡೇ ದಿನದಲ್ಲಿ ಯುವಕನೊಬ್ಬ ಪತ್ನಿಯ ಮದುವೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನೈನ ಚೆಂಗಲ್ಪಟ್ಟು ಏರಿಯಾದಲ್ಲಿ ನಡೆದಿದೆ. ಮೃತ ವ್ಯಕ್ತಿ ಸರವಣನ್​ ಎಂದು ವರದಿಯಾಗಿದೆ. ಈತ...

ಮಾಡದ ತಪ್ಪಿಗೆ ಠಾಣೆಗೆ ಕರೆಸಿ ಥಳಿಸಿದ್ದ ಪೊಲೀಸರು ; ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ.!

ವಿವೇಕವಾರ್ತೆ : ಪೊಲೀಸರ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್‌ ಬರೆದಿಟ್ಟು ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ತಲಘಟ್ಟಪುರದ ನಿವಾಸಿ ನಾಗರಾಜ್(47) ಎನ್ನಲಾಗಿದೆ. ‘ವೈಯಾಲಿಕಾವಲ್‌ ಠಾಣೆ...

ಮನೆಯಲ್ಲಿದ್ದ 6 ಜನರನ್ನು ಕಟ್ಟಿ ಹಾಕಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ..!

ವಿವೇಕ ವಾಣಿ : ಹುಬ್ಬಳ್ಳಿಯ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್ ನಲ್ಲಿ ಉಲ್ಲಾಸ್ ದೊಡ್ಮನಿ ಎಂಬುವರ ಮನೆಯಲ್ಲಿ ಬಹುದೊಡ್ಡ ಕಳ್ಳತನ ನಡೆಸಲಾಗಿದೆ. ಅವರ ಮನೆಯ ಕಿಟಕಿಯ ಕಬ್ಬಿಣದ ಗ್ರಿಲ್ ಕಟ್ ಮಾಡಿದ ಕಳ್ಳರು ಮನೆಯೊಳಗೆ...

ಬೆಳಗಾವಿ : 4 ತಿಂಗಳ ಮಗುವನ್ನು ನೆಲಕ್ಕೆಸೆದು ಕೊಂದ ಪೊಲೀಸ್ ಕಾನ್ಸ್‌ಟೇಬಲ್ ಅಂದರ್.!

ವಿವೇಕ ವಾರ್ತೆ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಚಿಂಚಲಿ ಗ್ರಾಮದಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬ, ನಾಲ್ಕು ತಿಂಗಳ ತನ್ನ ಮಗುವನ್ನು ನೆಲಕ್ಕೆ ಎಸೆದು ಕೊಲೆ ಮಾಡಿದ ಘಟನೆ ನಡೆದಿದ್ದು, ಪರಾರಿಯಾಗಿದ್ದ ಆರೋಪಿಯನ್ನು...
error: Content is protected !!