Bigg Boss ಶೋಗೆ ಗುಡ್​ ಬೈ ಹೇಳಿದ ಸುದೀಪ್​; ಕಿಚ್ಚನ ದಿಢೀರ್​ ನಿರ್ಧಾರದ ಹಿಂದಿದೆ ಈ ಕಾರಣ

WhatsApp Group Join Now
Telegram Group Join Now
Instagram Account Follow Now

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್​ಬಾಸ್​ (Bigg Boss) ನಿರೂಪಕನ (Anchor) ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ನಟ ಕಿಚ್ಚ ಸುದೀಪ್​ (Kichcha Sudeep) ಅವರು ಹೇಳಿದ್ದಾರೆ. 11 ಆವೃತ್ತಿಗಳನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟಿದ್ದ ಕಿಚ್ಚ ಸುದೀಪ್​ (Kichcha Sudeep) ಅವರು ಇದೀಗ ಕಾರ್ಯಕ್ರಮವನ್ನು ಬಿಡುವ ನಿರ್ಧಾರಕ್ಕೆ ಬಂದಿದ್ದು, ಈ ವಿಚಾರ ಅಭಿಮಾನಿಗಳಿಗೆ (Fans) ಬೇಸರವನ್ನುಂಟು ಮಾಡಿದೆ.

ಈ ಕುರಿತು ಸುದೀಪ್​ (Kichcha Sudeep) ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಟ್ವೀಟ್​ (Tweet) ಮಾಡಿದ್ದು, ಬಿಗ್ ಬಾಸ್ (Bigg Boss) ಕನ್ನಡ 11 ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾಗಳು. ಸಿಕ್ಕಿರುವ ಟಿಆರ್​ಪಿ ನೋಡಿದರೆ ನನ್ನ ಬಗ್ಗೆ ಮತ್ತು ಈ ಶೋ ಬಗ್ಗೆ ನೀವು ತೋರಿಸಿ ಪ್ರೀತಿ ಏನೆಂಬುದು ತಿಳಿಯುತ್ತದೆ. ಈ 10 ಪ್ಲಸ್​ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಚೆನ್ನಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನ ಹರಿಸುವ ಸಮಯ ಬಂದಿದೆ.

ಇದನ್ನೂ ಓದಿ : ಫೋನ್ ಪೇ, ಗೂಗಲ್ ಪೇ ನಲ್ಲಿ ಬೇರೆಯವರಿಗೆ ತಪ್ಪಾಗಿ ಹಣ ಕಳಿಸಿದ್ರೆ ವಾಪಾಸ್ ಪಡೆಯುವ ಸುಲಭ ವಿಧಾನ.!

ಕಿಚ್ಚಾ ಸುದೀಪ್‌ ಧಿಡೀರ್‌ ನಿರ್ಧಾರ..?

ನಿರೂಪಕನಾಗಿ ಇದು ನನ್ನ ಕೊನೆಯ ಬಿಗ್​ ಬಾಸ್​ (Bigg Boss). ಇಷ್ಟು ವರ್ಷಗಳ ಕಾಲ ಬಿಗ್​ ಬಾಸ್​ (Bigg Boss) ಕಾರ್ಯಕ್ರಮವನ್ನು ನೋಡಿ ನೀವು ಮತ್ತು ಕಲರ್ಸ್​ನವರು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಎಂದು ನಂಬಿದ್ದೇನೆ. ಈ ನಿರ್ಧಾರ ಅತ್ಯುತ್ತಮ ಆಗುವಂತೆ ಮಾಡೋಣ. ನಿಮ್ಮೆಲ್ಲರನ್ನೂ ನಿಮ್ಮನ್ನು ಮನರಂಜಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ಕಿಚ್ಚ ಸುದೀಪ್​ ಅವರಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿದ್ದು, ಇವುಗಳ ಚಿತ್ರೀಕರಣ ಬಾಕಿ ಉಳಿದಿವೆ, ಈ ಕಾರಣಕ್ಕಾಗಿಯೇ ಅವರು ಶೋ ತೊರೆಯುವ ನಿರ್ಧಾರಕ್ಕೆ ಬಂದಿರಬಹುದು ಎಂದು ಹೇಳಲಾಗಿದೆ. ಆದರೆ, ಅಂತಿಮವಾಗಿ ಕಿಚ್ಚ ಸುದೀಪ್​ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಬೇಕಿದೆ. 11ನೇ ಆವೃತ್ತಿ ಆರಂಭವಾಗುವುದಕ್ಕೂ ಮುನ್ನ ನಟ ಕಿಚ್ಚ ಸುದೀಪ್ (Kichcha Sudeep)​ ಈ ಬಾರಿ ಬಿಗ್​ಬಾಸ್​ ನಿರೂಪಣೆ ಮಾಡುವುದಿಲ್ಲ ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡಿತ್ತು. ಆದರೆ, ನಂತರ ನಡೆದ ಬೆಳವಣಿಗೆಯಲ್ಲಿ ಅವರು ನಿರೂಪಣೆ (Anchoring) ಮಾಡಲು ಒಪ್ಪಿದ್ದರು. ಇದೀಗ ಕಾರ್ಯಕ್ರಮವನ್ನು ತೊರೆಯುವ ನಿರ್ಧಾರವನ್ನು ಸ್ವತಃ ಸುದೀಪ್​ ಅವರೇ ಹೇಳಿದ್ದು, ವೀಕ್ಷಕರು ಕಮೆಂಟ್​ ಮೂಲಕ ಬೇಸರವನ್ನು ಹೊರಹಾಕುತ್ತಿದ್ದಾರೆ.

