ಲಿಪ್ ಲಾಕ್ ವಿಡಿಯೋ ಮೂಲಕ ಮದುವೆ ಸುದ್ದಿ ಬಹಿರಂಗ ಪಡಿಸಿದ ಪವಿತ್ರಾ ಲೋಕೇಶ್- ನರೇಶ್

Published on

spot_img
spot_img

2022ರಲ್ಲಿ ಸಿಕ್ಕಾಪಟ್ಟೆ ಸದ್ದು ಸುದ್ದಿಯಾದವರಲ್ಲಿ ಕನ್ನಡದ ನಟಿ ಪವಿತ್ರಾ ಲೋಕೇಶ್ ಮತ್ತು ತೆಲುಗು ನಟ ನರೇಶ್ ಲವ್ ಸ್ಟೋರಿ. ತೆಲುಗು ನಟ ನರೇಶ್ ಜೊತೆ ಕನ್ನಡ ನಟಿ ಪವಿತ್ರಾ ಲೋಕೇಶ್ ಮದುವೆಯಾಗಿದ್ದಾರೆ ಎನ್ನುವ ಸುದ್ದಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು.

ಇಬ್ಬರ ಮದುವೆ ಸುದ್ದಿ ವೈರ್ ಆದ ಬೆನ್ನಲ್ಲೇ ನರೇಶ್ ಅವರ ಪತ್ನಿ ರಮ್ಯಾ ರಘುಪತಿ ರೊಚ್ಚಿಗೆದ್ದಿದ್ದರು. ಪವಿತ್ರಾ ಲೋಕೇಶ್ ವಿರುದ್ಧ ಕಿಡಿ ಕಾರಿದ್ದರು. ರಮ್ಯಾ, ನರೇಶ್ ಮತ್ತು ಪವಿತ್ರಾ ಲೋಕೇಶ್ ನಡುವಿನ ಕಿತ್ತಾಟ ಚಪ್ಪಲಿಯಲ್ಲಿ ಹೊಡೆಯುವ ಮಟ್ಟಕ್ಕೆ ಹೋಗಿತ್ತು. ದೊಡ್ಡ ವಿವಾದವನ್ನೇ ಸೃಷ್ಟಿಸಿದ್ದ ಪವಿತ್ರಾ ಮತ್ತು ನರೇಶ್ ಇದೀಗ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ವರ್ಷದ ಕೊನೆಯಲ್ಲಿ ಇಬ್ಬರೂ ಮದುವೆ ಬಗ್ಗೆ ಬಹಿರಂಗ ಪಡಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಪವಿತ್ರಾ ಲೋಕೇಶ್ ಮತ್ತು ನರೇಶ್ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ. ಈ ಮೂಲಕ ಇಬ್ಬರ ನಡುವಿನ ಸಂಬಂಧವನ್ನು ಅಧಿಕೃತಗೊಳಿಸುತ್ತಿದ್ದಾರೆ. ಅಂದಹಾಗೆ ಮದುವೆ ಬಗ್ಗೆ ಸ್ವತಃ ನರೇಶ್ ಅವರೇ ಬಹಿರಂಗ ಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ರೊಮ್ಯಾಂಟಿಕ್ ವಿಡಿಯೋ ಶೇರ್ ಮಾಡುವ ಮೂಲಕ ಮದುವೆ ಬಗ್ಗೆ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ನರೇಶ್ ಶೇರ್ ಮಾಡಿರುವ ವಿಡಿಯೋದಲ್ಲಿ ತನ್ನ ಪ್ರಪಂಚಕ್ಕೆ ಪವಿತ್ರಾ ಲೋಕೇಶ್‌ ಅವರಿಗೆ ಸ್ವಾಗತ ಕೋರಿದ್ದಾರೆ. ಕೇಕ್ ಕತ್ತರಿ ಇಬ್ಬರೂ ಒಬ್ಬರಿಗೊಬ್ಬರು ತಿನಿಸಿ ಲಿಪ್ ಕಿಸ್ ಮಾಡಿದ್ದಾರೆ. ವಿಡಿಯೋ ಕೊನೆಯಲ್ಲಿ ಸದ್ಯದಲ್ಲಿ ಇಬ್ಬರೂ ಮದುವೆಯಾಗುತ್ತಿರುವುದಾಗಿ ಹೇಳಿದ್ದಾರೆ. ಜೊತೆಗೆ ಪವಿತ್ರಾನರೇಶ್ (#PavitraNaresh) ಎಂದು ಹ್ಯಾಟ್ ಕೂಡ ಹಾಕಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ. ಈ ಮೂಲಕ ಇಬ್ಬರೂ ಮದುವೆ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆಯುತ್ತಿದ್ದಾರೆ.

ಅಂದಹಾಗೆ ಈ ಬಗ್ಗೆ ನರೇಶ್ ಪತ್ನಿ ರಮ್ಯಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನರೇಶ್ ಮತ್ತು ಪವಿತ್ರಾ ಲೋಕೇಶ್ ಮದುವೆ ಬಗ್ಗೆ ರಮ್ಯಾ ಏನು ಹೇಳುತ್ತಾರೆ ಅವರ ಮುಂದಿನ ನಿರ್ಧಾರ ಏನು ಎನ್ನುವ ಕುತೂಹಲ ಮೂಡಿಸಿದೆ. ನರೇಶ್ ಮತ್ತು ಪವಿತ್ರಾ ಲೋಕೇಶ್ ಇಬ್ಬರೂ 2023ರಲ್ಲಿ ಹಸಮಣೆ ಏರುವುದು ಕನ್ಫರ್ಮ್ ಆಗಿದೆ. ಮದುವೆ ದಿನಾಂಕ ಮತ್ತು ಸ್ಥಳ ಸದ್ಯದಲ್ಲೇ ಬಹಿರಂಗ ಪಡಿಸುವ ಸಾಧ್ಯತೆ ಇದೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!