ಶಿಂಧಿಕುರಬೇಟ ಗ್ರಾಮದಲ್ಲಿ ಕಾಂಗ್ರೆಸ್ ಪ್ರಚಾರಕ್ಕೆ ಸಾಥ್ ನೀಡಿದ ಎಂಡಿಸಿ

Published on

spot_img
spot_img

ಘಟಪ್ರಭಾ- ಸಮೀಪದ ಶಿಂಧಿಕುರಬೇಟ ಗ್ರಾಮದಲ್ಲಿ ನಿನ್ನೆ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಮಹಾಂತೇಶ ಕಡಾಡಿ ಅವರ ಪರವಾಗಿ ಯುವನಾಯಕರಾದ ಮಲ್ಲಿಕಾರ್ಜುನ ದುಂಡಪ್ಪಾ ಚೌಕಾಶಿ (ಎಂಡಿಸಿ) ಅವರು ಪ್ರಚಾರ ಮಾಡಿದರು.

ಡಾ.ಮಹಾಂತೇಶ ಕಡಾಡಿ ಹಾಗೂ ಎಂಡಿಸಿ ಆತ್ಮೀಯ ಸ್ನೇಹಿತರು ಎನ್ನುವುದು ಎಲ್ಲರಿಗೂ ತಿಳಿದಿರುವ ಸಂಗತಿ, ಹಾಗೂ ಗೋಕಾಕ ಮತಕ್ಷೇತ್ರದಲ್ಲಿ ಚೌಕಾಶಿ ಕುಟುಂಬದ ಹಿಡಿತ ಸಾಕಷ್ಟಿದೆ, ಎಂಡಿಸಿಯವರ ತಂದೆ ಶ್ರೀ ದುಂಡಪ್ಪ ಚೌಕಾಶಿ ಜಿಲ್ಲಾ ಪಂಚಾಯತಿಗೆ ಆಯ್ಕೆಯಾದವರು, ಹಾಗೂ ಅವರ ಚಿಕ್ಕಮ್ಮ ಶ್ರೀಮತಿ ಕುಮಾ ಕಲ್ಲಪ್ಪ ಚೌಕಾಶಿಯವರು ಸಹ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದವರು.

ಹೀಗಾಗಿ ಘಟಪ್ರಭಾ ಸುತ್ತಮುತ್ತಲಿನ ಊರುಗಳಲ್ಲಿ ಚೌಕಾಶಿ ಕುಟುಂಬದ ರಾಜಕೀಯ ಹಿಡಿತ ಇದೆ, ಯುವಕರು ಎಂಡಿಸಿಯ ಬೆಂಬಲಕ್ಕೆ ನಿಂತಿದ್ದಾರೆ, ಸಾರಾಯಿ ಕುಡಿಯವ ಸಾಕಷ್ಟು ಯುವಕರನ್ನ ತಮ್ಮ ಸ್ವಂತ ಖರ್ಚಿನಲ್ಲಿ ನಶಾ ಮುಕ್ತಿ ಕೇಂದ್ರಕ್ಕೆ ಸೇರಿಸಿ ಯುವಕರನ್ನ ಕುಡಿತದ ಚಟದಿಂದ ದೂರ ಮಾಡಿದ್ದಾರೆ, ಇವೆಲ್ಲಾ ಎಂಡಿಸಿಯವರಿಗೆ ಪ್ಲಸ್ ಪಾಯಿಂಟ್ಸ್, ಇನ್ನೂ ಎಂಡಿಸಿಯವರು ಡಾ.ಕಡಾಡಿಯವರ ಬೆಂಬಲಕ್ಕೆ ನಿಂತಿದ್ದಾರೆ ಅಂದ್ರೆ ಘಟಪ್ರಭಾ ಹಾಗೂ ಸುತ್ತಮುತ್ತಲಿನ ಊರಿನ ಓಟು ಹಾಗೂ ಯುವಕರ ಮತಗಳು ಕಾಂಗ್ರೆಸ್ ಜೊಳಿಗೆಗೆ ಬೀಳುವುದು ಖಚಿತ ಎನ್ನುವುದು ರಾಜಕೀಯ ಲೆಕ್ಕಾಚಾರವಾಗಿದೆ..

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!