ಪುದೀನಾ ಎಲೆಗಳ ಸೇವನೆಯಿಂದ ಇಂತಹ ಕಾಯಿಲೆಗಳನ್ನೆಲ್ಲಾ ನಿಯಂತ್ರಿಸಬಹುದು..!

Published on

spot_img
spot_img

ಪುದೀನ ಗುಣಲಕ್ಷಣಗಳು ಅಲರ್ಜಿ ಮತ್ತು ಆಸ್ತಮಾವನ್ನು ನಿವಾರಿಸುತ್ತದೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಅದಕ್ಕಾಗಿಯೇ ಪುದೀನ ಎಲೆಗಳನ್ನು ಅಡುಗೆಯಲ್ಲಿ ಬಳಸಲಾಗುತ್ತದೆ. ಔಷಧೀಯ ಗುಣಗಳನ್ನು ಹೊಂದಿರುವ ಪುದೀನ ಸೇವನೆಯಿಂದ ಹಲವು ಪ್ರಯೋಜನಗಳಿವೆ.

ಪುದೀನ ಸೇವನೆಯ ಪ್ರಯೋಜನಗಳ ಬಗ್ಗೆ ತಿಳಿಯೋಣ ..!

  • ಪುದೀನ ಅಲರ್ಜಿಯನ್ನು ನಿವಾರಿಸುತ್ತದೆ.
  • ಪುದೀನ ಉಸಿರಾಟದ ತೊಂದರೆ ನಿವಾರಿಸುತ್ತದೆ.
  • ಅಡುಗೆಯಲ್ಲಿ ಪುದೀನ ಸೇರಿಸುವುದರಿಂದ ಬಾಯಿಯಲ್ಲಿರುವ ಹಾನಿಕಾರಕ ಬ್ಯಾಕ್ಟೀರಿಯಾ ನಾಶವಾಗುತ್ತದೆ.
  • ಮಳೆಗಾಲ ಮತ್ತು ಚಳಿಗಾಲದಲ್ಲಿ ಪುದೀನ ಎಲೆಗಳನ್ನು ಸೇವಿಸುವುದರಿಂದ ಶೀತ ಮತ್ತು ಗಂಟಲು ನೋವು ನಿವಾರಣೆಯಾಗುತ್ತದೆ.
  • ಪುದೀನದಲ್ಲಿರುವ ವಿಟಮಿನ್ ಸಿ, ಡಿ, ಇ ಮತ್ತು ಬಿ ಹಾಗೂ ಕ್ಯಾಲ್ಸಿಯಂ ಮತ್ತು ರಂಜಕವು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
  • ಪ್ರತಿದಿನ ಪುದೀನ ಎಲೆಗಳ ಚಹಾ ಸೇವಿಸುವುದರಿಂದ ಜೀರ್ಣಕ್ರಿಯೆ ಸುಧಾರಿಸಬಹುದು.
  • ಚರ್ಮದಲ್ಲಿ ತುರಿಕೆ ಸಮಸ್ಯೆ ಇದ್ದಾಗ, ಪುದೀನ ಎಲೆಗಳನ್ನು ತೊಳೆದು ತುರಿಕೆ ಇರುವ ಜಾಗದಲ್ಲಿ ಉಜ್ಜುವುದರಿಂದ ಸಮಸ್ಯೆ ಪರಿಹಾರವಾಗುತ್ತದೆ.
  • ಕುದಿಯುತ್ತಿರುವ ನೀರಿಗೆ ಪುದೀನ ಎಲೆಗಳನ್ನು ಹಾಕಿ, ಸ್ವಲ್ಪ ಉಪ್ಪು ಬೆರೆಸಿ ಕಷಾಯ ತಯಾರಿಸಿ ಸೇವಿಸಿದರೆ ಗಂಟಲು ನೋವಿನ ಸಮಸ್ಯೆ ನಿವಾರಣೆಯಾಗುತ್ತದೆ.
  • ಮೊಡವೆಗಳಿಂದಮುಕ್ತಿಪುದೀನಾ ಎಲೆಗಳು ಸ್ಯಾಲಿಸಿಲಿಕ್ ಆಮ್ಲ ಮತ್ತು ವಿಟಮಿನ್ ಎ ಅನ್ನು ಹೊಂದಿರುತ್ತವೆ. ಎಣ್ಣೆಯುಕ್ತ ಚರ್ಮ ಹೊಂದಿರುವ ಜನರು ಮೊಡವೆಗಳಿಗೆ ಹೆಚ್ಚು ಒಳಗಾಗುತ್ತಾರೆ. ಇದು ಚರ್ಮದಲ್ಲಿ ತೈಲ ಉತ್ಪಾದನೆಯನ್ನು ಕಡಿಮೆ ಮಾಡುತ್ತದೆ. ಪುದೀನಾವು ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿಫಂಗಲ್ ಗುಣಗಳನ್ನು ಹೊಂದಿದೆ.ನೀವು ಪುದೀನಾ ಎಲೆ ಪೇಸ್ಟ್ ಅನ್ನು ನಿಮ್ಮ ಮುಖಕ್ಕೆ ಹಚ್ಚಿ 15 ನಿಮಿಷಗಳ ಕಾಲ ಹಾಗೆಯೇ ಬಿಟ್ಟು ನಂತರ ನೀರಿನಿಂದ ತೊಳೆಯಿರಿ. ಈ ಪೇಸ್ಟ್ ಮೊಡವೆಯ ಕಲೆಗಳನ್ನು ಕೂಡ ಕಡಿಮೆ ಮಾಡುತ್ತದೆ.
  • ಗಾಯಗಳನ್ನುಗುಣಪಡಿಸುತ್ತದೆಪುದೀನಾ ಉರಿಯೂತವನ್ನು ದೂರ ಮಾಡುವ ಗುಣಗಳನ್ನು ಹೊಂದಿದೆ. ಚರ್ಮದ ಮೇಲಿನ ಕಲೆ, ಸೊಳ್ಳೆ ಮತ್ತು ತುರಿಕೆಯನ್ನು ನಿವಾರಿಸುತ್ತಾರೆ. ಇದಕ್ಕಾಗಿ ನೀವು ಪುದೀನಾ ಎಲೆಗಳ ರಸವನ್ನು ಬಾಧಿತ ಜಾಗಕ್ಕೆ ಹಚ್ಚಬೇಕು. ಇದು ಗಾಯವನ್ನು ಗುಣಪಡಿಸುತ್ತವೆ. ಅಲ್ಲದೆ ಗಾಯದಿಂದ ಉಂಟಾಗುವ ಕಿರಿಕಿರಿಯನ್ನು ಕಡಿಮೆ ಮಾಡಲು ಪುದೀನಾ ಸಹಾಯ ಮಾಡುತ್ತದೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!