ಇದನ್ನೂ ನೋಡಿ : ಲಕ್ಷ್ಮೀ ಹೆಬ್ಬಾಳಕರ್‌ಗೆ ಪ್ರಪೋಸ್ ಮಾಡಿದ ಯುವಕ..! ಸಿಎಂ ಸಿದ್ದು ನಕ್ಕು ನಕ್ಕು ಸುಸ್ತು

ಭರಪೂರ ಮನರಂಜನೆಯ ಜೊತೆಗೆ ವಿವಾದಗಳನ್ನು ಹುಟ್ಟು ಹಾಕುವ ಬಿಗ್​ಬಾಸ್ (Bigg Boss)​, ಕಿರುತೆರೆ ಲೋಕದ ಜನಪ್ರಿಯ ಶೋಗಳಲ್ಲಿ ಒಂದೆಂದರೆ ತಪ್ಪಾಗಲಾರದು. ಪ್ರೀತಿ, ಸ್ನೇಹ ಸಂಬಂಧಗಳಿಗೆ ಈ ಶೋ ಬೆಸುಗೆಯಾಗುತ್ತದೆ. ಇಲ್ಲಿ ನಗು, ಕಣ್ಣೀರು, ಕೋಪ, ಮುನಿಸು ಮತ್ತು ಮನಸ್ತಾಪಗಳ ಮಿಶ್ರಣವು ಇದೆ. ಟಾಸ್ಕ್​ ನೀಡುವುದರ ಜೊತೆಗೆ ಜೀವನದ ಪಾಠವನ್ನು ಹೇಳಲಾಗುತ್ತದೆ. ಎಲ್ಲದಕ್ಕಿಂತ ಹೆಚ್ಚಾಗಿ ವಾರದ ಕೊನೆಯಲ್ಲಿ ನಟ ಕಿಚ್ಚ ಸುದೀಪ್​ ಸರಿ-ತಪ್ಪುಗಳ ತಿದ್ದುವಿಕೆ ಶೋಗೆ ಹೊಸ ಆಯಾಮವನ್ನು ತಂದುಕೊಡುತ್ತದೆ. ಈ ಎಲ್ಲ ಕಾರಣಗಳಿಂದ ಈ ಶೋ ವಿಶೇಷ ಎನಿಸಿಕೊಂಡಿದ್ದು, ಕಿರುತೆರೆ ಲೋಕದಲ್ಲಿ ಸಿಕ್ಕಾಪಟ್ಟೆ ಪಾಪ್ಯೂಲರ್​ ಆಗಿದೆ ಎಂದರೆ ತಪ್ಪಾಗಲಾರದು.

WhatsApp Group Join Now
Telegram Group Join Now
Instagram Account Follow Now

Vivek Kudarimath, Journalist With a Work Experience of 8 years in media Field, Working with vivekvarthe since 15-08-2015

Leave a Comment